Homeಮುಖಪುಟಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ತೊಂದರೆಗೆ ಸಿಲುಕಿರುವ ವ್ಯಾಪಾರಿಗಳ ನೋವಿನ ಕಥೆ ಇದು...

- Advertisement -
- Advertisement -

ಬೀದಿಬದಿಯ ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ಗುಜರಾತ್‌ ರಾಜ್ಯದಲ್ಲಿ ಮಾಂಸಾಹಾರ ಮಾರಾಟವನ್ನೇ ನಂಬಿಕೊಂಡಿದ್ದ ಬಡಪಾಯಿ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ.

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಹಲವು ಸ್ಥಳೀಯ ಸಂಸ್ಥೆಗಳು ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿವೆ. ಅಲಹಾಬಾದ್‌ದಂತಹ ಪ್ರಮುಖ ನಗರಗಳಲ್ಲಿ ಮಳಿಗೆಗಳ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಮಾಂಸಾಹಾರ ಮಳಿಗೆಗಳನ್ನೇ ನಂಬಿಕೊಂಡು ಬದುಕುತ್ತಿದ್ದ ಜನರ ಬದುಕು ಬೀದಿಗೆ ಬೀಳುವ ಆತಂಕ ಎದುರಾಗಿದೆ.

ರಾಮ್‌ ಉದ್ಗರ್‌ ಗೋಸಾಯ್‌ ಎಂಬ ವ್ಯಾಪಾರಿಯನ್ನೇ ನೋಡಿ. ಅಂಗಡಿಯನ್ನು ಎಲ್ಲಿ ಇಡಬೇಕೆಂದು ಗೊತ್ತಾಗದೆ ತನ್ನ ಸ್ಕೂಟರ್‌ನಲ್ಲಿ ಅಹಮದಾಬಾದ್‌ ನಗರದ ಬೀದಿಬೀದಿಗಳನ್ನು ಮಂಗಳವಾರ ಸುತ್ತಾಡಿ ಸುಸ್ತಾದರು. ತನ್ನ ಮೊಟ್ಟೆ ಮಳಿಗೆಯನ್ನು ಹೊಟ್ಟೆಪಾಡಿಗಾಗಿ ಎಲ್ಲಿ ಇಡಬೇಕೆಂದು ತಿಳಿಯದೆ ಕಂಗಾಲಾದರು.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನ ಎಸ್ಟೇಟ್ ಮತ್ತು ಪಟ್ಟಣ ಅಭಿವೃದ್ಧಿ ವಿಭಾಗವು ಅಹಮದಾಬಾದ್‌ ನಗರದ ಪ್ರದೇಶಗಳಾದ ಜೋಧ್‌ಪುರ, ಮಣಿನಗರ, ವಸ್ತ್ರಾಪುರ, ಆಶ್ರಮ ರಸ್ತೆ ಮತ್ತು ಬೆಹ್ರಾಂಪುರದಲ್ಲಿ ಸುಮಾರು 50 ಮಳಿಗೆಗಳನ್ನು ಮಂಗಳವಾರ ಸಂಜೆ ವೇಳೆಗೆ ಎತ್ತಂಗಡಿ ಮಾಡಿತ್ತು.

ಇದನ್ನೂ ಓದಿರಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

“ಸಾಮಾನ್ಯವಾಗಿ ಈ ವೇಳೆಗೆ ಇಲ್ಲಿ ಸುಮಾರು ಹತ್ತರಿಂದ ಹನ್ನೆರಡು ಮೊಟ್ಟೆಯ ಮಳಿಗೆಗಳು ಇರುತ್ತಿದ್ದವು. ಇವತ್ತು ಯಾರೂ ಬಂದಿಲ್ಲ. ಎಲ್ಲರೂ ಹೆದರುತ್ತಿದ್ದಾರೆ. ಅಧಿಕಾರಿಗಳು ಇಂದು ಮಧ್ಯಾಹ್ನ ವಸ್ತ್ರಾಪುರದಲ್ಲಿ 11 ಗಾಡಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಮಗೆ ತಿಳಿಯಿತು” ಎಂದು ಬಿಹಾರದ ಮಧುಬನಿಯಿಂದ ವಲಸೆ ಬಂದ ವ್ಯಾಪಾರಿ ಅಳಲು ತೋಡಿಕೊಂಡರೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸುಮಾರು 20 ವರ್ಷಗಳ ಹಿಂದೆ ಅಹಮದಾಬಾದ್‌ಗೆ ವಲಸೆ ಬಂದ ಈ ವ್ಯಾಪಾರಿ, ತಾಲ್‌ಜೇಜ್ ಪ್ರದೇಶದಲ್ಲಿ ತನ್ನ ಮೊಟ್ಟೆ ಮಳಿಗೆಯನ್ನು ಇಟ್ಟುಕೊಂಡು ತರಹೇವಾರಿ ತಿನಿಸುಗಳನ್ನು ಮಾರುತ್ತಿದ್ದರು. ಬೀದಿಬದಿ ಆಹಾರವನ್ನೇ ಅವಲಂಬಿಸಿದ್ದವರು ಬಂದು ಸವಿಯುತ್ತಿದ್ದರು. ಮುಖ್ಯವಾಗಿ ಈ ವ್ಯಾಪಾರಿ ಮೂವರು ಯುವಕರಿಗೆ ಕೆಲಸ ಕೊಟ್ಟಿದ್ದರು.

ಇಲ್ಲಿನ ಸ್ಥಳೀಯ ಸಂಸ್ಥೆ ಮಾಂಸಾಹಾರಿ ಬಂಡಿಗಳ ತೆರವು ಕಾರ್ಯಾಚರಣೆಯನ್ನು ಸೋಮವಾರದಿಂದ ಆರಂಭಿಸಿದೆ. ಈ ಧಮನಕಾರಿ ಪ್ರವೃತ್ತಿಗೆ “ಅತಿಕ್ರಮಣ ವಿರೋಧಿ ಕಾರ್ಯಾಚರಣೆ” ಎಂದು ಚೆಂದದ ಹೆಸರಿಟ್ಟಿದ್ದು, ಬಡವ್ಯಾಪಾರಿಗಳ ಬಂಡಿಗಳು, ಕುರ್ಚಿಗಳು ಮತ್ತು ಇತರ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.

ವಾರಣಾಸಿಯಿಂದ ವಲಸೆ ಬಂದ ಮತ್ತೊಬ್ಬ ಯುವ ವ್ಯಾಪಾರಿ ನಗರದ ಮತ್ತೊಂದು ಭಾಗದಲ್ಲಿ ಆಸೆಗಣ್ಣಿನಿಂದ ಕಾಯುತ್ತ ಮೊಟ್ಟೆ ಅಂಗಡಿಯನ್ನು ತೆರೆಯಲು ಅನುಮತಿಯನ್ನು ನಿರೀಕ್ಷಿಸುತ್ತಿದ್ದರು. ಸುಮಾರು 15 ವರ್ಷಗಳಿಂದ ಅಹಮದಾಬಾದ್‌ನಲ್ಲಿರುವ ತನ್ನ ಚಿಕ್ಕಪ್ಪನ ಬೆನ್ನು ಹತ್ತಿ, ಕಾಲೇಜು ಬಿಟ್ಟು ಬಂದ ಈ ಯುವಕ ಎರಡು ತಿಂಗಳಿಂದ ಇಲ್ಲಿನ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದನು. “ಈಗ ಕೆಲಸ ಕಳೆದುಕೊಂಡರೆ ಮುಂದೇನು ಮಾಡಬೇಕೆಂದು ತಿಳಿಯುತ್ತಿಲ್ಲ” ಎಂದು ಕಂಗಾಲಾಗಿದ್ದಾನೆ.

ಬಿಜೆಪಿಯ ನಾಯಕರು ಮಾತ್ರ ವಿರೋಧಾಭಾಸಗಳ ಹೇಳಿಕೆ ನೀಡುತ್ತಾ, ವಾಸ್ತವದಲ್ಲಿ ಮಾಂಸಾಹಾರ ವಿರೋಧಿತನವನ್ನು ಕಾರ್ಯಗತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ‘ಜನರು ಇಷ್ಟ ಬಂದಿದ್ದು ತಿನ್ನುತ್ತಾರೆ. ಅದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಗುಜರಾತ್‌ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್‌.ಪಾಟೀಲ್‌ ಹೇಳುತ್ತಾರೆ. ಆದರೆ ಬಡವರ ವಿರೋಧಿ ಕಾರ್ಯಾಚರಣೆ, ಬಡವರ ನಿರ್ಮೂಲನೆ ಕಾರ್ಯಾಚರಣೆ ಶುರುವಾಗಿದೆ.

“ಯಾರೂ ಮಾಂಸಾಹಾರ ಮಳಿಗೆ ತೆರವು ನಿರ್ಧಾರವನ್ನು ತೆಗೆದುಕೊಂಡಿಲ್ಲ. ವ್ಯಾಪಾರಿಗಳ ಮೇಲೆ ಯಾವುದೇ ಕಾನೂನಾತ್ಮಕ ನಿಷೇಧವಿಲ್ಲ. ದೇಶದಲ್ಲಿ ಎರಡು ರೀತಿಯ ಜನರಿದ್ದಾರೆ: ಸಸ್ಯಾಹಾರಿ ಆಹಾರವನ್ನು ತಿನ್ನುವವರು ಮತ್ತು ಮಾಂಸಾಹಾರಿ ಆಹಾರವನ್ನು ಸೇವಿಸುವವರು. ತಮಗೆ ಬೇಕಾದುದನ್ನು ತಿನ್ನುವುದು ಜನರ ಹಕ್ಕು. ಯಾರೂ ಅವರನ್ನು ತಡೆಯಲು ಸಾಧ್ಯವಿಲ್ಲ. ಅವರು (ಮಾಂಸಾಹಾರ ಮಳಿಗೆ ಮಾಲೀಕರು) ನೈರ್ಮಲ್ಯವನ್ನು ಕಾಪಾಡಿಕೊಳ್ಳದಿದ್ದರೆ, ಸೂಕ್ತ ಕ್ರಮವನ್ನು ಎದುರಿಸಬೇಕಾಗುತ್ತದೆ. ಆದರೆ ಅವರನ್ನು ನಿಲ್ಲಿಸುವ ಅಥವಾ ತೆಗೆದುಹಾಕುವ ಬಗ್ಗೆ ಬಿಜೆಪಿ ಎಂದಿಗೂ ಯೋಚಿಸುವುದಿಲ್ಲ. ಈ ಕೆಲಸಗಳನ್ನೇ ಅವಲಂಬಿಸಿರುವ ಬಡವರಿದ್ದಾರೆ. ಯಾರೇ ಆಗಿರಲಿ, ಏನು ಮಾರಾಟ ಮಾಡಿದರೂ ಸಹಕರಿಸುತ್ತೇವೆ” ಎಂದು ಪಾಟೀಲ್ ಉದ್ಗರಿಸಿದ್ದರು. ಆದರೆ ಈ ಹೇಳಿಕೆಗೂ ಕ್ರಿಯೆಯೂ ವ್ಯತ್ಯಾಸ ಕಂಡು ಬರುತ್ತಿದೆ. ಗುಜರಾತ್‌‌ನ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿಯೇ ಅಧಿಕಾರ ನಡೆಸುತ್ತಿರುವುದು ವಾಸ್ತವ.


ಇದನ್ನೂ ಓದಿರಿ: ಡ್ರಗ್ಸ್‌ ಹಬ್‌ ಆಗುತ್ತಿದೆಯೇ ಗುಜರಾತ್‌?; ಮತ್ತೆ 600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...