Homeಮುಖಪುಟಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ತೊಂದರೆಗೆ ಸಿಲುಕಿರುವ ವ್ಯಾಪಾರಿಗಳ ನೋವಿನ ಕಥೆ ಇದು...

- Advertisement -
- Advertisement -

ಬೀದಿಬದಿಯ ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ಗುಜರಾತ್‌ ರಾಜ್ಯದಲ್ಲಿ ಮಾಂಸಾಹಾರ ಮಾರಾಟವನ್ನೇ ನಂಬಿಕೊಂಡಿದ್ದ ಬಡಪಾಯಿ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ.

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಹಲವು ಸ್ಥಳೀಯ ಸಂಸ್ಥೆಗಳು ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿವೆ. ಅಲಹಾಬಾದ್‌ದಂತಹ ಪ್ರಮುಖ ನಗರಗಳಲ್ಲಿ ಮಳಿಗೆಗಳ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಮಾಂಸಾಹಾರ ಮಳಿಗೆಗಳನ್ನೇ ನಂಬಿಕೊಂಡು ಬದುಕುತ್ತಿದ್ದ ಜನರ ಬದುಕು ಬೀದಿಗೆ ಬೀಳುವ ಆತಂಕ ಎದುರಾಗಿದೆ.

ರಾಮ್‌ ಉದ್ಗರ್‌ ಗೋಸಾಯ್‌ ಎಂಬ ವ್ಯಾಪಾರಿಯನ್ನೇ ನೋಡಿ. ಅಂಗಡಿಯನ್ನು ಎಲ್ಲಿ ಇಡಬೇಕೆಂದು ಗೊತ್ತಾಗದೆ ತನ್ನ ಸ್ಕೂಟರ್‌ನಲ್ಲಿ ಅಹಮದಾಬಾದ್‌ ನಗರದ ಬೀದಿಬೀದಿಗಳನ್ನು ಮಂಗಳವಾರ ಸುತ್ತಾಡಿ ಸುಸ್ತಾದರು. ತನ್ನ ಮೊಟ್ಟೆ ಮಳಿಗೆಯನ್ನು ಹೊಟ್ಟೆಪಾಡಿಗಾಗಿ ಎಲ್ಲಿ ಇಡಬೇಕೆಂದು ತಿಳಿಯದೆ ಕಂಗಾಲಾದರು.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನ ಎಸ್ಟೇಟ್ ಮತ್ತು ಪಟ್ಟಣ ಅಭಿವೃದ್ಧಿ ವಿಭಾಗವು ಅಹಮದಾಬಾದ್‌ ನಗರದ ಪ್ರದೇಶಗಳಾದ ಜೋಧ್‌ಪುರ, ಮಣಿನಗರ, ವಸ್ತ್ರಾಪುರ, ಆಶ್ರಮ ರಸ್ತೆ ಮತ್ತು ಬೆಹ್ರಾಂಪುರದಲ್ಲಿ ಸುಮಾರು 50 ಮಳಿಗೆಗಳನ್ನು ಮಂಗಳವಾರ ಸಂಜೆ ವೇಳೆಗೆ ಎತ್ತಂಗಡಿ ಮಾಡಿತ್ತು.

ಇದನ್ನೂ ಓದಿರಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

“ಸಾಮಾನ್ಯವಾಗಿ ಈ ವೇಳೆಗೆ ಇಲ್ಲಿ ಸುಮಾರು ಹತ್ತರಿಂದ ಹನ್ನೆರಡು ಮೊಟ್ಟೆಯ ಮಳಿಗೆಗಳು ಇರುತ್ತಿದ್ದವು. ಇವತ್ತು ಯಾರೂ ಬಂದಿಲ್ಲ. ಎಲ್ಲರೂ ಹೆದರುತ್ತಿದ್ದಾರೆ. ಅಧಿಕಾರಿಗಳು ಇಂದು ಮಧ್ಯಾಹ್ನ ವಸ್ತ್ರಾಪುರದಲ್ಲಿ 11 ಗಾಡಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಮಗೆ ತಿಳಿಯಿತು” ಎಂದು ಬಿಹಾರದ ಮಧುಬನಿಯಿಂದ ವಲಸೆ ಬಂದ ವ್ಯಾಪಾರಿ ಅಳಲು ತೋಡಿಕೊಂಡರೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸುಮಾರು 20 ವರ್ಷಗಳ ಹಿಂದೆ ಅಹಮದಾಬಾದ್‌ಗೆ ವಲಸೆ ಬಂದ ಈ ವ್ಯಾಪಾರಿ, ತಾಲ್‌ಜೇಜ್ ಪ್ರದೇಶದಲ್ಲಿ ತನ್ನ ಮೊಟ್ಟೆ ಮಳಿಗೆಯನ್ನು ಇಟ್ಟುಕೊಂಡು ತರಹೇವಾರಿ ತಿನಿಸುಗಳನ್ನು ಮಾರುತ್ತಿದ್ದರು. ಬೀದಿಬದಿ ಆಹಾರವನ್ನೇ ಅವಲಂಬಿಸಿದ್ದವರು ಬಂದು ಸವಿಯುತ್ತಿದ್ದರು. ಮುಖ್ಯವಾಗಿ ಈ ವ್ಯಾಪಾರಿ ಮೂವರು ಯುವಕರಿಗೆ ಕೆಲಸ ಕೊಟ್ಟಿದ್ದರು.

ಇಲ್ಲಿನ ಸ್ಥಳೀಯ ಸಂಸ್ಥೆ ಮಾಂಸಾಹಾರಿ ಬಂಡಿಗಳ ತೆರವು ಕಾರ್ಯಾಚರಣೆಯನ್ನು ಸೋಮವಾರದಿಂದ ಆರಂಭಿಸಿದೆ. ಈ ಧಮನಕಾರಿ ಪ್ರವೃತ್ತಿಗೆ “ಅತಿಕ್ರಮಣ ವಿರೋಧಿ ಕಾರ್ಯಾಚರಣೆ” ಎಂದು ಚೆಂದದ ಹೆಸರಿಟ್ಟಿದ್ದು, ಬಡವ್ಯಾಪಾರಿಗಳ ಬಂಡಿಗಳು, ಕುರ್ಚಿಗಳು ಮತ್ತು ಇತರ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.

ವಾರಣಾಸಿಯಿಂದ ವಲಸೆ ಬಂದ ಮತ್ತೊಬ್ಬ ಯುವ ವ್ಯಾಪಾರಿ ನಗರದ ಮತ್ತೊಂದು ಭಾಗದಲ್ಲಿ ಆಸೆಗಣ್ಣಿನಿಂದ ಕಾಯುತ್ತ ಮೊಟ್ಟೆ ಅಂಗಡಿಯನ್ನು ತೆರೆಯಲು ಅನುಮತಿಯನ್ನು ನಿರೀಕ್ಷಿಸುತ್ತಿದ್ದರು. ಸುಮಾರು 15 ವರ್ಷಗಳಿಂದ ಅಹಮದಾಬಾದ್‌ನಲ್ಲಿರುವ ತನ್ನ ಚಿಕ್ಕಪ್ಪನ ಬೆನ್ನು ಹತ್ತಿ, ಕಾಲೇಜು ಬಿಟ್ಟು ಬಂದ ಈ ಯುವಕ ಎರಡು ತಿಂಗಳಿಂದ ಇಲ್ಲಿನ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದನು. “ಈಗ ಕೆಲಸ ಕಳೆದುಕೊಂಡರೆ ಮುಂದೇನು ಮಾಡಬೇಕೆಂದು ತಿಳಿಯುತ್ತಿಲ್ಲ” ಎಂದು ಕಂಗಾಲಾಗಿದ್ದಾನೆ.

ಬಿಜೆಪಿಯ ನಾಯಕರು ಮಾತ್ರ ವಿರೋಧಾಭಾಸಗಳ ಹೇಳಿಕೆ ನೀಡುತ್ತಾ, ವಾಸ್ತವದಲ್ಲಿ ಮಾಂಸಾಹಾರ ವಿರೋಧಿತನವನ್ನು ಕಾರ್ಯಗತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ‘ಜನರು ಇಷ್ಟ ಬಂದಿದ್ದು ತಿನ್ನುತ್ತಾರೆ. ಅದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಗುಜರಾತ್‌ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್‌.ಪಾಟೀಲ್‌ ಹೇಳುತ್ತಾರೆ. ಆದರೆ ಬಡವರ ವಿರೋಧಿ ಕಾರ್ಯಾಚರಣೆ, ಬಡವರ ನಿರ್ಮೂಲನೆ ಕಾರ್ಯಾಚರಣೆ ಶುರುವಾಗಿದೆ.

“ಯಾರೂ ಮಾಂಸಾಹಾರ ಮಳಿಗೆ ತೆರವು ನಿರ್ಧಾರವನ್ನು ತೆಗೆದುಕೊಂಡಿಲ್ಲ. ವ್ಯಾಪಾರಿಗಳ ಮೇಲೆ ಯಾವುದೇ ಕಾನೂನಾತ್ಮಕ ನಿಷೇಧವಿಲ್ಲ. ದೇಶದಲ್ಲಿ ಎರಡು ರೀತಿಯ ಜನರಿದ್ದಾರೆ: ಸಸ್ಯಾಹಾರಿ ಆಹಾರವನ್ನು ತಿನ್ನುವವರು ಮತ್ತು ಮಾಂಸಾಹಾರಿ ಆಹಾರವನ್ನು ಸೇವಿಸುವವರು. ತಮಗೆ ಬೇಕಾದುದನ್ನು ತಿನ್ನುವುದು ಜನರ ಹಕ್ಕು. ಯಾರೂ ಅವರನ್ನು ತಡೆಯಲು ಸಾಧ್ಯವಿಲ್ಲ. ಅವರು (ಮಾಂಸಾಹಾರ ಮಳಿಗೆ ಮಾಲೀಕರು) ನೈರ್ಮಲ್ಯವನ್ನು ಕಾಪಾಡಿಕೊಳ್ಳದಿದ್ದರೆ, ಸೂಕ್ತ ಕ್ರಮವನ್ನು ಎದುರಿಸಬೇಕಾಗುತ್ತದೆ. ಆದರೆ ಅವರನ್ನು ನಿಲ್ಲಿಸುವ ಅಥವಾ ತೆಗೆದುಹಾಕುವ ಬಗ್ಗೆ ಬಿಜೆಪಿ ಎಂದಿಗೂ ಯೋಚಿಸುವುದಿಲ್ಲ. ಈ ಕೆಲಸಗಳನ್ನೇ ಅವಲಂಬಿಸಿರುವ ಬಡವರಿದ್ದಾರೆ. ಯಾರೇ ಆಗಿರಲಿ, ಏನು ಮಾರಾಟ ಮಾಡಿದರೂ ಸಹಕರಿಸುತ್ತೇವೆ” ಎಂದು ಪಾಟೀಲ್ ಉದ್ಗರಿಸಿದ್ದರು. ಆದರೆ ಈ ಹೇಳಿಕೆಗೂ ಕ್ರಿಯೆಯೂ ವ್ಯತ್ಯಾಸ ಕಂಡು ಬರುತ್ತಿದೆ. ಗುಜರಾತ್‌‌ನ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿಯೇ ಅಧಿಕಾರ ನಡೆಸುತ್ತಿರುವುದು ವಾಸ್ತವ.


ಇದನ್ನೂ ಓದಿರಿ: ಡ್ರಗ್ಸ್‌ ಹಬ್‌ ಆಗುತ್ತಿದೆಯೇ ಗುಜರಾತ್‌?; ಮತ್ತೆ 600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...