Homeಮುಖಪುಟಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ತೊಂದರೆಗೆ ಸಿಲುಕಿರುವ ವ್ಯಾಪಾರಿಗಳ ನೋವಿನ ಕಥೆ ಇದು...

- Advertisement -
- Advertisement -

ಬೀದಿಬದಿಯ ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ಗುಜರಾತ್‌ ರಾಜ್ಯದಲ್ಲಿ ಮಾಂಸಾಹಾರ ಮಾರಾಟವನ್ನೇ ನಂಬಿಕೊಂಡಿದ್ದ ಬಡಪಾಯಿ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ.

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಹಲವು ಸ್ಥಳೀಯ ಸಂಸ್ಥೆಗಳು ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿವೆ. ಅಲಹಾಬಾದ್‌ದಂತಹ ಪ್ರಮುಖ ನಗರಗಳಲ್ಲಿ ಮಳಿಗೆಗಳ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಮಾಂಸಾಹಾರ ಮಳಿಗೆಗಳನ್ನೇ ನಂಬಿಕೊಂಡು ಬದುಕುತ್ತಿದ್ದ ಜನರ ಬದುಕು ಬೀದಿಗೆ ಬೀಳುವ ಆತಂಕ ಎದುರಾಗಿದೆ.

ರಾಮ್‌ ಉದ್ಗರ್‌ ಗೋಸಾಯ್‌ ಎಂಬ ವ್ಯಾಪಾರಿಯನ್ನೇ ನೋಡಿ. ಅಂಗಡಿಯನ್ನು ಎಲ್ಲಿ ಇಡಬೇಕೆಂದು ಗೊತ್ತಾಗದೆ ತನ್ನ ಸ್ಕೂಟರ್‌ನಲ್ಲಿ ಅಹಮದಾಬಾದ್‌ ನಗರದ ಬೀದಿಬೀದಿಗಳನ್ನು ಮಂಗಳವಾರ ಸುತ್ತಾಡಿ ಸುಸ್ತಾದರು. ತನ್ನ ಮೊಟ್ಟೆ ಮಳಿಗೆಯನ್ನು ಹೊಟ್ಟೆಪಾಡಿಗಾಗಿ ಎಲ್ಲಿ ಇಡಬೇಕೆಂದು ತಿಳಿಯದೆ ಕಂಗಾಲಾದರು.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನ ಎಸ್ಟೇಟ್ ಮತ್ತು ಪಟ್ಟಣ ಅಭಿವೃದ್ಧಿ ವಿಭಾಗವು ಅಹಮದಾಬಾದ್‌ ನಗರದ ಪ್ರದೇಶಗಳಾದ ಜೋಧ್‌ಪುರ, ಮಣಿನಗರ, ವಸ್ತ್ರಾಪುರ, ಆಶ್ರಮ ರಸ್ತೆ ಮತ್ತು ಬೆಹ್ರಾಂಪುರದಲ್ಲಿ ಸುಮಾರು 50 ಮಳಿಗೆಗಳನ್ನು ಮಂಗಳವಾರ ಸಂಜೆ ವೇಳೆಗೆ ಎತ್ತಂಗಡಿ ಮಾಡಿತ್ತು.

ಇದನ್ನೂ ಓದಿರಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

“ಸಾಮಾನ್ಯವಾಗಿ ಈ ವೇಳೆಗೆ ಇಲ್ಲಿ ಸುಮಾರು ಹತ್ತರಿಂದ ಹನ್ನೆರಡು ಮೊಟ್ಟೆಯ ಮಳಿಗೆಗಳು ಇರುತ್ತಿದ್ದವು. ಇವತ್ತು ಯಾರೂ ಬಂದಿಲ್ಲ. ಎಲ್ಲರೂ ಹೆದರುತ್ತಿದ್ದಾರೆ. ಅಧಿಕಾರಿಗಳು ಇಂದು ಮಧ್ಯಾಹ್ನ ವಸ್ತ್ರಾಪುರದಲ್ಲಿ 11 ಗಾಡಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಮಗೆ ತಿಳಿಯಿತು” ಎಂದು ಬಿಹಾರದ ಮಧುಬನಿಯಿಂದ ವಲಸೆ ಬಂದ ವ್ಯಾಪಾರಿ ಅಳಲು ತೋಡಿಕೊಂಡರೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸುಮಾರು 20 ವರ್ಷಗಳ ಹಿಂದೆ ಅಹಮದಾಬಾದ್‌ಗೆ ವಲಸೆ ಬಂದ ಈ ವ್ಯಾಪಾರಿ, ತಾಲ್‌ಜೇಜ್ ಪ್ರದೇಶದಲ್ಲಿ ತನ್ನ ಮೊಟ್ಟೆ ಮಳಿಗೆಯನ್ನು ಇಟ್ಟುಕೊಂಡು ತರಹೇವಾರಿ ತಿನಿಸುಗಳನ್ನು ಮಾರುತ್ತಿದ್ದರು. ಬೀದಿಬದಿ ಆಹಾರವನ್ನೇ ಅವಲಂಬಿಸಿದ್ದವರು ಬಂದು ಸವಿಯುತ್ತಿದ್ದರು. ಮುಖ್ಯವಾಗಿ ಈ ವ್ಯಾಪಾರಿ ಮೂವರು ಯುವಕರಿಗೆ ಕೆಲಸ ಕೊಟ್ಟಿದ್ದರು.

ಇಲ್ಲಿನ ಸ್ಥಳೀಯ ಸಂಸ್ಥೆ ಮಾಂಸಾಹಾರಿ ಬಂಡಿಗಳ ತೆರವು ಕಾರ್ಯಾಚರಣೆಯನ್ನು ಸೋಮವಾರದಿಂದ ಆರಂಭಿಸಿದೆ. ಈ ಧಮನಕಾರಿ ಪ್ರವೃತ್ತಿಗೆ “ಅತಿಕ್ರಮಣ ವಿರೋಧಿ ಕಾರ್ಯಾಚರಣೆ” ಎಂದು ಚೆಂದದ ಹೆಸರಿಟ್ಟಿದ್ದು, ಬಡವ್ಯಾಪಾರಿಗಳ ಬಂಡಿಗಳು, ಕುರ್ಚಿಗಳು ಮತ್ತು ಇತರ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.

ವಾರಣಾಸಿಯಿಂದ ವಲಸೆ ಬಂದ ಮತ್ತೊಬ್ಬ ಯುವ ವ್ಯಾಪಾರಿ ನಗರದ ಮತ್ತೊಂದು ಭಾಗದಲ್ಲಿ ಆಸೆಗಣ್ಣಿನಿಂದ ಕಾಯುತ್ತ ಮೊಟ್ಟೆ ಅಂಗಡಿಯನ್ನು ತೆರೆಯಲು ಅನುಮತಿಯನ್ನು ನಿರೀಕ್ಷಿಸುತ್ತಿದ್ದರು. ಸುಮಾರು 15 ವರ್ಷಗಳಿಂದ ಅಹಮದಾಬಾದ್‌ನಲ್ಲಿರುವ ತನ್ನ ಚಿಕ್ಕಪ್ಪನ ಬೆನ್ನು ಹತ್ತಿ, ಕಾಲೇಜು ಬಿಟ್ಟು ಬಂದ ಈ ಯುವಕ ಎರಡು ತಿಂಗಳಿಂದ ಇಲ್ಲಿನ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದನು. “ಈಗ ಕೆಲಸ ಕಳೆದುಕೊಂಡರೆ ಮುಂದೇನು ಮಾಡಬೇಕೆಂದು ತಿಳಿಯುತ್ತಿಲ್ಲ” ಎಂದು ಕಂಗಾಲಾಗಿದ್ದಾನೆ.

ಬಿಜೆಪಿಯ ನಾಯಕರು ಮಾತ್ರ ವಿರೋಧಾಭಾಸಗಳ ಹೇಳಿಕೆ ನೀಡುತ್ತಾ, ವಾಸ್ತವದಲ್ಲಿ ಮಾಂಸಾಹಾರ ವಿರೋಧಿತನವನ್ನು ಕಾರ್ಯಗತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ‘ಜನರು ಇಷ್ಟ ಬಂದಿದ್ದು ತಿನ್ನುತ್ತಾರೆ. ಅದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಗುಜರಾತ್‌ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್‌.ಪಾಟೀಲ್‌ ಹೇಳುತ್ತಾರೆ. ಆದರೆ ಬಡವರ ವಿರೋಧಿ ಕಾರ್ಯಾಚರಣೆ, ಬಡವರ ನಿರ್ಮೂಲನೆ ಕಾರ್ಯಾಚರಣೆ ಶುರುವಾಗಿದೆ.

“ಯಾರೂ ಮಾಂಸಾಹಾರ ಮಳಿಗೆ ತೆರವು ನಿರ್ಧಾರವನ್ನು ತೆಗೆದುಕೊಂಡಿಲ್ಲ. ವ್ಯಾಪಾರಿಗಳ ಮೇಲೆ ಯಾವುದೇ ಕಾನೂನಾತ್ಮಕ ನಿಷೇಧವಿಲ್ಲ. ದೇಶದಲ್ಲಿ ಎರಡು ರೀತಿಯ ಜನರಿದ್ದಾರೆ: ಸಸ್ಯಾಹಾರಿ ಆಹಾರವನ್ನು ತಿನ್ನುವವರು ಮತ್ತು ಮಾಂಸಾಹಾರಿ ಆಹಾರವನ್ನು ಸೇವಿಸುವವರು. ತಮಗೆ ಬೇಕಾದುದನ್ನು ತಿನ್ನುವುದು ಜನರ ಹಕ್ಕು. ಯಾರೂ ಅವರನ್ನು ತಡೆಯಲು ಸಾಧ್ಯವಿಲ್ಲ. ಅವರು (ಮಾಂಸಾಹಾರ ಮಳಿಗೆ ಮಾಲೀಕರು) ನೈರ್ಮಲ್ಯವನ್ನು ಕಾಪಾಡಿಕೊಳ್ಳದಿದ್ದರೆ, ಸೂಕ್ತ ಕ್ರಮವನ್ನು ಎದುರಿಸಬೇಕಾಗುತ್ತದೆ. ಆದರೆ ಅವರನ್ನು ನಿಲ್ಲಿಸುವ ಅಥವಾ ತೆಗೆದುಹಾಕುವ ಬಗ್ಗೆ ಬಿಜೆಪಿ ಎಂದಿಗೂ ಯೋಚಿಸುವುದಿಲ್ಲ. ಈ ಕೆಲಸಗಳನ್ನೇ ಅವಲಂಬಿಸಿರುವ ಬಡವರಿದ್ದಾರೆ. ಯಾರೇ ಆಗಿರಲಿ, ಏನು ಮಾರಾಟ ಮಾಡಿದರೂ ಸಹಕರಿಸುತ್ತೇವೆ” ಎಂದು ಪಾಟೀಲ್ ಉದ್ಗರಿಸಿದ್ದರು. ಆದರೆ ಈ ಹೇಳಿಕೆಗೂ ಕ್ರಿಯೆಯೂ ವ್ಯತ್ಯಾಸ ಕಂಡು ಬರುತ್ತಿದೆ. ಗುಜರಾತ್‌‌ನ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿಯೇ ಅಧಿಕಾರ ನಡೆಸುತ್ತಿರುವುದು ವಾಸ್ತವ.


ಇದನ್ನೂ ಓದಿರಿ: ಡ್ರಗ್ಸ್‌ ಹಬ್‌ ಆಗುತ್ತಿದೆಯೇ ಗುಜರಾತ್‌?; ಮತ್ತೆ 600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...