Homeಮುಖಪುಟಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

ಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

- Advertisement -
- Advertisement -

ಗುಜರಾತ್‌ನ ದಾಹೋದ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂಬದಿಯಲ್ಲಿ ಆರು ವರ್ಷದ ವಿದ್ಯಾರ್ಥಿನಿಯ ಶವ ಪತ್ತೆಯಾದ ಮೂರು ದಿನಗಳ ನಂತರ, ಪೊಲೀಸರು ಭಾನುವಾರ ಶಾಲೆಯ ಪ್ರಾಂಶುಪಾಲರನ್ನು ಕೊಲೆ ಆರೋಪದ ಮೇಲೆ ಬಂಧಿಸಿದ್ದಾರೆ.

ಶಾಲೆಗೆ ಹೋಗುವ ದಾರಿಯಲ್ಲಿ 1ನೇ ತರಗತಿಯ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರು ತನ್ನ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುವ ಪ್ರಯತ್ನ ನಡೆಸಿದ್ದು, ಬಾಲಕಿ ಅದನ್ನು ವಿರೋಧಿಸಿದಾಗ ಆಕೆಯನ್ನು ಥಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗುರುವಾರ ಬೆಳಿಗ್ಗೆ ಬಾಲಕಿಯ ಗ್ರಾಮದಿಂದ ಶಾಲೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಮಗುವಿನ ತಾಯಿ ಬಾಲಕಿಯನ್ನು ಪ್ರಾಂಶುಪಾಳರ ಜತೆ ಕಳುಹಿಸಿದರು.

ವಿಚಾರಣೆ ಬಳಿಕ. ಮಗು ಗುರುವಾರ ಶಾಲೆಗೆ ಗೈರುಹಾಜರಾಗಿರುವುದು ಮತ್ತು ಶಾಲಾ ಆವರಣದಿಂದ ಹೊರಡುವ ಅವರ ಸಮಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಎದುರಿಸಿದ ನಂತರ ಪ್ರಾಂಶುಪಾಲರು ತಪ್ಪೊಪ್ಪಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಂಶುಪಾಲರು ಶಾಲಾ ಅವಧಿಯ ನಂತರ ಶವವನ್ನು ಶಾಲೆಯ ಹಿಂದೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಇಡೀ ದಿನ ಸತ್ತ ಬಾಲಕಿಯ ಶವವನ್ನು ತಮ್ಮ ಕಾರಿನಲ್ಲಿ ಬಚ್ಚಿಟ್ಟಿದ್ದರು.

ಬಾಲಕಿಯ ಸಹಪಾಠಿಗಳು, ಶಿಕ್ಷಕರು ಮತ್ತು ಗ್ರಾಮಸ್ಥರ ಮಾಃಇತಿ ಸಂಗ್ರಹಿಸಿದ 10 ವಿವಿಧ ಅಧಿಕಾರಿಗಳ ತಂಡವು ವಿವರವಾದ ತನಿಖೆ ನಡೆಸಿದೆ. ಬಳಿಕ, ಈ ಪ್ರಗತಿಯು ಹೊರಹೊಮ್ಮಿದೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ರಾಜ್‌ದೀಪ್‌ಸಿನ್ಹ್ ಝಾಲಾ ಹೇಳಿದ್ದಾರೆ.

“ವಿವರವಾದ ತನಿಖೆಯ ನಂತರ, ಮಗು ಕೊನೆಯದಾಗಿ ಶಾಲೆಯ ಪ್ರಾಂಶುಪಾಲರೊಂದಿಗೆ ಕಾಣಿಸಿಕೊಂಡಿರುವುದು ಖಚಿತವಾಯಿತು. ಆಕೆಯ ತಾಯಿ ಆಕೆಯನ್ನು ಬೆಳಿಗ್ಗೆ 10.20 ರ ಸುಮಾರಿಗೆ ತಮ್ಮ ಹಳ್ಳಿಯಲ್ಲಿ ಪ್ರಾಂಶುಪಾಲರಿಗೆ ಒಪ್ಪಿಸಿದರು. ಅವರು ತಮ್ಮ ವಾಹನದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದರು. ಇತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹೇಳಿಕೆ ಬಳಿಕ ನಾವು ಅದನ್ನು ಖಚಿತಪಡಿಸಿಕೊಂಡಿದ್ದೇವೆ; ಮಗು ಗುರುವಾರ ಶಾಲೆಗೆ ಹೋಗಲಿಲ್ಲ ಎಂದು ಹೇಳಿದ್ದಾರೆ.

ಆರಂಭದಲ್ಲಿ ಮಗುವನ್ನು ಶಾಲೆಗೆ ಬಿಟ್ಟ ನಂತರ ಮಗು ಎಲ್ಲಿಗೋ ಹೋಗಿದೆ ಎಂದು ಪ್ರಿನ್ಸಿಪಾಲ್ ಹೇಳಿದ್ದರು. ಆದರೆ, ನಂತರ ತಪ್ಪೊಪ್ಪಿಕೊಂಡರು ಎಂದು ಝಾಲಾ ಹೇಳಿದರು.

ಪೊಲೀಸರ ಪ್ರಕಾರ, “ತನಗೆ ತರಗತಿ ಶಿಕ್ಷಕರಿಂದ ಸಂಜೆ ಫೋನ್ ಕರೆ ಬಂದಿತ್ತು, ಮಗು ಕಾಣೆಯಾಗಿದೆ ಎಂದು ಹೇಳುವ ಮೂಲಕ ಪ್ರಾಂಶುಪಾಲರು ತನಿಖಾ ಅಧಿಕಾರಿಗಳನ್ನು ದಾರಿತಪ್ಪಿಸಲು ಪ್ರಯತ್ನಿಸಿದರು. ಅವರು ಪೊಲೀಸರಿಗೆ ಈ ಬಗ್ಗೆ ಮನವರಿಕೆ ಮಾಡಲು ಸಾಧ್ಯವಾಗದ ಕಾರಣ, ಅವರ ಮೊಬೈಲ್ ಫೋನ್ ಸ್ಥಳದ ಬಗ್ಗೆ ತಾಂತ್ರಿಕ ತನಿಖೆಯನ್ನು ಪ್ರಾರಂಭಿಸಲಾಯಿತು ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

“ಅವರು ತಡವಾಗಿ ಶಾಲೆಯನ್ನು ತೊರೆದ ಸಮಯದಿಂದ, ಏನೋ ತಪ್ಪಾಗಿದೆ ಎಂಬ ಸುಳಿವು ನಮಗೆ ಸಿಕ್ಕಿತು. ವಿಚಾರಣೆಯ ಸಮಯದಲ್ಲಿ, ತನ್ನ ಕಾರಿನಲ್ಲಿ ಶಾಲೆಗೆ ಹೋಗುವ ದಾರಿಯಲ್ಲಿ ಬಲಿಪಶುವಿಗೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದಾಗಿ ಒಪ್ಪಿಕೊಂಡನು. ಆದರೆ, ಬಾಲಕಿ ಪ್ರತಿರೋಧ ವ್ಯಕ್ತಪಡಿಸಿ ಕಿರುಚಲು ಆರಂಭಿಸಿದ್ದಳು. ಹುಡುಗಿಯನ್ನು ಮೌನಗೊಳಿಸಲು, ಅವನು ಆಕೆಯನ್ನು ಹೊಡೆದನು” ಎಂದು ಝಾಲಾ ಹೇಳಿದರು.

“ಕೊಲೆ ಬಳಿಕ ಪ್ರಾಂಶುಪಾಲರು ಎಂದಿನಂತೆ ಶಾಲೆಯಲ್ಲಿ ತಮ್ಮ ದಿನವನ್ನು ಕಳೆದರು. ಇಡೀ ದಿನ ಹುಡುಗಿಯ ದೇಹವನ್ನು ಕಾರಿನಲ್ಲಿ ಇರಿಸಿದರು. ಶಾಲೆಯಿಂದ ಎಲ್ಲರೂ ತೆರಳಿದ ನಂತರ, ಆತ ತನ್ನ ಕಾರಿನಿಂದ ಶವವನ್ನು ಹೊರತೆಗೆದು ಹಿತ್ತಲಿನಲ್ಲಿ ಎಸೆದನು. ಅವನು ತನ್ನ ಕಾರಿನಿಂದ ಅವಳ ಚಪ್ಪಲಿಗಳನ್ನು ಹೊರತೆಗೆದು, ಅವುಗಳನ್ನು ತರಗತಿಯ ಹೊರಗೆ ಇಟ್ಟಿದ್ದಾನೆ. ಅವಳ ಬ್ಯಾಗ್ ಅನ್ನು ತರಗತಿಯಲ್ಲಿಯೇ ಇರಿಸಿದ್ದನು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಾಂಶುಪಾಲರ ಮೊಬೈಲ್ ಫೋನ್‌ನ ತಾಂತ್ರಿಕ ತನಿಖೆ ನಡೆಸಲಾಗಿದ್ದು, ಅವರು ಗುರುವಾರ ಬೆಳಿಗ್ಗೆ ಶಾಲೆಗೆ ತಲುಪಲು “ಸಾಮಾನ್ಯಕ್ಕಿಂತ ಹೆಚ್ಚು ಸಮಯ” ತೆಗೆದುಕೊಂಡಿದ್ದಾರೆ ಎಂದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಸಹಪಾಠಿಗಳು ಹಾಗೂ ಶಿಕ್ಷಕರಿಂದ ಪೊಲೀಸರು ಆಕೆ ಶಾಲೆಗೆ ಬಂದಿಲ್ಲ, ಶಾಲಾ ಸಮಯದಲ್ಲಿ ಹಿತ್ತಲಲ್ಲಿ ಆಕೆಯ ಶವ ಕಾಣಿಸಿಲ್ಲ ಎಂದು ತಿಳಿದು ಬಂದಿದೆ. “ಇದಲ್ಲದೆ, ಬಲಿಪಶುವಿನ ಪಾದರಕ್ಷೆಗಳು ಮತ್ತು ಬ್ಯಾಗ್ ಸಹ ದಿನವಿಡೀ ತರಗತಿಯಲ್ಲಿ ಇರಲಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹೇಳಿದರು’ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ; ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...