Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಸೋಮನಾಥ ದೇವಾಲಯದ ದೃಶ್ಯಗಳನ್ನು ಕಾಶಿ ವಿಶ್ವನಾಥ ದೇವಾಲಯದ ವಿಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ

ಫ್ಯಾಕ್ಟ್‌ಚೆಕ್: ಸೋಮನಾಥ ದೇವಾಲಯದ ದೃಶ್ಯಗಳನ್ನು ಕಾಶಿ ವಿಶ್ವನಾಥ ದೇವಾಲಯದ ವಿಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಅಯೋಧ್ಯೆಯ ಕಾಶಿ ವಿಶ್ವನಾಥ ದೇವಸ್ಥಾನ ಪುನರ್ನಿರ್ಮಾಣದ ನಂತರದ ಮೊದಲ ದೃಶ್ಯಗಳು ಎಂದು ವಿಡಿಯೊ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ವಿಡಿಯೋ ಎಷ್ಟು ಸತ್ಯ ಎಂಬುದನ್ನು ಈ ಲೇಖನದಲ್ಲಿ ಪರಿಶೀಲಿಸೋಣ…

ಈ ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಕಾಣಬಹುದು.

ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೊದ ಸ್ಕ್ರೀನ್ ಶಾಟ್‌ಗಳ ರಿವರ್ಸ್ ಇಮೇಜ್ ಹುಡುಕಾಟವುದಲ್ಲಿ ‘ಭಾರತ್‌ಮೋತಿವಾರಸ್’ ಎಂಬ Instagram ಬಳಕೆದಾರರು 11 ಮಾರ್ಚ್ 2021 ರಂದು ಇದೇ ರೀತಿಯ ದೃಶ್ಯಗಳಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ ಎಂಬುದು ಕಂಡುಬಂದಿದೆ. ಈ ವಿಡಿಯೋದಲ್ಲಿ ಕಾಣುತ್ತಿರುವುದು ಸೋಮನಾಥ ದೇವಾಲಯ ಎಂದು ಈ ಬಳಕೆದಾರರ ವಿವರಣೆ ಸ್ಪಷ್ಟವಾಗಿ ಹೇಳುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ಈ ವಿಡಿಯೊದಲ್ಲಿ ಕಂಡುಬರುವ ಅದೇ ದೇವಾಲಯದ ಫೋಟೋವನ್ನು ಟೈಮ್ಸ್ ಆಫ್ ಇಂಡಿಯಾ 11 ನವೆಂಬರ್ 2021 ರಂದು ಪ್ರಕಟಿಸಿದ ಲೇಖನದಲ್ಲಿ ಹಂಚಿಕೊಂಡಿದೆ. ಈ ಫೋಟೋದಲ್ಲಿ ಗುಜರಾತ್ ರಾಜ್ಯದ ಶ್ರೀ ಸೋಮನಾಥ ಮಂದಿರವನ್ನು ನೋಡಬಹುದು ಎಂದು ಈ ಲೇಖನದಲ್ಲಿ ವರದಿಯಾಗಿದೆ. ಪೋಸ್ಟ್‌ನಲ್ಲಿ ಕಂಡುಬರುವ ಅದೇ ದೃಶ್ಯಗಳನ್ನು ಶ್ರೀ ಸೋಮನಾಥ ಮಂದಿರದಲ್ಲಿ ದೀಪಾವಳಿ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ದೇವಾಲಯದ ಸಂಸ್ಥೆ ಹಂಚಿಕೊಂಡ ವಿಡಿಯೊದಲ್ಲಿಯೂ ನೋಡಬಹುದು.

ಶ್ರೀ ಕಾಶಿ ವಿಶ್ವನಾಥ ಕಾರಿಡಾರ್‌ನ ಪುನರ್ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪ್ರಕಟವಾದ ಸುದ್ದಿ ಲೇಖನಗಳು ಮತ್ತು ವೀಡಿಯೊಗಳನ್ನು ನೀವು ಇಲ್ಲಿ ಕಾಣಬಹುದು. ಶ್ರೀ ಕಾಶಿ ವಿಶ್ವನಾಥ ಕಾರಿಡಾರ್ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 13 ರಂದು ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ.

ಒಟ್ಟಾರೆ ಗುಜರಾತಿನ ಸೋಮನಾಥ ದೇವಾಲಯದ ದೃಶ್ಯಗಳನ್ನು ಶ್ರೀ ಕಾಶಿ ವಿಶ್ವನಾಥ ದೇವಾಲಯದ ಪುನರ್ ನಿರ್ಮಾಣ ಕಾರ್ಯದ ನಂತರ ತೆಗೆದ ದೃಶ್ಯಗಳು ಎಂದು ಹಂಚಿಕೊಳ್ಳಲಾಗುತ್ತಿದೆ.

ಪ್ರತಿಪಾದನೆ: ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದ ಪುನರ್ ನಿರ್ಮಾಣದ ನಂತರ ತೆಗೆದ ವಿಡಿಯೋ.

ನಿಜಾಂಶ: ಈ ವಿಡಿಯೋದಲ್ಲಿ ಕಾಣುತ್ತಿರುವುದು ಗುಜರಾತ್ ರಾಜ್ಯದ ಸೋಮನಾಥ ದೇವಾಲಯ. ವಾರಣಾಸಿಯ ಶ್ರೀ ಕಾಶಿ ವಿಶ್ವನಾಥ ದೇವಾಲಯವಲ್ಲ. ಈ ವಿಡಿಯೊವನ್ನು ಮಾರ್ಚ್ 2021 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತದೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ತ್ರಿಪುರದಲ್ಲಿ ಜಿಹಾದ್‌‌ಗೆ ಮಸೀದಿ ಕರೆ ನೀಡಿತೆ? ವೈರಲ್‌ ವಿಡಿಯೊ ಎಲ್ಲಿಯದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...