Homeಮುಖಪುಟಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

ಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

- Advertisement -
- Advertisement -

ಗುಜರಾತ್‌ನ ದಾಹೋದ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂಬದಿಯಲ್ಲಿ ಆರು ವರ್ಷದ ವಿದ್ಯಾರ್ಥಿನಿಯ ಶವ ಪತ್ತೆಯಾದ ಮೂರು ದಿನಗಳ ನಂತರ, ಪೊಲೀಸರು ಭಾನುವಾರ ಶಾಲೆಯ ಪ್ರಾಂಶುಪಾಲರನ್ನು ಕೊಲೆ ಆರೋಪದ ಮೇಲೆ ಬಂಧಿಸಿದ್ದಾರೆ.

ಶಾಲೆಗೆ ಹೋಗುವ ದಾರಿಯಲ್ಲಿ 1ನೇ ತರಗತಿಯ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರು ತನ್ನ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುವ ಪ್ರಯತ್ನ ನಡೆಸಿದ್ದು, ಬಾಲಕಿ ಅದನ್ನು ವಿರೋಧಿಸಿದಾಗ ಆಕೆಯನ್ನು ಥಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗುರುವಾರ ಬೆಳಿಗ್ಗೆ ಬಾಲಕಿಯ ಗ್ರಾಮದಿಂದ ಶಾಲೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಮಗುವಿನ ತಾಯಿ ಬಾಲಕಿಯನ್ನು ಪ್ರಾಂಶುಪಾಳರ ಜತೆ ಕಳುಹಿಸಿದರು.

ವಿಚಾರಣೆ ಬಳಿಕ. ಮಗು ಗುರುವಾರ ಶಾಲೆಗೆ ಗೈರುಹಾಜರಾಗಿರುವುದು ಮತ್ತು ಶಾಲಾ ಆವರಣದಿಂದ ಹೊರಡುವ ಅವರ ಸಮಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಎದುರಿಸಿದ ನಂತರ ಪ್ರಾಂಶುಪಾಲರು ತಪ್ಪೊಪ್ಪಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಂಶುಪಾಲರು ಶಾಲಾ ಅವಧಿಯ ನಂತರ ಶವವನ್ನು ಶಾಲೆಯ ಹಿಂದೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಇಡೀ ದಿನ ಸತ್ತ ಬಾಲಕಿಯ ಶವವನ್ನು ತಮ್ಮ ಕಾರಿನಲ್ಲಿ ಬಚ್ಚಿಟ್ಟಿದ್ದರು.

ಬಾಲಕಿಯ ಸಹಪಾಠಿಗಳು, ಶಿಕ್ಷಕರು ಮತ್ತು ಗ್ರಾಮಸ್ಥರ ಮಾಃಇತಿ ಸಂಗ್ರಹಿಸಿದ 10 ವಿವಿಧ ಅಧಿಕಾರಿಗಳ ತಂಡವು ವಿವರವಾದ ತನಿಖೆ ನಡೆಸಿದೆ. ಬಳಿಕ, ಈ ಪ್ರಗತಿಯು ಹೊರಹೊಮ್ಮಿದೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ರಾಜ್‌ದೀಪ್‌ಸಿನ್ಹ್ ಝಾಲಾ ಹೇಳಿದ್ದಾರೆ.

“ವಿವರವಾದ ತನಿಖೆಯ ನಂತರ, ಮಗು ಕೊನೆಯದಾಗಿ ಶಾಲೆಯ ಪ್ರಾಂಶುಪಾಲರೊಂದಿಗೆ ಕಾಣಿಸಿಕೊಂಡಿರುವುದು ಖಚಿತವಾಯಿತು. ಆಕೆಯ ತಾಯಿ ಆಕೆಯನ್ನು ಬೆಳಿಗ್ಗೆ 10.20 ರ ಸುಮಾರಿಗೆ ತಮ್ಮ ಹಳ್ಳಿಯಲ್ಲಿ ಪ್ರಾಂಶುಪಾಲರಿಗೆ ಒಪ್ಪಿಸಿದರು. ಅವರು ತಮ್ಮ ವಾಹನದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದರು. ಇತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹೇಳಿಕೆ ಬಳಿಕ ನಾವು ಅದನ್ನು ಖಚಿತಪಡಿಸಿಕೊಂಡಿದ್ದೇವೆ; ಮಗು ಗುರುವಾರ ಶಾಲೆಗೆ ಹೋಗಲಿಲ್ಲ ಎಂದು ಹೇಳಿದ್ದಾರೆ.

ಆರಂಭದಲ್ಲಿ ಮಗುವನ್ನು ಶಾಲೆಗೆ ಬಿಟ್ಟ ನಂತರ ಮಗು ಎಲ್ಲಿಗೋ ಹೋಗಿದೆ ಎಂದು ಪ್ರಿನ್ಸಿಪಾಲ್ ಹೇಳಿದ್ದರು. ಆದರೆ, ನಂತರ ತಪ್ಪೊಪ್ಪಿಕೊಂಡರು ಎಂದು ಝಾಲಾ ಹೇಳಿದರು.

ಪೊಲೀಸರ ಪ್ರಕಾರ, “ತನಗೆ ತರಗತಿ ಶಿಕ್ಷಕರಿಂದ ಸಂಜೆ ಫೋನ್ ಕರೆ ಬಂದಿತ್ತು, ಮಗು ಕಾಣೆಯಾಗಿದೆ ಎಂದು ಹೇಳುವ ಮೂಲಕ ಪ್ರಾಂಶುಪಾಲರು ತನಿಖಾ ಅಧಿಕಾರಿಗಳನ್ನು ದಾರಿತಪ್ಪಿಸಲು ಪ್ರಯತ್ನಿಸಿದರು. ಅವರು ಪೊಲೀಸರಿಗೆ ಈ ಬಗ್ಗೆ ಮನವರಿಕೆ ಮಾಡಲು ಸಾಧ್ಯವಾಗದ ಕಾರಣ, ಅವರ ಮೊಬೈಲ್ ಫೋನ್ ಸ್ಥಳದ ಬಗ್ಗೆ ತಾಂತ್ರಿಕ ತನಿಖೆಯನ್ನು ಪ್ರಾರಂಭಿಸಲಾಯಿತು ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

“ಅವರು ತಡವಾಗಿ ಶಾಲೆಯನ್ನು ತೊರೆದ ಸಮಯದಿಂದ, ಏನೋ ತಪ್ಪಾಗಿದೆ ಎಂಬ ಸುಳಿವು ನಮಗೆ ಸಿಕ್ಕಿತು. ವಿಚಾರಣೆಯ ಸಮಯದಲ್ಲಿ, ತನ್ನ ಕಾರಿನಲ್ಲಿ ಶಾಲೆಗೆ ಹೋಗುವ ದಾರಿಯಲ್ಲಿ ಬಲಿಪಶುವಿಗೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದಾಗಿ ಒಪ್ಪಿಕೊಂಡನು. ಆದರೆ, ಬಾಲಕಿ ಪ್ರತಿರೋಧ ವ್ಯಕ್ತಪಡಿಸಿ ಕಿರುಚಲು ಆರಂಭಿಸಿದ್ದಳು. ಹುಡುಗಿಯನ್ನು ಮೌನಗೊಳಿಸಲು, ಅವನು ಆಕೆಯನ್ನು ಹೊಡೆದನು” ಎಂದು ಝಾಲಾ ಹೇಳಿದರು.

“ಕೊಲೆ ಬಳಿಕ ಪ್ರಾಂಶುಪಾಲರು ಎಂದಿನಂತೆ ಶಾಲೆಯಲ್ಲಿ ತಮ್ಮ ದಿನವನ್ನು ಕಳೆದರು. ಇಡೀ ದಿನ ಹುಡುಗಿಯ ದೇಹವನ್ನು ಕಾರಿನಲ್ಲಿ ಇರಿಸಿದರು. ಶಾಲೆಯಿಂದ ಎಲ್ಲರೂ ತೆರಳಿದ ನಂತರ, ಆತ ತನ್ನ ಕಾರಿನಿಂದ ಶವವನ್ನು ಹೊರತೆಗೆದು ಹಿತ್ತಲಿನಲ್ಲಿ ಎಸೆದನು. ಅವನು ತನ್ನ ಕಾರಿನಿಂದ ಅವಳ ಚಪ್ಪಲಿಗಳನ್ನು ಹೊರತೆಗೆದು, ಅವುಗಳನ್ನು ತರಗತಿಯ ಹೊರಗೆ ಇಟ್ಟಿದ್ದಾನೆ. ಅವಳ ಬ್ಯಾಗ್ ಅನ್ನು ತರಗತಿಯಲ್ಲಿಯೇ ಇರಿಸಿದ್ದನು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಾಂಶುಪಾಲರ ಮೊಬೈಲ್ ಫೋನ್‌ನ ತಾಂತ್ರಿಕ ತನಿಖೆ ನಡೆಸಲಾಗಿದ್ದು, ಅವರು ಗುರುವಾರ ಬೆಳಿಗ್ಗೆ ಶಾಲೆಗೆ ತಲುಪಲು “ಸಾಮಾನ್ಯಕ್ಕಿಂತ ಹೆಚ್ಚು ಸಮಯ” ತೆಗೆದುಕೊಂಡಿದ್ದಾರೆ ಎಂದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಸಹಪಾಠಿಗಳು ಹಾಗೂ ಶಿಕ್ಷಕರಿಂದ ಪೊಲೀಸರು ಆಕೆ ಶಾಲೆಗೆ ಬಂದಿಲ್ಲ, ಶಾಲಾ ಸಮಯದಲ್ಲಿ ಹಿತ್ತಲಲ್ಲಿ ಆಕೆಯ ಶವ ಕಾಣಿಸಿಲ್ಲ ಎಂದು ತಿಳಿದು ಬಂದಿದೆ. “ಇದಲ್ಲದೆ, ಬಲಿಪಶುವಿನ ಪಾದರಕ್ಷೆಗಳು ಮತ್ತು ಬ್ಯಾಗ್ ಸಹ ದಿನವಿಡೀ ತರಗತಿಯಲ್ಲಿ ಇರಲಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹೇಳಿದರು’ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ; ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...