Homeಮುಖಪುಟಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

- Advertisement -
- Advertisement -

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, “ಸಮಾಜ ವಿರೋಧಿ ಶಕ್ತಿಗಳು”, ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು “ಲವ್ ಜಿಹಾದ್” ಗಾಗಿ ಬಲೆಗೆ ಬೀಳಿಸಲು ತಮ್ಮ ಗುರುತನ್ನು ಮರೆಮಾಡುವವರು ಇದನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ.

ರಾಜ್ಯ ರಾಜಧಾನಿ ಗಾಂಧಿನಗರದಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಸಾಂಘವಿ ಈ ಬದಲಾವಣೆಗಳನ್ನು ಘೋಷಿಸಿದ್ದು, ಇದು ರಾಜ್ಯದಲ್ಲಿ ವಿವಾಹ ನೋಂದಣಿ ಪ್ರಮಾಣಪತ್ರವನ್ನು ಪಡೆಯಲು ಕಡ್ಡಾಯವಾಗಲಿದೆ. ಹೊಸ ನಿಯಮದ ಪ್ರಕಾರ, ವಧು-ವರರು ತಮ್ಮ ಹೆತ್ತವರಿಗೆ ಮದುವೆಯ ಬಗ್ಗೆ ತಿಳಿಸಿರುವುದಾಗಿ ಘೋಷಣೆಯನ್ನು ಸಲ್ಲಿಸಬೇಕಾಗುತ್ತದೆ, ಜೊತೆಗೆ ಅವರ ಪೋಷಕರ ಗುರುತಿನ ಪುರಾವೆ, ಫೋನ್ ನಂಬರ್, ವಸತಿ ಪುರಾವೆಗಳು ಸೇರಿದಂತೆ ಇತರ ದಾಖಲೆಗಳನ್ನು ನೀಡಬೇಕಾಗುತ್ತದೆ ಎಂದಿದ್ದಾರೆ. 

ಪ್ರಮುಖ ಬದಲಾವಣೆಗಳಲ್ಲಿ ಒಂದು, ಅರ್ಜಿಗಳನ್ನು ಸ್ವೀಕರಿಸಿದ ಹತ್ತು ದಿನಗಳಲ್ಲಿ ಸಹಾಯಕ ನೋಂದಣಾಧಿಕಾರಿ ಪೋಷಕರಿಗೆ ತಿಳಿಸಬೇಕಾದ ಪ್ರಕ್ರಿಯೆ. “ಸಹಾಯಕ ನೋಂದಣಾಧಿಕಾರಿ ಅರ್ಜಿಯನ್ನು ಸಂಬಂಧಪಟ್ಟ ಜಿಲ್ಲೆ ಅಥವಾ ತಾಲೂಕು ನೋಂದಣಾಧಿಕಾರಿಗೆ ಕಳುಹಿಸಬೇಕು. ಪರಿಶೀಲನೆ ಮತ್ತು ಉಪ-ನಿಯಮಗಳ (1 ರಿಂದ 7) ಅನುಸರಣೆಯನ್ನು ಖಚಿತಪಡಿಸಿಕೊಂಡ ನಂತರ, ಅರ್ಜಿ ಸಲ್ಲಿಸಿದ ದಿನಾಂಕದಿಂದ 30 ದಿನಗಳು ಪೂರ್ಣಗೊಂಡ ನಂತರ ಮದುವೆಯನ್ನು ನೋಂದಾಯಿಸಲಾಗುತ್ತದೆ” ಎಂದು ಹೊಸ ನಿಯಮಗಳು ಹೇಳುತ್ತವೆ ಎಂದು ವಿವರಿಸಿದ್ದಾರೆ.

“ಈ ವಿವರಗಳನ್ನು ರಾಜ್ಯ ಸರ್ಕಾರ ಅಭಿವೃದ್ಧಿಪಡಿಸಲಿರುವ ವೆಬ್ ಪೋರ್ಟಲ್‌ನಲ್ಲಿ ರಿಜಿಸ್ಟ್ರಾರ್ ಅಪ್‌ಲೋಡ್ ಮಾಡುತ್ತಾರೆ” ಎಂದು ಸಂಘವಿ ವಿವರಗಳನ್ನು ನೀಡುತ್ತಾ ಹೇಳಿದ್ದಾರೆ. 

ಬದಲಾವಣೆಗಳನ್ನು ಪ್ರಸ್ತಾಪಿಸುತ್ತಾ, ಹೊಸ ಕಾರ್ಯವಿಧಾನದ ಬದಲಾವಣೆಗಳು ‘ಸನಾತನ ಸಂಪ್ರದಾಯಗಳು ಮತ್ತು ವಿವಾಹ ವ್ಯವಸ್ಥೆಯನ್ನು ಉಳಿಸುವ ಸರ್ಕಾರದ ಬದ್ಧತೆಯ’ ಪರಿಣಾಮವಾಗಿದೆ ಎಂದು ಸಂಘವಿ ಹೇಳಿದ್ದಾರೆ. 

“ಹೆಣ್ಣುಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾಮಾಜಿಕ ರಚನೆಯನ್ನು ಕಾಪಾಡಿಕೊಳ್ಳಲು, ಸರ್ಕಾರವು ‘ಗುಜರಾತ್ ವಿವಾಹ ನೋಂದಣಿ ಕಾಯ್ದೆ 2006’ ಅಡಿಯಲ್ಲಿ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಿದೆ. ಈ ಬದಲಾವಣೆಗಳ ಭಾಗವಾಗಿ, ಪೋಷಕರನ್ನು ಈಗ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಸೇರಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

“ಸಮಾಜ ವಿರೋಧಿ ಅಂಶಗಳು ರಾಜ್ಯದ ಹೆಣ್ಣುಮಕ್ಕಳನ್ನು ಬಲೆಗೆ ಬೀಳಿಸಲು ತಮ್ಮ ಗುರುತನ್ನು ಮರೆಮಾಡುವ ಮೂಲಕ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದರು” ಎಂದು ಪಂಚಮಹಲ್ ಜಿಲ್ಲೆಯಲ್ಲಿ ನೀಡಲಾದ ನಕಲಿ ವಿವಾಹ ಪ್ರಮಾಣಪತ್ರಗಳ ಪ್ರಕರಣಗಳನ್ನು ಉಲ್ಲೇಖಿಸಿ ಸಂಘವಿ ಹೇಳಿದರು. 

ಮುಸ್ಲಿಮರೇ ಇಲ್ಲದ ಹಳ್ಳಿಗಳಲ್ಲಿ ನೂರಾರು ನಿಕಾಹ್ ಪ್ರಮಾಣಪತ್ರಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು. ಈ ಕಾರ್ಯವಿಧಾನದ ಬದಲಾವಣೆಗಳನ್ನು ಜಾರಿಗೆ ತರುವ ಮೊದಲು ಸರ್ಕಾರವು 30 ದಿನಗಳಲ್ಲಿ ನಾಗರಿಕರಿಂದ ಸಲಹೆಗಳು ಮತ್ತು ಆಕ್ಷೇಪಣೆಗಳನ್ನು ಕೋರಿದೆ ಎಂದು ಅವರು ಹೇಳಿದರು.

ಸರ್ಕಾರ ಪ್ರೇಮ ವಿವಾಹವನ್ನು ವಿರೋಧಿಸುವುದಿಲ್ಲ ಆದರೆ ‘ವಂಚನೆ’ ಮತ್ತು ‘ಬಲವಂತ’ದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿಕೊಂಡರು. 

“ರಾಜ್ಯದ ಮಗಳನ್ನು ಬಲೆಗೆ ಬೀಳಿಸಲು ಸಲೀಂ ಸುರೇಶ್ ವೇಷ ಧರಿಸಿದರೆ, ಸರ್ಕಾರವು ಕಠಿಣ ಕ್ರಮ ಕೈಗೊಳ್ಳುತ್ತದೆ, ಅವನು ಭವಿಷ್ಯದಲ್ಲಿ ಯಾವುದೇ ಮಗಳಿಗೆ ಹಾನಿ ಮಾಡಲು ಧೈರ್ಯ ಮಾಡುವುದಿಲ್ಲ” ಎಂದು ಸಂಘವಿ ಸದನದಲ್ಲಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಈ ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಕಾನೂನು ಮತ್ತು ನ್ಯಾಯ ಸಚಿವ ಕೌಶಿಕ್ ವೆಕಾರಿಯ ವಿವಿಧ ಸಾಮಾಜಿಕ ಸಂಸ್ಥೆಗಳೊಂದಿಗೆ ಸುಮಾರು 30 ಸಭೆಗಳನ್ನು ನಡೆಸಿದ್ದಾರೆ ಎಂದು ಅವರು ಹೇಳಿದ್ದು, ವಾಸ್ತವವಾಗಿ, ಕಳೆದ ಹಲವಾರು ತಿಂಗಳುಗಳಿಂದ, ವಿವಿಧ ಸಾಮಾಜಿಕ ಗುಂಪುಗಳು ರಾಜ್ಯದಲ್ಲಿ ಅಂತರ್ಜಾತಿ ಮತ್ತು ಅಂತರ ಧರ್ಮೀಯ ವಿವಾಹಗಳ ವಿರುದ್ಧ ಪ್ರತಿಭಟನೆಗಳನ್ನು ನಡೆಸಿವೆ ಮತ್ತು ಅದನ್ನು ನಿಲ್ಲಿಸಲು ಕಠಿಣ ಕ್ರಮಗಳಿಗೆ ಒತ್ತಾಯಿಸಿವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....