Homeಮುಖಪುಟಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ತೊಂದರೆಗೆ ಸಿಲುಕಿರುವ ವ್ಯಾಪಾರಿಗಳ ನೋವಿನ ಕಥೆ ಇದು...

- Advertisement -
- Advertisement -

ಬೀದಿಬದಿಯ ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ಗುಜರಾತ್‌ ರಾಜ್ಯದಲ್ಲಿ ಮಾಂಸಾಹಾರ ಮಾರಾಟವನ್ನೇ ನಂಬಿಕೊಂಡಿದ್ದ ಬಡಪಾಯಿ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ.

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಹಲವು ಸ್ಥಳೀಯ ಸಂಸ್ಥೆಗಳು ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿವೆ. ಅಲಹಾಬಾದ್‌ದಂತಹ ಪ್ರಮುಖ ನಗರಗಳಲ್ಲಿ ಮಳಿಗೆಗಳ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಮಾಂಸಾಹಾರ ಮಳಿಗೆಗಳನ್ನೇ ನಂಬಿಕೊಂಡು ಬದುಕುತ್ತಿದ್ದ ಜನರ ಬದುಕು ಬೀದಿಗೆ ಬೀಳುವ ಆತಂಕ ಎದುರಾಗಿದೆ.

ರಾಮ್‌ ಉದ್ಗರ್‌ ಗೋಸಾಯ್‌ ಎಂಬ ವ್ಯಾಪಾರಿಯನ್ನೇ ನೋಡಿ. ಅಂಗಡಿಯನ್ನು ಎಲ್ಲಿ ಇಡಬೇಕೆಂದು ಗೊತ್ತಾಗದೆ ತನ್ನ ಸ್ಕೂಟರ್‌ನಲ್ಲಿ ಅಹಮದಾಬಾದ್‌ ನಗರದ ಬೀದಿಬೀದಿಗಳನ್ನು ಮಂಗಳವಾರ ಸುತ್ತಾಡಿ ಸುಸ್ತಾದರು. ತನ್ನ ಮೊಟ್ಟೆ ಮಳಿಗೆಯನ್ನು ಹೊಟ್ಟೆಪಾಡಿಗಾಗಿ ಎಲ್ಲಿ ಇಡಬೇಕೆಂದು ತಿಳಿಯದೆ ಕಂಗಾಲಾದರು.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನ ಎಸ್ಟೇಟ್ ಮತ್ತು ಪಟ್ಟಣ ಅಭಿವೃದ್ಧಿ ವಿಭಾಗವು ಅಹಮದಾಬಾದ್‌ ನಗರದ ಪ್ರದೇಶಗಳಾದ ಜೋಧ್‌ಪುರ, ಮಣಿನಗರ, ವಸ್ತ್ರಾಪುರ, ಆಶ್ರಮ ರಸ್ತೆ ಮತ್ತು ಬೆಹ್ರಾಂಪುರದಲ್ಲಿ ಸುಮಾರು 50 ಮಳಿಗೆಗಳನ್ನು ಮಂಗಳವಾರ ಸಂಜೆ ವೇಳೆಗೆ ಎತ್ತಂಗಡಿ ಮಾಡಿತ್ತು.

ಇದನ್ನೂ ಓದಿರಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

“ಸಾಮಾನ್ಯವಾಗಿ ಈ ವೇಳೆಗೆ ಇಲ್ಲಿ ಸುಮಾರು ಹತ್ತರಿಂದ ಹನ್ನೆರಡು ಮೊಟ್ಟೆಯ ಮಳಿಗೆಗಳು ಇರುತ್ತಿದ್ದವು. ಇವತ್ತು ಯಾರೂ ಬಂದಿಲ್ಲ. ಎಲ್ಲರೂ ಹೆದರುತ್ತಿದ್ದಾರೆ. ಅಧಿಕಾರಿಗಳು ಇಂದು ಮಧ್ಯಾಹ್ನ ವಸ್ತ್ರಾಪುರದಲ್ಲಿ 11 ಗಾಡಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಮಗೆ ತಿಳಿಯಿತು” ಎಂದು ಬಿಹಾರದ ಮಧುಬನಿಯಿಂದ ವಲಸೆ ಬಂದ ವ್ಯಾಪಾರಿ ಅಳಲು ತೋಡಿಕೊಂಡರೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸುಮಾರು 20 ವರ್ಷಗಳ ಹಿಂದೆ ಅಹಮದಾಬಾದ್‌ಗೆ ವಲಸೆ ಬಂದ ಈ ವ್ಯಾಪಾರಿ, ತಾಲ್‌ಜೇಜ್ ಪ್ರದೇಶದಲ್ಲಿ ತನ್ನ ಮೊಟ್ಟೆ ಮಳಿಗೆಯನ್ನು ಇಟ್ಟುಕೊಂಡು ತರಹೇವಾರಿ ತಿನಿಸುಗಳನ್ನು ಮಾರುತ್ತಿದ್ದರು. ಬೀದಿಬದಿ ಆಹಾರವನ್ನೇ ಅವಲಂಬಿಸಿದ್ದವರು ಬಂದು ಸವಿಯುತ್ತಿದ್ದರು. ಮುಖ್ಯವಾಗಿ ಈ ವ್ಯಾಪಾರಿ ಮೂವರು ಯುವಕರಿಗೆ ಕೆಲಸ ಕೊಟ್ಟಿದ್ದರು.

ಇಲ್ಲಿನ ಸ್ಥಳೀಯ ಸಂಸ್ಥೆ ಮಾಂಸಾಹಾರಿ ಬಂಡಿಗಳ ತೆರವು ಕಾರ್ಯಾಚರಣೆಯನ್ನು ಸೋಮವಾರದಿಂದ ಆರಂಭಿಸಿದೆ. ಈ ಧಮನಕಾರಿ ಪ್ರವೃತ್ತಿಗೆ “ಅತಿಕ್ರಮಣ ವಿರೋಧಿ ಕಾರ್ಯಾಚರಣೆ” ಎಂದು ಚೆಂದದ ಹೆಸರಿಟ್ಟಿದ್ದು, ಬಡವ್ಯಾಪಾರಿಗಳ ಬಂಡಿಗಳು, ಕುರ್ಚಿಗಳು ಮತ್ತು ಇತರ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.

ವಾರಣಾಸಿಯಿಂದ ವಲಸೆ ಬಂದ ಮತ್ತೊಬ್ಬ ಯುವ ವ್ಯಾಪಾರಿ ನಗರದ ಮತ್ತೊಂದು ಭಾಗದಲ್ಲಿ ಆಸೆಗಣ್ಣಿನಿಂದ ಕಾಯುತ್ತ ಮೊಟ್ಟೆ ಅಂಗಡಿಯನ್ನು ತೆರೆಯಲು ಅನುಮತಿಯನ್ನು ನಿರೀಕ್ಷಿಸುತ್ತಿದ್ದರು. ಸುಮಾರು 15 ವರ್ಷಗಳಿಂದ ಅಹಮದಾಬಾದ್‌ನಲ್ಲಿರುವ ತನ್ನ ಚಿಕ್ಕಪ್ಪನ ಬೆನ್ನು ಹತ್ತಿ, ಕಾಲೇಜು ಬಿಟ್ಟು ಬಂದ ಈ ಯುವಕ ಎರಡು ತಿಂಗಳಿಂದ ಇಲ್ಲಿನ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದನು. “ಈಗ ಕೆಲಸ ಕಳೆದುಕೊಂಡರೆ ಮುಂದೇನು ಮಾಡಬೇಕೆಂದು ತಿಳಿಯುತ್ತಿಲ್ಲ” ಎಂದು ಕಂಗಾಲಾಗಿದ್ದಾನೆ.

ಬಿಜೆಪಿಯ ನಾಯಕರು ಮಾತ್ರ ವಿರೋಧಾಭಾಸಗಳ ಹೇಳಿಕೆ ನೀಡುತ್ತಾ, ವಾಸ್ತವದಲ್ಲಿ ಮಾಂಸಾಹಾರ ವಿರೋಧಿತನವನ್ನು ಕಾರ್ಯಗತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ‘ಜನರು ಇಷ್ಟ ಬಂದಿದ್ದು ತಿನ್ನುತ್ತಾರೆ. ಅದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಗುಜರಾತ್‌ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್‌.ಪಾಟೀಲ್‌ ಹೇಳುತ್ತಾರೆ. ಆದರೆ ಬಡವರ ವಿರೋಧಿ ಕಾರ್ಯಾಚರಣೆ, ಬಡವರ ನಿರ್ಮೂಲನೆ ಕಾರ್ಯಾಚರಣೆ ಶುರುವಾಗಿದೆ.

“ಯಾರೂ ಮಾಂಸಾಹಾರ ಮಳಿಗೆ ತೆರವು ನಿರ್ಧಾರವನ್ನು ತೆಗೆದುಕೊಂಡಿಲ್ಲ. ವ್ಯಾಪಾರಿಗಳ ಮೇಲೆ ಯಾವುದೇ ಕಾನೂನಾತ್ಮಕ ನಿಷೇಧವಿಲ್ಲ. ದೇಶದಲ್ಲಿ ಎರಡು ರೀತಿಯ ಜನರಿದ್ದಾರೆ: ಸಸ್ಯಾಹಾರಿ ಆಹಾರವನ್ನು ತಿನ್ನುವವರು ಮತ್ತು ಮಾಂಸಾಹಾರಿ ಆಹಾರವನ್ನು ಸೇವಿಸುವವರು. ತಮಗೆ ಬೇಕಾದುದನ್ನು ತಿನ್ನುವುದು ಜನರ ಹಕ್ಕು. ಯಾರೂ ಅವರನ್ನು ತಡೆಯಲು ಸಾಧ್ಯವಿಲ್ಲ. ಅವರು (ಮಾಂಸಾಹಾರ ಮಳಿಗೆ ಮಾಲೀಕರು) ನೈರ್ಮಲ್ಯವನ್ನು ಕಾಪಾಡಿಕೊಳ್ಳದಿದ್ದರೆ, ಸೂಕ್ತ ಕ್ರಮವನ್ನು ಎದುರಿಸಬೇಕಾಗುತ್ತದೆ. ಆದರೆ ಅವರನ್ನು ನಿಲ್ಲಿಸುವ ಅಥವಾ ತೆಗೆದುಹಾಕುವ ಬಗ್ಗೆ ಬಿಜೆಪಿ ಎಂದಿಗೂ ಯೋಚಿಸುವುದಿಲ್ಲ. ಈ ಕೆಲಸಗಳನ್ನೇ ಅವಲಂಬಿಸಿರುವ ಬಡವರಿದ್ದಾರೆ. ಯಾರೇ ಆಗಿರಲಿ, ಏನು ಮಾರಾಟ ಮಾಡಿದರೂ ಸಹಕರಿಸುತ್ತೇವೆ” ಎಂದು ಪಾಟೀಲ್ ಉದ್ಗರಿಸಿದ್ದರು. ಆದರೆ ಈ ಹೇಳಿಕೆಗೂ ಕ್ರಿಯೆಯೂ ವ್ಯತ್ಯಾಸ ಕಂಡು ಬರುತ್ತಿದೆ. ಗುಜರಾತ್‌‌ನ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿಯೇ ಅಧಿಕಾರ ನಡೆಸುತ್ತಿರುವುದು ವಾಸ್ತವ.


ಇದನ್ನೂ ಓದಿರಿ: ಡ್ರಗ್ಸ್‌ ಹಬ್‌ ಆಗುತ್ತಿದೆಯೇ ಗುಜರಾತ್‌?; ಮತ್ತೆ 600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...