Homeಮುಖಪುಟಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ತೊಂದರೆಗೆ ಸಿಲುಕಿರುವ ವ್ಯಾಪಾರಿಗಳ ನೋವಿನ ಕಥೆ ಇದು...

- Advertisement -
- Advertisement -

ಬೀದಿಬದಿಯ ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ಗುಜರಾತ್‌ ರಾಜ್ಯದಲ್ಲಿ ಮಾಂಸಾಹಾರ ಮಾರಾಟವನ್ನೇ ನಂಬಿಕೊಂಡಿದ್ದ ಬಡಪಾಯಿ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ.

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಹಲವು ಸ್ಥಳೀಯ ಸಂಸ್ಥೆಗಳು ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿವೆ. ಅಲಹಾಬಾದ್‌ದಂತಹ ಪ್ರಮುಖ ನಗರಗಳಲ್ಲಿ ಮಳಿಗೆಗಳ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಮಾಂಸಾಹಾರ ಮಳಿಗೆಗಳನ್ನೇ ನಂಬಿಕೊಂಡು ಬದುಕುತ್ತಿದ್ದ ಜನರ ಬದುಕು ಬೀದಿಗೆ ಬೀಳುವ ಆತಂಕ ಎದುರಾಗಿದೆ.

ರಾಮ್‌ ಉದ್ಗರ್‌ ಗೋಸಾಯ್‌ ಎಂಬ ವ್ಯಾಪಾರಿಯನ್ನೇ ನೋಡಿ. ಅಂಗಡಿಯನ್ನು ಎಲ್ಲಿ ಇಡಬೇಕೆಂದು ಗೊತ್ತಾಗದೆ ತನ್ನ ಸ್ಕೂಟರ್‌ನಲ್ಲಿ ಅಹಮದಾಬಾದ್‌ ನಗರದ ಬೀದಿಬೀದಿಗಳನ್ನು ಮಂಗಳವಾರ ಸುತ್ತಾಡಿ ಸುಸ್ತಾದರು. ತನ್ನ ಮೊಟ್ಟೆ ಮಳಿಗೆಯನ್ನು ಹೊಟ್ಟೆಪಾಡಿಗಾಗಿ ಎಲ್ಲಿ ಇಡಬೇಕೆಂದು ತಿಳಿಯದೆ ಕಂಗಾಲಾದರು.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನ ಎಸ್ಟೇಟ್ ಮತ್ತು ಪಟ್ಟಣ ಅಭಿವೃದ್ಧಿ ವಿಭಾಗವು ಅಹಮದಾಬಾದ್‌ ನಗರದ ಪ್ರದೇಶಗಳಾದ ಜೋಧ್‌ಪುರ, ಮಣಿನಗರ, ವಸ್ತ್ರಾಪುರ, ಆಶ್ರಮ ರಸ್ತೆ ಮತ್ತು ಬೆಹ್ರಾಂಪುರದಲ್ಲಿ ಸುಮಾರು 50 ಮಳಿಗೆಗಳನ್ನು ಮಂಗಳವಾರ ಸಂಜೆ ವೇಳೆಗೆ ಎತ್ತಂಗಡಿ ಮಾಡಿತ್ತು.

ಇದನ್ನೂ ಓದಿರಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

“ಸಾಮಾನ್ಯವಾಗಿ ಈ ವೇಳೆಗೆ ಇಲ್ಲಿ ಸುಮಾರು ಹತ್ತರಿಂದ ಹನ್ನೆರಡು ಮೊಟ್ಟೆಯ ಮಳಿಗೆಗಳು ಇರುತ್ತಿದ್ದವು. ಇವತ್ತು ಯಾರೂ ಬಂದಿಲ್ಲ. ಎಲ್ಲರೂ ಹೆದರುತ್ತಿದ್ದಾರೆ. ಅಧಿಕಾರಿಗಳು ಇಂದು ಮಧ್ಯಾಹ್ನ ವಸ್ತ್ರಾಪುರದಲ್ಲಿ 11 ಗಾಡಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಮಗೆ ತಿಳಿಯಿತು” ಎಂದು ಬಿಹಾರದ ಮಧುಬನಿಯಿಂದ ವಲಸೆ ಬಂದ ವ್ಯಾಪಾರಿ ಅಳಲು ತೋಡಿಕೊಂಡರೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸುಮಾರು 20 ವರ್ಷಗಳ ಹಿಂದೆ ಅಹಮದಾಬಾದ್‌ಗೆ ವಲಸೆ ಬಂದ ಈ ವ್ಯಾಪಾರಿ, ತಾಲ್‌ಜೇಜ್ ಪ್ರದೇಶದಲ್ಲಿ ತನ್ನ ಮೊಟ್ಟೆ ಮಳಿಗೆಯನ್ನು ಇಟ್ಟುಕೊಂಡು ತರಹೇವಾರಿ ತಿನಿಸುಗಳನ್ನು ಮಾರುತ್ತಿದ್ದರು. ಬೀದಿಬದಿ ಆಹಾರವನ್ನೇ ಅವಲಂಬಿಸಿದ್ದವರು ಬಂದು ಸವಿಯುತ್ತಿದ್ದರು. ಮುಖ್ಯವಾಗಿ ಈ ವ್ಯಾಪಾರಿ ಮೂವರು ಯುವಕರಿಗೆ ಕೆಲಸ ಕೊಟ್ಟಿದ್ದರು.

ಇಲ್ಲಿನ ಸ್ಥಳೀಯ ಸಂಸ್ಥೆ ಮಾಂಸಾಹಾರಿ ಬಂಡಿಗಳ ತೆರವು ಕಾರ್ಯಾಚರಣೆಯನ್ನು ಸೋಮವಾರದಿಂದ ಆರಂಭಿಸಿದೆ. ಈ ಧಮನಕಾರಿ ಪ್ರವೃತ್ತಿಗೆ “ಅತಿಕ್ರಮಣ ವಿರೋಧಿ ಕಾರ್ಯಾಚರಣೆ” ಎಂದು ಚೆಂದದ ಹೆಸರಿಟ್ಟಿದ್ದು, ಬಡವ್ಯಾಪಾರಿಗಳ ಬಂಡಿಗಳು, ಕುರ್ಚಿಗಳು ಮತ್ತು ಇತರ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.

ವಾರಣಾಸಿಯಿಂದ ವಲಸೆ ಬಂದ ಮತ್ತೊಬ್ಬ ಯುವ ವ್ಯಾಪಾರಿ ನಗರದ ಮತ್ತೊಂದು ಭಾಗದಲ್ಲಿ ಆಸೆಗಣ್ಣಿನಿಂದ ಕಾಯುತ್ತ ಮೊಟ್ಟೆ ಅಂಗಡಿಯನ್ನು ತೆರೆಯಲು ಅನುಮತಿಯನ್ನು ನಿರೀಕ್ಷಿಸುತ್ತಿದ್ದರು. ಸುಮಾರು 15 ವರ್ಷಗಳಿಂದ ಅಹಮದಾಬಾದ್‌ನಲ್ಲಿರುವ ತನ್ನ ಚಿಕ್ಕಪ್ಪನ ಬೆನ್ನು ಹತ್ತಿ, ಕಾಲೇಜು ಬಿಟ್ಟು ಬಂದ ಈ ಯುವಕ ಎರಡು ತಿಂಗಳಿಂದ ಇಲ್ಲಿನ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದನು. “ಈಗ ಕೆಲಸ ಕಳೆದುಕೊಂಡರೆ ಮುಂದೇನು ಮಾಡಬೇಕೆಂದು ತಿಳಿಯುತ್ತಿಲ್ಲ” ಎಂದು ಕಂಗಾಲಾಗಿದ್ದಾನೆ.

ಬಿಜೆಪಿಯ ನಾಯಕರು ಮಾತ್ರ ವಿರೋಧಾಭಾಸಗಳ ಹೇಳಿಕೆ ನೀಡುತ್ತಾ, ವಾಸ್ತವದಲ್ಲಿ ಮಾಂಸಾಹಾರ ವಿರೋಧಿತನವನ್ನು ಕಾರ್ಯಗತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ‘ಜನರು ಇಷ್ಟ ಬಂದಿದ್ದು ತಿನ್ನುತ್ತಾರೆ. ಅದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಗುಜರಾತ್‌ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್‌.ಪಾಟೀಲ್‌ ಹೇಳುತ್ತಾರೆ. ಆದರೆ ಬಡವರ ವಿರೋಧಿ ಕಾರ್ಯಾಚರಣೆ, ಬಡವರ ನಿರ್ಮೂಲನೆ ಕಾರ್ಯಾಚರಣೆ ಶುರುವಾಗಿದೆ.

“ಯಾರೂ ಮಾಂಸಾಹಾರ ಮಳಿಗೆ ತೆರವು ನಿರ್ಧಾರವನ್ನು ತೆಗೆದುಕೊಂಡಿಲ್ಲ. ವ್ಯಾಪಾರಿಗಳ ಮೇಲೆ ಯಾವುದೇ ಕಾನೂನಾತ್ಮಕ ನಿಷೇಧವಿಲ್ಲ. ದೇಶದಲ್ಲಿ ಎರಡು ರೀತಿಯ ಜನರಿದ್ದಾರೆ: ಸಸ್ಯಾಹಾರಿ ಆಹಾರವನ್ನು ತಿನ್ನುವವರು ಮತ್ತು ಮಾಂಸಾಹಾರಿ ಆಹಾರವನ್ನು ಸೇವಿಸುವವರು. ತಮಗೆ ಬೇಕಾದುದನ್ನು ತಿನ್ನುವುದು ಜನರ ಹಕ್ಕು. ಯಾರೂ ಅವರನ್ನು ತಡೆಯಲು ಸಾಧ್ಯವಿಲ್ಲ. ಅವರು (ಮಾಂಸಾಹಾರ ಮಳಿಗೆ ಮಾಲೀಕರು) ನೈರ್ಮಲ್ಯವನ್ನು ಕಾಪಾಡಿಕೊಳ್ಳದಿದ್ದರೆ, ಸೂಕ್ತ ಕ್ರಮವನ್ನು ಎದುರಿಸಬೇಕಾಗುತ್ತದೆ. ಆದರೆ ಅವರನ್ನು ನಿಲ್ಲಿಸುವ ಅಥವಾ ತೆಗೆದುಹಾಕುವ ಬಗ್ಗೆ ಬಿಜೆಪಿ ಎಂದಿಗೂ ಯೋಚಿಸುವುದಿಲ್ಲ. ಈ ಕೆಲಸಗಳನ್ನೇ ಅವಲಂಬಿಸಿರುವ ಬಡವರಿದ್ದಾರೆ. ಯಾರೇ ಆಗಿರಲಿ, ಏನು ಮಾರಾಟ ಮಾಡಿದರೂ ಸಹಕರಿಸುತ್ತೇವೆ” ಎಂದು ಪಾಟೀಲ್ ಉದ್ಗರಿಸಿದ್ದರು. ಆದರೆ ಈ ಹೇಳಿಕೆಗೂ ಕ್ರಿಯೆಯೂ ವ್ಯತ್ಯಾಸ ಕಂಡು ಬರುತ್ತಿದೆ. ಗುಜರಾತ್‌‌ನ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿಯೇ ಅಧಿಕಾರ ನಡೆಸುತ್ತಿರುವುದು ವಾಸ್ತವ.


ಇದನ್ನೂ ಓದಿರಿ: ಡ್ರಗ್ಸ್‌ ಹಬ್‌ ಆಗುತ್ತಿದೆಯೇ ಗುಜರಾತ್‌?; ಮತ್ತೆ 600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...