Homeಮುಖಪುಟರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

ರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

- Advertisement -
- Advertisement -

ರಷ್ಯಾ ಪರವಾಗಿ ಹೋರಾಡಿದ ಆರೋಪದ ಮೇಲೆ ಪ್ರಸ್ತುತ ಉಕ್ರೇನಿಯನ್ ಬಂಧನದಲ್ಲಿರುವ ಗುಜರಾತ್‌ನ ಮೊರ್ಬಿ ಜಿಲ್ಲೆಯ 23 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಿಡುಗಡೆ ಮಾಡಿ, ಸಹಾಯ ಮಾಡುವಂತೆ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

ತಮ್ಮ ಕುಟುಂಬಕ್ಕೆ ಕಳುಹಿಸಲಾದ ವೀಡಿಯೊ ಸಂದೇಶಗಳಲ್ಲಿ, ಅಧ್ಯಯನ ಅಥವಾ ಕೆಲಸಕ್ಕಾಗಿ ರಷ್ಯಾಕ್ಕೆ ಹೋಗಲು ಯೋಜಿಸುತ್ತಿರುವ ಭಾರತೀಯ ನಾಗರಿಕರು ವಂಚನೆಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಅವರು ಎಚ್ಚರಿಸಿದ್ದಾರೆ.

ಗುಜರಾತ್‌ ಮೊರ್ಬಿ ನಿವಾಸಿ ಸಾಹಿಲ್ ಮೊಹಮ್ಮದ್ ಹುಸೇನ್ ಮಜೋತಿ ಎಂಬ ವ್ಯಕ್ತಿ, ಈ ಅಕ್ಟೋಬರ್ ಆರಂಭದಲ್ಲಿ ಉಕ್ರೇನಿಯನ್ ಪಡೆಗಳಿಗೆ ಶರಣಾಗುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಬಿಡುಗಡೆ ಮಾಡಿದ ನಂತರ ಸುದ್ದಿಯಾದರು.

ಮಜೋತಿ, ಜನವರಿ 10, 2024 ರಂದು ಐಟಿಎಂಒ ವಿಶ್ವವಿದ್ಯಾಲಯದಲ್ಲಿ ರಷ್ಯನ್ ಭಾಷೆ ಮತ್ತು ಸಂಸ್ಕೃತಿಯಲ್ಲಿ ಕೋರ್ಸ್ ಅನ್ನು ಮುಂದುವರಿಸಲು ವಿದ್ಯಾರ್ಥಿ ವೀಸಾದಲ್ಲಿ ಸೇಂಟ್ ಪೀಟರ್ಸ್‌ಬರ್ಗ್‌ಗೆ ಪ್ರಯಾಣ ಬೆಳೆಸಿದ್ದರು.

ನಂತರ ಅವರು ಕಾನೂನು ತೊಂದರೆಯಲ್ಲಿ ಸಿಲುಕಿಕೊಂಡು, ರಷ್ಯಾದಲ್ಲಿ ಜೈಲಿನಲ್ಲಿದ್ದರು. ಉಕ್ರೇನಿಯನ್ ಪಡೆಗಳಿಂದ ಸೆರೆಹಿಡಿಯಲ್ಪಡುವ ಮೊದಲು ರಷ್ಯಾದ ಮಿಲಿಟರಿಗೆ ಸೇರಲು ಒತ್ತಾಯಿಸಲಾಯಿತು ಎಂದು ಆರೋಪಿಸಲಾಗಿದೆ.

ಭಾನುವಾರ ರಾತ್ರಿ ಅವರ ಕುಟುಂಬಕ್ಕೆ ಬಂದಿದೆ ಮತ್ತು ಉಕ್ರೇನಿಯನ್ ಅಧಿಕಾರಿಗಳು ಹಂಚಿಕೊಂಡಿದ್ದಾರೆ ಎಂದು ಹೇಳಲಾದ ಎರಡು ವೀಡಿಯೊ ಸಂದೇಶಗಳಲ್ಲಿ, ಒಂದು ಇಂಗ್ಲಿಷ್ ಮತ್ತು ಇನ್ನೊಂದು ಹಿಂದಿಯಲ್ಲಿದೆ. ಮಜೋತಿ, ತಮ್ಮ ಪರಿಸ್ಥಿತಿಯನ್ನು ಹತಾಶ ಎಂದು ವಿವರಿಸಿದ್ದಾರೆ.

“ಸದ್ಯ ನಾನು ಯುದ್ಧ ಅಪರಾಧಿಯಾಗಿ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದೇನೆ. ನಾನು ಹತಾಶನಾಗಿದ್ದೇನೆ. ಭವಿಷ್ಯದಲ್ಲಿ ಏನಾಗುತ್ತದೆ ಎಂದು ತಿಳಿದಿಲ್ಲ” ಎಂದು ಅವರು ವೀಡಿಯೊಗಳಲ್ಲಿ ಒಂದರಲ್ಲಿ ಹೇಳುತ್ತಾರೆ. “ಉನ್ನತ ಅಧ್ಯಯನ ಅಥವಾ ಕೆಲಸಕ್ಕಾಗಿ ರಷ್ಯಾಕ್ಕೆ ಬರುವವರು ಬಹಳ ಜಾಗರೂಕರಾಗಿರಬೇಕು. ಇಲ್ಲಿ ಅನೇಕ ವಂಚಕರಿದ್ದಾರೆ. ನೀವು ಕ್ರಿಮಿನಲ್, ಮಾದಕ ದ್ರವ್ಯ ಅಥವಾ ಅಕ್ರಮ ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು. ಸಾಧ್ಯವಾದಷ್ಟು, ಇದೆಲ್ಲದರಿಂದ ದೂರವಿರಿ” ಎಂದು ಹೇಳಿದ್ದಾರೆ.

ಭಾರತೀಯ ಅಧಿಕಾರಿಗಳಲ್ಲಿ ಮನವಿ ಮಾಡಿರುವ ಮಜೋತಿ, “ದಯವಿಟ್ಟು ನನಗೆ ಸಹಾಯ ಮಾಡಬೇಕು ಎಂದು ನಾನು ಭಾರತ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ವಿನಂತಿಸುತ್ತೇನೆ” ಎಂದು ಹೆಳಿದ್ದಾರೆ.

ಇಂಗ್ಲಿಷ್ ಭಾಷೆಯ ವೀಡಿಯೊದಲ್ಲಿ ಮಾತನಾಡಿರುವ ಅವರು, ಉಕ್ರೇನಿಯನ್ ಮಿಲಿಟರಿ ಜೈಲಿನಲ್ಲಿ ನಾನು ಬಂಧಿಸಲ್ಪಟ್ಟಿದ್ದೇನೆ. ರಷ್ಯಾದ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಮಾತ್ರ ಯುದ್ಧದಲ್ಲಿ ಹೋರಾಡಲು ಒಪ್ಪಂದಕ್ಕೆ ಸಹಿ ಹಾಕಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

“ನಾನು ರಷ್ಯಾದ ಜೈಲಿನಲ್ಲಿ ಸಿಲುಕಿದ್ದಾಗ ಯುದ್ಧ ಒಪ್ಪಂದಕ್ಕೆ ಸಹಿ ಹಾಕಿದೆ. ಅದು ನನ್ನ ಜೀವನದ ದೊಡ್ಡ ತಪ್ಪು. ಭಾರತೀಯ ಅಧಿಕಾರಿಗಳು ತಮ್ಮ ಮನೆಗೆ ಮರಳಲು ಅನುಕೂಲವಾಗುವಂತೆ ರಷ್ಯಾದೊಂದಿಗೆ ತಮ್ಮ ಪ್ರಕರಣದ ಕುರಿತು ಮಾತನಾಡಬೇಕು” ಎಂದು ಮನವಿ ಮಾಡಿದ್ದಾರೆ.

ರಷ್ಯಾದಲ್ಲಿ ಮಾದಕವಸ್ತು ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಯಿತು. ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಯುದ್ಧಕ್ಕೆ ಸೇರುವಂತೆ ದಾರಿ ತಪ್ಪಿಸಲಾಯಿತು ಎಂದು ಮಜೋತಿ ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...