Homeಮುಖಪುಟಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

ಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

- Advertisement -
- Advertisement -

ಗುಜರಾತ್‌ನ ದಾಹೋದ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂಬದಿಯಲ್ಲಿ ಆರು ವರ್ಷದ ವಿದ್ಯಾರ್ಥಿನಿಯ ಶವ ಪತ್ತೆಯಾದ ಮೂರು ದಿನಗಳ ನಂತರ, ಪೊಲೀಸರು ಭಾನುವಾರ ಶಾಲೆಯ ಪ್ರಾಂಶುಪಾಲರನ್ನು ಕೊಲೆ ಆರೋಪದ ಮೇಲೆ ಬಂಧಿಸಿದ್ದಾರೆ.

ಶಾಲೆಗೆ ಹೋಗುವ ದಾರಿಯಲ್ಲಿ 1ನೇ ತರಗತಿಯ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರು ತನ್ನ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುವ ಪ್ರಯತ್ನ ನಡೆಸಿದ್ದು, ಬಾಲಕಿ ಅದನ್ನು ವಿರೋಧಿಸಿದಾಗ ಆಕೆಯನ್ನು ಥಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗುರುವಾರ ಬೆಳಿಗ್ಗೆ ಬಾಲಕಿಯ ಗ್ರಾಮದಿಂದ ಶಾಲೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಮಗುವಿನ ತಾಯಿ ಬಾಲಕಿಯನ್ನು ಪ್ರಾಂಶುಪಾಳರ ಜತೆ ಕಳುಹಿಸಿದರು.

ವಿಚಾರಣೆ ಬಳಿಕ. ಮಗು ಗುರುವಾರ ಶಾಲೆಗೆ ಗೈರುಹಾಜರಾಗಿರುವುದು ಮತ್ತು ಶಾಲಾ ಆವರಣದಿಂದ ಹೊರಡುವ ಅವರ ಸಮಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಎದುರಿಸಿದ ನಂತರ ಪ್ರಾಂಶುಪಾಲರು ತಪ್ಪೊಪ್ಪಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಂಶುಪಾಲರು ಶಾಲಾ ಅವಧಿಯ ನಂತರ ಶವವನ್ನು ಶಾಲೆಯ ಹಿಂದೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಇಡೀ ದಿನ ಸತ್ತ ಬಾಲಕಿಯ ಶವವನ್ನು ತಮ್ಮ ಕಾರಿನಲ್ಲಿ ಬಚ್ಚಿಟ್ಟಿದ್ದರು.

ಬಾಲಕಿಯ ಸಹಪಾಠಿಗಳು, ಶಿಕ್ಷಕರು ಮತ್ತು ಗ್ರಾಮಸ್ಥರ ಮಾಃಇತಿ ಸಂಗ್ರಹಿಸಿದ 10 ವಿವಿಧ ಅಧಿಕಾರಿಗಳ ತಂಡವು ವಿವರವಾದ ತನಿಖೆ ನಡೆಸಿದೆ. ಬಳಿಕ, ಈ ಪ್ರಗತಿಯು ಹೊರಹೊಮ್ಮಿದೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ರಾಜ್‌ದೀಪ್‌ಸಿನ್ಹ್ ಝಾಲಾ ಹೇಳಿದ್ದಾರೆ.

“ವಿವರವಾದ ತನಿಖೆಯ ನಂತರ, ಮಗು ಕೊನೆಯದಾಗಿ ಶಾಲೆಯ ಪ್ರಾಂಶುಪಾಲರೊಂದಿಗೆ ಕಾಣಿಸಿಕೊಂಡಿರುವುದು ಖಚಿತವಾಯಿತು. ಆಕೆಯ ತಾಯಿ ಆಕೆಯನ್ನು ಬೆಳಿಗ್ಗೆ 10.20 ರ ಸುಮಾರಿಗೆ ತಮ್ಮ ಹಳ್ಳಿಯಲ್ಲಿ ಪ್ರಾಂಶುಪಾಲರಿಗೆ ಒಪ್ಪಿಸಿದರು. ಅವರು ತಮ್ಮ ವಾಹನದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದರು. ಇತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹೇಳಿಕೆ ಬಳಿಕ ನಾವು ಅದನ್ನು ಖಚಿತಪಡಿಸಿಕೊಂಡಿದ್ದೇವೆ; ಮಗು ಗುರುವಾರ ಶಾಲೆಗೆ ಹೋಗಲಿಲ್ಲ ಎಂದು ಹೇಳಿದ್ದಾರೆ.

ಆರಂಭದಲ್ಲಿ ಮಗುವನ್ನು ಶಾಲೆಗೆ ಬಿಟ್ಟ ನಂತರ ಮಗು ಎಲ್ಲಿಗೋ ಹೋಗಿದೆ ಎಂದು ಪ್ರಿನ್ಸಿಪಾಲ್ ಹೇಳಿದ್ದರು. ಆದರೆ, ನಂತರ ತಪ್ಪೊಪ್ಪಿಕೊಂಡರು ಎಂದು ಝಾಲಾ ಹೇಳಿದರು.

ಪೊಲೀಸರ ಪ್ರಕಾರ, “ತನಗೆ ತರಗತಿ ಶಿಕ್ಷಕರಿಂದ ಸಂಜೆ ಫೋನ್ ಕರೆ ಬಂದಿತ್ತು, ಮಗು ಕಾಣೆಯಾಗಿದೆ ಎಂದು ಹೇಳುವ ಮೂಲಕ ಪ್ರಾಂಶುಪಾಲರು ತನಿಖಾ ಅಧಿಕಾರಿಗಳನ್ನು ದಾರಿತಪ್ಪಿಸಲು ಪ್ರಯತ್ನಿಸಿದರು. ಅವರು ಪೊಲೀಸರಿಗೆ ಈ ಬಗ್ಗೆ ಮನವರಿಕೆ ಮಾಡಲು ಸಾಧ್ಯವಾಗದ ಕಾರಣ, ಅವರ ಮೊಬೈಲ್ ಫೋನ್ ಸ್ಥಳದ ಬಗ್ಗೆ ತಾಂತ್ರಿಕ ತನಿಖೆಯನ್ನು ಪ್ರಾರಂಭಿಸಲಾಯಿತು ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

“ಅವರು ತಡವಾಗಿ ಶಾಲೆಯನ್ನು ತೊರೆದ ಸಮಯದಿಂದ, ಏನೋ ತಪ್ಪಾಗಿದೆ ಎಂಬ ಸುಳಿವು ನಮಗೆ ಸಿಕ್ಕಿತು. ವಿಚಾರಣೆಯ ಸಮಯದಲ್ಲಿ, ತನ್ನ ಕಾರಿನಲ್ಲಿ ಶಾಲೆಗೆ ಹೋಗುವ ದಾರಿಯಲ್ಲಿ ಬಲಿಪಶುವಿಗೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದಾಗಿ ಒಪ್ಪಿಕೊಂಡನು. ಆದರೆ, ಬಾಲಕಿ ಪ್ರತಿರೋಧ ವ್ಯಕ್ತಪಡಿಸಿ ಕಿರುಚಲು ಆರಂಭಿಸಿದ್ದಳು. ಹುಡುಗಿಯನ್ನು ಮೌನಗೊಳಿಸಲು, ಅವನು ಆಕೆಯನ್ನು ಹೊಡೆದನು” ಎಂದು ಝಾಲಾ ಹೇಳಿದರು.

“ಕೊಲೆ ಬಳಿಕ ಪ್ರಾಂಶುಪಾಲರು ಎಂದಿನಂತೆ ಶಾಲೆಯಲ್ಲಿ ತಮ್ಮ ದಿನವನ್ನು ಕಳೆದರು. ಇಡೀ ದಿನ ಹುಡುಗಿಯ ದೇಹವನ್ನು ಕಾರಿನಲ್ಲಿ ಇರಿಸಿದರು. ಶಾಲೆಯಿಂದ ಎಲ್ಲರೂ ತೆರಳಿದ ನಂತರ, ಆತ ತನ್ನ ಕಾರಿನಿಂದ ಶವವನ್ನು ಹೊರತೆಗೆದು ಹಿತ್ತಲಿನಲ್ಲಿ ಎಸೆದನು. ಅವನು ತನ್ನ ಕಾರಿನಿಂದ ಅವಳ ಚಪ್ಪಲಿಗಳನ್ನು ಹೊರತೆಗೆದು, ಅವುಗಳನ್ನು ತರಗತಿಯ ಹೊರಗೆ ಇಟ್ಟಿದ್ದಾನೆ. ಅವಳ ಬ್ಯಾಗ್ ಅನ್ನು ತರಗತಿಯಲ್ಲಿಯೇ ಇರಿಸಿದ್ದನು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಾಂಶುಪಾಲರ ಮೊಬೈಲ್ ಫೋನ್‌ನ ತಾಂತ್ರಿಕ ತನಿಖೆ ನಡೆಸಲಾಗಿದ್ದು, ಅವರು ಗುರುವಾರ ಬೆಳಿಗ್ಗೆ ಶಾಲೆಗೆ ತಲುಪಲು “ಸಾಮಾನ್ಯಕ್ಕಿಂತ ಹೆಚ್ಚು ಸಮಯ” ತೆಗೆದುಕೊಂಡಿದ್ದಾರೆ ಎಂದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಸಹಪಾಠಿಗಳು ಹಾಗೂ ಶಿಕ್ಷಕರಿಂದ ಪೊಲೀಸರು ಆಕೆ ಶಾಲೆಗೆ ಬಂದಿಲ್ಲ, ಶಾಲಾ ಸಮಯದಲ್ಲಿ ಹಿತ್ತಲಲ್ಲಿ ಆಕೆಯ ಶವ ಕಾಣಿಸಿಲ್ಲ ಎಂದು ತಿಳಿದು ಬಂದಿದೆ. “ಇದಲ್ಲದೆ, ಬಲಿಪಶುವಿನ ಪಾದರಕ್ಷೆಗಳು ಮತ್ತು ಬ್ಯಾಗ್ ಸಹ ದಿನವಿಡೀ ತರಗತಿಯಲ್ಲಿ ಇರಲಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹೇಳಿದರು’ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ; ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...