Homeಮುಖಪುಟಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

ಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

- Advertisement -
- Advertisement -

ಗುಜರಾತ್‌ನ ದಾಹೋದ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂಬದಿಯಲ್ಲಿ ಆರು ವರ್ಷದ ವಿದ್ಯಾರ್ಥಿನಿಯ ಶವ ಪತ್ತೆಯಾದ ಮೂರು ದಿನಗಳ ನಂತರ, ಪೊಲೀಸರು ಭಾನುವಾರ ಶಾಲೆಯ ಪ್ರಾಂಶುಪಾಲರನ್ನು ಕೊಲೆ ಆರೋಪದ ಮೇಲೆ ಬಂಧಿಸಿದ್ದಾರೆ.

ಶಾಲೆಗೆ ಹೋಗುವ ದಾರಿಯಲ್ಲಿ 1ನೇ ತರಗತಿಯ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರು ತನ್ನ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುವ ಪ್ರಯತ್ನ ನಡೆಸಿದ್ದು, ಬಾಲಕಿ ಅದನ್ನು ವಿರೋಧಿಸಿದಾಗ ಆಕೆಯನ್ನು ಥಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗುರುವಾರ ಬೆಳಿಗ್ಗೆ ಬಾಲಕಿಯ ಗ್ರಾಮದಿಂದ ಶಾಲೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಮಗುವಿನ ತಾಯಿ ಬಾಲಕಿಯನ್ನು ಪ್ರಾಂಶುಪಾಳರ ಜತೆ ಕಳುಹಿಸಿದರು.

ವಿಚಾರಣೆ ಬಳಿಕ. ಮಗು ಗುರುವಾರ ಶಾಲೆಗೆ ಗೈರುಹಾಜರಾಗಿರುವುದು ಮತ್ತು ಶಾಲಾ ಆವರಣದಿಂದ ಹೊರಡುವ ಅವರ ಸಮಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಎದುರಿಸಿದ ನಂತರ ಪ್ರಾಂಶುಪಾಲರು ತಪ್ಪೊಪ್ಪಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಂಶುಪಾಲರು ಶಾಲಾ ಅವಧಿಯ ನಂತರ ಶವವನ್ನು ಶಾಲೆಯ ಹಿಂದೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಇಡೀ ದಿನ ಸತ್ತ ಬಾಲಕಿಯ ಶವವನ್ನು ತಮ್ಮ ಕಾರಿನಲ್ಲಿ ಬಚ್ಚಿಟ್ಟಿದ್ದರು.

ಬಾಲಕಿಯ ಸಹಪಾಠಿಗಳು, ಶಿಕ್ಷಕರು ಮತ್ತು ಗ್ರಾಮಸ್ಥರ ಮಾಃಇತಿ ಸಂಗ್ರಹಿಸಿದ 10 ವಿವಿಧ ಅಧಿಕಾರಿಗಳ ತಂಡವು ವಿವರವಾದ ತನಿಖೆ ನಡೆಸಿದೆ. ಬಳಿಕ, ಈ ಪ್ರಗತಿಯು ಹೊರಹೊಮ್ಮಿದೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ರಾಜ್‌ದೀಪ್‌ಸಿನ್ಹ್ ಝಾಲಾ ಹೇಳಿದ್ದಾರೆ.

“ವಿವರವಾದ ತನಿಖೆಯ ನಂತರ, ಮಗು ಕೊನೆಯದಾಗಿ ಶಾಲೆಯ ಪ್ರಾಂಶುಪಾಲರೊಂದಿಗೆ ಕಾಣಿಸಿಕೊಂಡಿರುವುದು ಖಚಿತವಾಯಿತು. ಆಕೆಯ ತಾಯಿ ಆಕೆಯನ್ನು ಬೆಳಿಗ್ಗೆ 10.20 ರ ಸುಮಾರಿಗೆ ತಮ್ಮ ಹಳ್ಳಿಯಲ್ಲಿ ಪ್ರಾಂಶುಪಾಲರಿಗೆ ಒಪ್ಪಿಸಿದರು. ಅವರು ತಮ್ಮ ವಾಹನದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದರು. ಇತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹೇಳಿಕೆ ಬಳಿಕ ನಾವು ಅದನ್ನು ಖಚಿತಪಡಿಸಿಕೊಂಡಿದ್ದೇವೆ; ಮಗು ಗುರುವಾರ ಶಾಲೆಗೆ ಹೋಗಲಿಲ್ಲ ಎಂದು ಹೇಳಿದ್ದಾರೆ.

ಆರಂಭದಲ್ಲಿ ಮಗುವನ್ನು ಶಾಲೆಗೆ ಬಿಟ್ಟ ನಂತರ ಮಗು ಎಲ್ಲಿಗೋ ಹೋಗಿದೆ ಎಂದು ಪ್ರಿನ್ಸಿಪಾಲ್ ಹೇಳಿದ್ದರು. ಆದರೆ, ನಂತರ ತಪ್ಪೊಪ್ಪಿಕೊಂಡರು ಎಂದು ಝಾಲಾ ಹೇಳಿದರು.

ಪೊಲೀಸರ ಪ್ರಕಾರ, “ತನಗೆ ತರಗತಿ ಶಿಕ್ಷಕರಿಂದ ಸಂಜೆ ಫೋನ್ ಕರೆ ಬಂದಿತ್ತು, ಮಗು ಕಾಣೆಯಾಗಿದೆ ಎಂದು ಹೇಳುವ ಮೂಲಕ ಪ್ರಾಂಶುಪಾಲರು ತನಿಖಾ ಅಧಿಕಾರಿಗಳನ್ನು ದಾರಿತಪ್ಪಿಸಲು ಪ್ರಯತ್ನಿಸಿದರು. ಅವರು ಪೊಲೀಸರಿಗೆ ಈ ಬಗ್ಗೆ ಮನವರಿಕೆ ಮಾಡಲು ಸಾಧ್ಯವಾಗದ ಕಾರಣ, ಅವರ ಮೊಬೈಲ್ ಫೋನ್ ಸ್ಥಳದ ಬಗ್ಗೆ ತಾಂತ್ರಿಕ ತನಿಖೆಯನ್ನು ಪ್ರಾರಂಭಿಸಲಾಯಿತು ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

“ಅವರು ತಡವಾಗಿ ಶಾಲೆಯನ್ನು ತೊರೆದ ಸಮಯದಿಂದ, ಏನೋ ತಪ್ಪಾಗಿದೆ ಎಂಬ ಸುಳಿವು ನಮಗೆ ಸಿಕ್ಕಿತು. ವಿಚಾರಣೆಯ ಸಮಯದಲ್ಲಿ, ತನ್ನ ಕಾರಿನಲ್ಲಿ ಶಾಲೆಗೆ ಹೋಗುವ ದಾರಿಯಲ್ಲಿ ಬಲಿಪಶುವಿಗೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದಾಗಿ ಒಪ್ಪಿಕೊಂಡನು. ಆದರೆ, ಬಾಲಕಿ ಪ್ರತಿರೋಧ ವ್ಯಕ್ತಪಡಿಸಿ ಕಿರುಚಲು ಆರಂಭಿಸಿದ್ದಳು. ಹುಡುಗಿಯನ್ನು ಮೌನಗೊಳಿಸಲು, ಅವನು ಆಕೆಯನ್ನು ಹೊಡೆದನು” ಎಂದು ಝಾಲಾ ಹೇಳಿದರು.

“ಕೊಲೆ ಬಳಿಕ ಪ್ರಾಂಶುಪಾಲರು ಎಂದಿನಂತೆ ಶಾಲೆಯಲ್ಲಿ ತಮ್ಮ ದಿನವನ್ನು ಕಳೆದರು. ಇಡೀ ದಿನ ಹುಡುಗಿಯ ದೇಹವನ್ನು ಕಾರಿನಲ್ಲಿ ಇರಿಸಿದರು. ಶಾಲೆಯಿಂದ ಎಲ್ಲರೂ ತೆರಳಿದ ನಂತರ, ಆತ ತನ್ನ ಕಾರಿನಿಂದ ಶವವನ್ನು ಹೊರತೆಗೆದು ಹಿತ್ತಲಿನಲ್ಲಿ ಎಸೆದನು. ಅವನು ತನ್ನ ಕಾರಿನಿಂದ ಅವಳ ಚಪ್ಪಲಿಗಳನ್ನು ಹೊರತೆಗೆದು, ಅವುಗಳನ್ನು ತರಗತಿಯ ಹೊರಗೆ ಇಟ್ಟಿದ್ದಾನೆ. ಅವಳ ಬ್ಯಾಗ್ ಅನ್ನು ತರಗತಿಯಲ್ಲಿಯೇ ಇರಿಸಿದ್ದನು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಾಂಶುಪಾಲರ ಮೊಬೈಲ್ ಫೋನ್‌ನ ತಾಂತ್ರಿಕ ತನಿಖೆ ನಡೆಸಲಾಗಿದ್ದು, ಅವರು ಗುರುವಾರ ಬೆಳಿಗ್ಗೆ ಶಾಲೆಗೆ ತಲುಪಲು “ಸಾಮಾನ್ಯಕ್ಕಿಂತ ಹೆಚ್ಚು ಸಮಯ” ತೆಗೆದುಕೊಂಡಿದ್ದಾರೆ ಎಂದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಸಹಪಾಠಿಗಳು ಹಾಗೂ ಶಿಕ್ಷಕರಿಂದ ಪೊಲೀಸರು ಆಕೆ ಶಾಲೆಗೆ ಬಂದಿಲ್ಲ, ಶಾಲಾ ಸಮಯದಲ್ಲಿ ಹಿತ್ತಲಲ್ಲಿ ಆಕೆಯ ಶವ ಕಾಣಿಸಿಲ್ಲ ಎಂದು ತಿಳಿದು ಬಂದಿದೆ. “ಇದಲ್ಲದೆ, ಬಲಿಪಶುವಿನ ಪಾದರಕ್ಷೆಗಳು ಮತ್ತು ಬ್ಯಾಗ್ ಸಹ ದಿನವಿಡೀ ತರಗತಿಯಲ್ಲಿ ಇರಲಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹೇಳಿದರು’ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ; ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...