Homeಮುಖಪುಟಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

- Advertisement -
- Advertisement -

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, “ಸಮಾಜ ವಿರೋಧಿ ಶಕ್ತಿಗಳು”, ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು “ಲವ್ ಜಿಹಾದ್” ಗಾಗಿ ಬಲೆಗೆ ಬೀಳಿಸಲು ತಮ್ಮ ಗುರುತನ್ನು ಮರೆಮಾಡುವವರು ಇದನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ.

ರಾಜ್ಯ ರಾಜಧಾನಿ ಗಾಂಧಿನಗರದಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಸಾಂಘವಿ ಈ ಬದಲಾವಣೆಗಳನ್ನು ಘೋಷಿಸಿದ್ದು, ಇದು ರಾಜ್ಯದಲ್ಲಿ ವಿವಾಹ ನೋಂದಣಿ ಪ್ರಮಾಣಪತ್ರವನ್ನು ಪಡೆಯಲು ಕಡ್ಡಾಯವಾಗಲಿದೆ. ಹೊಸ ನಿಯಮದ ಪ್ರಕಾರ, ವಧು-ವರರು ತಮ್ಮ ಹೆತ್ತವರಿಗೆ ಮದುವೆಯ ಬಗ್ಗೆ ತಿಳಿಸಿರುವುದಾಗಿ ಘೋಷಣೆಯನ್ನು ಸಲ್ಲಿಸಬೇಕಾಗುತ್ತದೆ, ಜೊತೆಗೆ ಅವರ ಪೋಷಕರ ಗುರುತಿನ ಪುರಾವೆ, ಫೋನ್ ನಂಬರ್, ವಸತಿ ಪುರಾವೆಗಳು ಸೇರಿದಂತೆ ಇತರ ದಾಖಲೆಗಳನ್ನು ನೀಡಬೇಕಾಗುತ್ತದೆ ಎಂದಿದ್ದಾರೆ. 

ಪ್ರಮುಖ ಬದಲಾವಣೆಗಳಲ್ಲಿ ಒಂದು, ಅರ್ಜಿಗಳನ್ನು ಸ್ವೀಕರಿಸಿದ ಹತ್ತು ದಿನಗಳಲ್ಲಿ ಸಹಾಯಕ ನೋಂದಣಾಧಿಕಾರಿ ಪೋಷಕರಿಗೆ ತಿಳಿಸಬೇಕಾದ ಪ್ರಕ್ರಿಯೆ. “ಸಹಾಯಕ ನೋಂದಣಾಧಿಕಾರಿ ಅರ್ಜಿಯನ್ನು ಸಂಬಂಧಪಟ್ಟ ಜಿಲ್ಲೆ ಅಥವಾ ತಾಲೂಕು ನೋಂದಣಾಧಿಕಾರಿಗೆ ಕಳುಹಿಸಬೇಕು. ಪರಿಶೀಲನೆ ಮತ್ತು ಉಪ-ನಿಯಮಗಳ (1 ರಿಂದ 7) ಅನುಸರಣೆಯನ್ನು ಖಚಿತಪಡಿಸಿಕೊಂಡ ನಂತರ, ಅರ್ಜಿ ಸಲ್ಲಿಸಿದ ದಿನಾಂಕದಿಂದ 30 ದಿನಗಳು ಪೂರ್ಣಗೊಂಡ ನಂತರ ಮದುವೆಯನ್ನು ನೋಂದಾಯಿಸಲಾಗುತ್ತದೆ” ಎಂದು ಹೊಸ ನಿಯಮಗಳು ಹೇಳುತ್ತವೆ ಎಂದು ವಿವರಿಸಿದ್ದಾರೆ.

“ಈ ವಿವರಗಳನ್ನು ರಾಜ್ಯ ಸರ್ಕಾರ ಅಭಿವೃದ್ಧಿಪಡಿಸಲಿರುವ ವೆಬ್ ಪೋರ್ಟಲ್‌ನಲ್ಲಿ ರಿಜಿಸ್ಟ್ರಾರ್ ಅಪ್‌ಲೋಡ್ ಮಾಡುತ್ತಾರೆ” ಎಂದು ಸಂಘವಿ ವಿವರಗಳನ್ನು ನೀಡುತ್ತಾ ಹೇಳಿದ್ದಾರೆ. 

ಬದಲಾವಣೆಗಳನ್ನು ಪ್ರಸ್ತಾಪಿಸುತ್ತಾ, ಹೊಸ ಕಾರ್ಯವಿಧಾನದ ಬದಲಾವಣೆಗಳು ‘ಸನಾತನ ಸಂಪ್ರದಾಯಗಳು ಮತ್ತು ವಿವಾಹ ವ್ಯವಸ್ಥೆಯನ್ನು ಉಳಿಸುವ ಸರ್ಕಾರದ ಬದ್ಧತೆಯ’ ಪರಿಣಾಮವಾಗಿದೆ ಎಂದು ಸಂಘವಿ ಹೇಳಿದ್ದಾರೆ. 

“ಹೆಣ್ಣುಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾಮಾಜಿಕ ರಚನೆಯನ್ನು ಕಾಪಾಡಿಕೊಳ್ಳಲು, ಸರ್ಕಾರವು ‘ಗುಜರಾತ್ ವಿವಾಹ ನೋಂದಣಿ ಕಾಯ್ದೆ 2006’ ಅಡಿಯಲ್ಲಿ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಿದೆ. ಈ ಬದಲಾವಣೆಗಳ ಭಾಗವಾಗಿ, ಪೋಷಕರನ್ನು ಈಗ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಸೇರಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

“ಸಮಾಜ ವಿರೋಧಿ ಅಂಶಗಳು ರಾಜ್ಯದ ಹೆಣ್ಣುಮಕ್ಕಳನ್ನು ಬಲೆಗೆ ಬೀಳಿಸಲು ತಮ್ಮ ಗುರುತನ್ನು ಮರೆಮಾಡುವ ಮೂಲಕ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದರು” ಎಂದು ಪಂಚಮಹಲ್ ಜಿಲ್ಲೆಯಲ್ಲಿ ನೀಡಲಾದ ನಕಲಿ ವಿವಾಹ ಪ್ರಮಾಣಪತ್ರಗಳ ಪ್ರಕರಣಗಳನ್ನು ಉಲ್ಲೇಖಿಸಿ ಸಂಘವಿ ಹೇಳಿದರು. 

ಮುಸ್ಲಿಮರೇ ಇಲ್ಲದ ಹಳ್ಳಿಗಳಲ್ಲಿ ನೂರಾರು ನಿಕಾಹ್ ಪ್ರಮಾಣಪತ್ರಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು. ಈ ಕಾರ್ಯವಿಧಾನದ ಬದಲಾವಣೆಗಳನ್ನು ಜಾರಿಗೆ ತರುವ ಮೊದಲು ಸರ್ಕಾರವು 30 ದಿನಗಳಲ್ಲಿ ನಾಗರಿಕರಿಂದ ಸಲಹೆಗಳು ಮತ್ತು ಆಕ್ಷೇಪಣೆಗಳನ್ನು ಕೋರಿದೆ ಎಂದು ಅವರು ಹೇಳಿದರು.

ಸರ್ಕಾರ ಪ್ರೇಮ ವಿವಾಹವನ್ನು ವಿರೋಧಿಸುವುದಿಲ್ಲ ಆದರೆ ‘ವಂಚನೆ’ ಮತ್ತು ‘ಬಲವಂತ’ದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿಕೊಂಡರು. 

“ರಾಜ್ಯದ ಮಗಳನ್ನು ಬಲೆಗೆ ಬೀಳಿಸಲು ಸಲೀಂ ಸುರೇಶ್ ವೇಷ ಧರಿಸಿದರೆ, ಸರ್ಕಾರವು ಕಠಿಣ ಕ್ರಮ ಕೈಗೊಳ್ಳುತ್ತದೆ, ಅವನು ಭವಿಷ್ಯದಲ್ಲಿ ಯಾವುದೇ ಮಗಳಿಗೆ ಹಾನಿ ಮಾಡಲು ಧೈರ್ಯ ಮಾಡುವುದಿಲ್ಲ” ಎಂದು ಸಂಘವಿ ಸದನದಲ್ಲಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಈ ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಕಾನೂನು ಮತ್ತು ನ್ಯಾಯ ಸಚಿವ ಕೌಶಿಕ್ ವೆಕಾರಿಯ ವಿವಿಧ ಸಾಮಾಜಿಕ ಸಂಸ್ಥೆಗಳೊಂದಿಗೆ ಸುಮಾರು 30 ಸಭೆಗಳನ್ನು ನಡೆಸಿದ್ದಾರೆ ಎಂದು ಅವರು ಹೇಳಿದ್ದು, ವಾಸ್ತವವಾಗಿ, ಕಳೆದ ಹಲವಾರು ತಿಂಗಳುಗಳಿಂದ, ವಿವಿಧ ಸಾಮಾಜಿಕ ಗುಂಪುಗಳು ರಾಜ್ಯದಲ್ಲಿ ಅಂತರ್ಜಾತಿ ಮತ್ತು ಅಂತರ ಧರ್ಮೀಯ ವಿವಾಹಗಳ ವಿರುದ್ಧ ಪ್ರತಿಭಟನೆಗಳನ್ನು ನಡೆಸಿವೆ ಮತ್ತು ಅದನ್ನು ನಿಲ್ಲಿಸಲು ಕಠಿಣ ಕ್ರಮಗಳಿಗೆ ಒತ್ತಾಯಿಸಿವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...