Homeಮುಖಪುಟಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

ಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

- Advertisement -
- Advertisement -

ಗುಜರಾತ್‌ನ ದಾಹೋದ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂಬದಿಯಲ್ಲಿ ಆರು ವರ್ಷದ ವಿದ್ಯಾರ್ಥಿನಿಯ ಶವ ಪತ್ತೆಯಾದ ಮೂರು ದಿನಗಳ ನಂತರ, ಪೊಲೀಸರು ಭಾನುವಾರ ಶಾಲೆಯ ಪ್ರಾಂಶುಪಾಲರನ್ನು ಕೊಲೆ ಆರೋಪದ ಮೇಲೆ ಬಂಧಿಸಿದ್ದಾರೆ.

ಶಾಲೆಗೆ ಹೋಗುವ ದಾರಿಯಲ್ಲಿ 1ನೇ ತರಗತಿಯ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರು ತನ್ನ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುವ ಪ್ರಯತ್ನ ನಡೆಸಿದ್ದು, ಬಾಲಕಿ ಅದನ್ನು ವಿರೋಧಿಸಿದಾಗ ಆಕೆಯನ್ನು ಥಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗುರುವಾರ ಬೆಳಿಗ್ಗೆ ಬಾಲಕಿಯ ಗ್ರಾಮದಿಂದ ಶಾಲೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಮಗುವಿನ ತಾಯಿ ಬಾಲಕಿಯನ್ನು ಪ್ರಾಂಶುಪಾಳರ ಜತೆ ಕಳುಹಿಸಿದರು.

ವಿಚಾರಣೆ ಬಳಿಕ. ಮಗು ಗುರುವಾರ ಶಾಲೆಗೆ ಗೈರುಹಾಜರಾಗಿರುವುದು ಮತ್ತು ಶಾಲಾ ಆವರಣದಿಂದ ಹೊರಡುವ ಅವರ ಸಮಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಎದುರಿಸಿದ ನಂತರ ಪ್ರಾಂಶುಪಾಲರು ತಪ್ಪೊಪ್ಪಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಂಶುಪಾಲರು ಶಾಲಾ ಅವಧಿಯ ನಂತರ ಶವವನ್ನು ಶಾಲೆಯ ಹಿಂದೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಇಡೀ ದಿನ ಸತ್ತ ಬಾಲಕಿಯ ಶವವನ್ನು ತಮ್ಮ ಕಾರಿನಲ್ಲಿ ಬಚ್ಚಿಟ್ಟಿದ್ದರು.

ಬಾಲಕಿಯ ಸಹಪಾಠಿಗಳು, ಶಿಕ್ಷಕರು ಮತ್ತು ಗ್ರಾಮಸ್ಥರ ಮಾಃಇತಿ ಸಂಗ್ರಹಿಸಿದ 10 ವಿವಿಧ ಅಧಿಕಾರಿಗಳ ತಂಡವು ವಿವರವಾದ ತನಿಖೆ ನಡೆಸಿದೆ. ಬಳಿಕ, ಈ ಪ್ರಗತಿಯು ಹೊರಹೊಮ್ಮಿದೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ರಾಜ್‌ದೀಪ್‌ಸಿನ್ಹ್ ಝಾಲಾ ಹೇಳಿದ್ದಾರೆ.

“ವಿವರವಾದ ತನಿಖೆಯ ನಂತರ, ಮಗು ಕೊನೆಯದಾಗಿ ಶಾಲೆಯ ಪ್ರಾಂಶುಪಾಲರೊಂದಿಗೆ ಕಾಣಿಸಿಕೊಂಡಿರುವುದು ಖಚಿತವಾಯಿತು. ಆಕೆಯ ತಾಯಿ ಆಕೆಯನ್ನು ಬೆಳಿಗ್ಗೆ 10.20 ರ ಸುಮಾರಿಗೆ ತಮ್ಮ ಹಳ್ಳಿಯಲ್ಲಿ ಪ್ರಾಂಶುಪಾಲರಿಗೆ ಒಪ್ಪಿಸಿದರು. ಅವರು ತಮ್ಮ ವಾಹನದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದರು. ಇತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹೇಳಿಕೆ ಬಳಿಕ ನಾವು ಅದನ್ನು ಖಚಿತಪಡಿಸಿಕೊಂಡಿದ್ದೇವೆ; ಮಗು ಗುರುವಾರ ಶಾಲೆಗೆ ಹೋಗಲಿಲ್ಲ ಎಂದು ಹೇಳಿದ್ದಾರೆ.

ಆರಂಭದಲ್ಲಿ ಮಗುವನ್ನು ಶಾಲೆಗೆ ಬಿಟ್ಟ ನಂತರ ಮಗು ಎಲ್ಲಿಗೋ ಹೋಗಿದೆ ಎಂದು ಪ್ರಿನ್ಸಿಪಾಲ್ ಹೇಳಿದ್ದರು. ಆದರೆ, ನಂತರ ತಪ್ಪೊಪ್ಪಿಕೊಂಡರು ಎಂದು ಝಾಲಾ ಹೇಳಿದರು.

ಪೊಲೀಸರ ಪ್ರಕಾರ, “ತನಗೆ ತರಗತಿ ಶಿಕ್ಷಕರಿಂದ ಸಂಜೆ ಫೋನ್ ಕರೆ ಬಂದಿತ್ತು, ಮಗು ಕಾಣೆಯಾಗಿದೆ ಎಂದು ಹೇಳುವ ಮೂಲಕ ಪ್ರಾಂಶುಪಾಲರು ತನಿಖಾ ಅಧಿಕಾರಿಗಳನ್ನು ದಾರಿತಪ್ಪಿಸಲು ಪ್ರಯತ್ನಿಸಿದರು. ಅವರು ಪೊಲೀಸರಿಗೆ ಈ ಬಗ್ಗೆ ಮನವರಿಕೆ ಮಾಡಲು ಸಾಧ್ಯವಾಗದ ಕಾರಣ, ಅವರ ಮೊಬೈಲ್ ಫೋನ್ ಸ್ಥಳದ ಬಗ್ಗೆ ತಾಂತ್ರಿಕ ತನಿಖೆಯನ್ನು ಪ್ರಾರಂಭಿಸಲಾಯಿತು ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

“ಅವರು ತಡವಾಗಿ ಶಾಲೆಯನ್ನು ತೊರೆದ ಸಮಯದಿಂದ, ಏನೋ ತಪ್ಪಾಗಿದೆ ಎಂಬ ಸುಳಿವು ನಮಗೆ ಸಿಕ್ಕಿತು. ವಿಚಾರಣೆಯ ಸಮಯದಲ್ಲಿ, ತನ್ನ ಕಾರಿನಲ್ಲಿ ಶಾಲೆಗೆ ಹೋಗುವ ದಾರಿಯಲ್ಲಿ ಬಲಿಪಶುವಿಗೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದಾಗಿ ಒಪ್ಪಿಕೊಂಡನು. ಆದರೆ, ಬಾಲಕಿ ಪ್ರತಿರೋಧ ವ್ಯಕ್ತಪಡಿಸಿ ಕಿರುಚಲು ಆರಂಭಿಸಿದ್ದಳು. ಹುಡುಗಿಯನ್ನು ಮೌನಗೊಳಿಸಲು, ಅವನು ಆಕೆಯನ್ನು ಹೊಡೆದನು” ಎಂದು ಝಾಲಾ ಹೇಳಿದರು.

“ಕೊಲೆ ಬಳಿಕ ಪ್ರಾಂಶುಪಾಲರು ಎಂದಿನಂತೆ ಶಾಲೆಯಲ್ಲಿ ತಮ್ಮ ದಿನವನ್ನು ಕಳೆದರು. ಇಡೀ ದಿನ ಹುಡುಗಿಯ ದೇಹವನ್ನು ಕಾರಿನಲ್ಲಿ ಇರಿಸಿದರು. ಶಾಲೆಯಿಂದ ಎಲ್ಲರೂ ತೆರಳಿದ ನಂತರ, ಆತ ತನ್ನ ಕಾರಿನಿಂದ ಶವವನ್ನು ಹೊರತೆಗೆದು ಹಿತ್ತಲಿನಲ್ಲಿ ಎಸೆದನು. ಅವನು ತನ್ನ ಕಾರಿನಿಂದ ಅವಳ ಚಪ್ಪಲಿಗಳನ್ನು ಹೊರತೆಗೆದು, ಅವುಗಳನ್ನು ತರಗತಿಯ ಹೊರಗೆ ಇಟ್ಟಿದ್ದಾನೆ. ಅವಳ ಬ್ಯಾಗ್ ಅನ್ನು ತರಗತಿಯಲ್ಲಿಯೇ ಇರಿಸಿದ್ದನು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಾಂಶುಪಾಲರ ಮೊಬೈಲ್ ಫೋನ್‌ನ ತಾಂತ್ರಿಕ ತನಿಖೆ ನಡೆಸಲಾಗಿದ್ದು, ಅವರು ಗುರುವಾರ ಬೆಳಿಗ್ಗೆ ಶಾಲೆಗೆ ತಲುಪಲು “ಸಾಮಾನ್ಯಕ್ಕಿಂತ ಹೆಚ್ಚು ಸಮಯ” ತೆಗೆದುಕೊಂಡಿದ್ದಾರೆ ಎಂದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಸಹಪಾಠಿಗಳು ಹಾಗೂ ಶಿಕ್ಷಕರಿಂದ ಪೊಲೀಸರು ಆಕೆ ಶಾಲೆಗೆ ಬಂದಿಲ್ಲ, ಶಾಲಾ ಸಮಯದಲ್ಲಿ ಹಿತ್ತಲಲ್ಲಿ ಆಕೆಯ ಶವ ಕಾಣಿಸಿಲ್ಲ ಎಂದು ತಿಳಿದು ಬಂದಿದೆ. “ಇದಲ್ಲದೆ, ಬಲಿಪಶುವಿನ ಪಾದರಕ್ಷೆಗಳು ಮತ್ತು ಬ್ಯಾಗ್ ಸಹ ದಿನವಿಡೀ ತರಗತಿಯಲ್ಲಿ ಇರಲಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹೇಳಿದರು’ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ; ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...