Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಸೋಮನಾಥ ದೇವಾಲಯದ ದೃಶ್ಯಗಳನ್ನು ಕಾಶಿ ವಿಶ್ವನಾಥ ದೇವಾಲಯದ ವಿಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ

ಫ್ಯಾಕ್ಟ್‌ಚೆಕ್: ಸೋಮನಾಥ ದೇವಾಲಯದ ದೃಶ್ಯಗಳನ್ನು ಕಾಶಿ ವಿಶ್ವನಾಥ ದೇವಾಲಯದ ವಿಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಅಯೋಧ್ಯೆಯ ಕಾಶಿ ವಿಶ್ವನಾಥ ದೇವಸ್ಥಾನ ಪುನರ್ನಿರ್ಮಾಣದ ನಂತರದ ಮೊದಲ ದೃಶ್ಯಗಳು ಎಂದು ವಿಡಿಯೊ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ವಿಡಿಯೋ ಎಷ್ಟು ಸತ್ಯ ಎಂಬುದನ್ನು ಈ ಲೇಖನದಲ್ಲಿ ಪರಿಶೀಲಿಸೋಣ…

ಈ ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಕಾಣಬಹುದು.

ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೊದ ಸ್ಕ್ರೀನ್ ಶಾಟ್‌ಗಳ ರಿವರ್ಸ್ ಇಮೇಜ್ ಹುಡುಕಾಟವುದಲ್ಲಿ ‘ಭಾರತ್‌ಮೋತಿವಾರಸ್’ ಎಂಬ Instagram ಬಳಕೆದಾರರು 11 ಮಾರ್ಚ್ 2021 ರಂದು ಇದೇ ರೀತಿಯ ದೃಶ್ಯಗಳಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ ಎಂಬುದು ಕಂಡುಬಂದಿದೆ. ಈ ವಿಡಿಯೋದಲ್ಲಿ ಕಾಣುತ್ತಿರುವುದು ಸೋಮನಾಥ ದೇವಾಲಯ ಎಂದು ಈ ಬಳಕೆದಾರರ ವಿವರಣೆ ಸ್ಪಷ್ಟವಾಗಿ ಹೇಳುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ಈ ವಿಡಿಯೊದಲ್ಲಿ ಕಂಡುಬರುವ ಅದೇ ದೇವಾಲಯದ ಫೋಟೋವನ್ನು ಟೈಮ್ಸ್ ಆಫ್ ಇಂಡಿಯಾ 11 ನವೆಂಬರ್ 2021 ರಂದು ಪ್ರಕಟಿಸಿದ ಲೇಖನದಲ್ಲಿ ಹಂಚಿಕೊಂಡಿದೆ. ಈ ಫೋಟೋದಲ್ಲಿ ಗುಜರಾತ್ ರಾಜ್ಯದ ಶ್ರೀ ಸೋಮನಾಥ ಮಂದಿರವನ್ನು ನೋಡಬಹುದು ಎಂದು ಈ ಲೇಖನದಲ್ಲಿ ವರದಿಯಾಗಿದೆ. ಪೋಸ್ಟ್‌ನಲ್ಲಿ ಕಂಡುಬರುವ ಅದೇ ದೃಶ್ಯಗಳನ್ನು ಶ್ರೀ ಸೋಮನಾಥ ಮಂದಿರದಲ್ಲಿ ದೀಪಾವಳಿ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ದೇವಾಲಯದ ಸಂಸ್ಥೆ ಹಂಚಿಕೊಂಡ ವಿಡಿಯೊದಲ್ಲಿಯೂ ನೋಡಬಹುದು.

ಶ್ರೀ ಕಾಶಿ ವಿಶ್ವನಾಥ ಕಾರಿಡಾರ್‌ನ ಪುನರ್ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪ್ರಕಟವಾದ ಸುದ್ದಿ ಲೇಖನಗಳು ಮತ್ತು ವೀಡಿಯೊಗಳನ್ನು ನೀವು ಇಲ್ಲಿ ಕಾಣಬಹುದು. ಶ್ರೀ ಕಾಶಿ ವಿಶ್ವನಾಥ ಕಾರಿಡಾರ್ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 13 ರಂದು ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ.

ಒಟ್ಟಾರೆ ಗುಜರಾತಿನ ಸೋಮನಾಥ ದೇವಾಲಯದ ದೃಶ್ಯಗಳನ್ನು ಶ್ರೀ ಕಾಶಿ ವಿಶ್ವನಾಥ ದೇವಾಲಯದ ಪುನರ್ ನಿರ್ಮಾಣ ಕಾರ್ಯದ ನಂತರ ತೆಗೆದ ದೃಶ್ಯಗಳು ಎಂದು ಹಂಚಿಕೊಳ್ಳಲಾಗುತ್ತಿದೆ.

ಪ್ರತಿಪಾದನೆ: ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದ ಪುನರ್ ನಿರ್ಮಾಣದ ನಂತರ ತೆಗೆದ ವಿಡಿಯೋ.

ನಿಜಾಂಶ: ಈ ವಿಡಿಯೋದಲ್ಲಿ ಕಾಣುತ್ತಿರುವುದು ಗುಜರಾತ್ ರಾಜ್ಯದ ಸೋಮನಾಥ ದೇವಾಲಯ. ವಾರಣಾಸಿಯ ಶ್ರೀ ಕಾಶಿ ವಿಶ್ವನಾಥ ದೇವಾಲಯವಲ್ಲ. ಈ ವಿಡಿಯೊವನ್ನು ಮಾರ್ಚ್ 2021 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತದೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ತ್ರಿಪುರದಲ್ಲಿ ಜಿಹಾದ್‌‌ಗೆ ಮಸೀದಿ ಕರೆ ನೀಡಿತೆ? ವೈರಲ್‌ ವಿಡಿಯೊ ಎಲ್ಲಿಯದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...