Homeಮುಖಪುಟರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

ರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

- Advertisement -
- Advertisement -

ರಷ್ಯಾ ಪರವಾಗಿ ಹೋರಾಡಿದ ಆರೋಪದ ಮೇಲೆ ಪ್ರಸ್ತುತ ಉಕ್ರೇನಿಯನ್ ಬಂಧನದಲ್ಲಿರುವ ಗುಜರಾತ್‌ನ ಮೊರ್ಬಿ ಜಿಲ್ಲೆಯ 23 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಿಡುಗಡೆ ಮಾಡಿ, ಸಹಾಯ ಮಾಡುವಂತೆ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

ತಮ್ಮ ಕುಟುಂಬಕ್ಕೆ ಕಳುಹಿಸಲಾದ ವೀಡಿಯೊ ಸಂದೇಶಗಳಲ್ಲಿ, ಅಧ್ಯಯನ ಅಥವಾ ಕೆಲಸಕ್ಕಾಗಿ ರಷ್ಯಾಕ್ಕೆ ಹೋಗಲು ಯೋಜಿಸುತ್ತಿರುವ ಭಾರತೀಯ ನಾಗರಿಕರು ವಂಚನೆಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಅವರು ಎಚ್ಚರಿಸಿದ್ದಾರೆ.

ಗುಜರಾತ್‌ ಮೊರ್ಬಿ ನಿವಾಸಿ ಸಾಹಿಲ್ ಮೊಹಮ್ಮದ್ ಹುಸೇನ್ ಮಜೋತಿ ಎಂಬ ವ್ಯಕ್ತಿ, ಈ ಅಕ್ಟೋಬರ್ ಆರಂಭದಲ್ಲಿ ಉಕ್ರೇನಿಯನ್ ಪಡೆಗಳಿಗೆ ಶರಣಾಗುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಬಿಡುಗಡೆ ಮಾಡಿದ ನಂತರ ಸುದ್ದಿಯಾದರು.

ಮಜೋತಿ, ಜನವರಿ 10, 2024 ರಂದು ಐಟಿಎಂಒ ವಿಶ್ವವಿದ್ಯಾಲಯದಲ್ಲಿ ರಷ್ಯನ್ ಭಾಷೆ ಮತ್ತು ಸಂಸ್ಕೃತಿಯಲ್ಲಿ ಕೋರ್ಸ್ ಅನ್ನು ಮುಂದುವರಿಸಲು ವಿದ್ಯಾರ್ಥಿ ವೀಸಾದಲ್ಲಿ ಸೇಂಟ್ ಪೀಟರ್ಸ್‌ಬರ್ಗ್‌ಗೆ ಪ್ರಯಾಣ ಬೆಳೆಸಿದ್ದರು.

ನಂತರ ಅವರು ಕಾನೂನು ತೊಂದರೆಯಲ್ಲಿ ಸಿಲುಕಿಕೊಂಡು, ರಷ್ಯಾದಲ್ಲಿ ಜೈಲಿನಲ್ಲಿದ್ದರು. ಉಕ್ರೇನಿಯನ್ ಪಡೆಗಳಿಂದ ಸೆರೆಹಿಡಿಯಲ್ಪಡುವ ಮೊದಲು ರಷ್ಯಾದ ಮಿಲಿಟರಿಗೆ ಸೇರಲು ಒತ್ತಾಯಿಸಲಾಯಿತು ಎಂದು ಆರೋಪಿಸಲಾಗಿದೆ.

ಭಾನುವಾರ ರಾತ್ರಿ ಅವರ ಕುಟುಂಬಕ್ಕೆ ಬಂದಿದೆ ಮತ್ತು ಉಕ್ರೇನಿಯನ್ ಅಧಿಕಾರಿಗಳು ಹಂಚಿಕೊಂಡಿದ್ದಾರೆ ಎಂದು ಹೇಳಲಾದ ಎರಡು ವೀಡಿಯೊ ಸಂದೇಶಗಳಲ್ಲಿ, ಒಂದು ಇಂಗ್ಲಿಷ್ ಮತ್ತು ಇನ್ನೊಂದು ಹಿಂದಿಯಲ್ಲಿದೆ. ಮಜೋತಿ, ತಮ್ಮ ಪರಿಸ್ಥಿತಿಯನ್ನು ಹತಾಶ ಎಂದು ವಿವರಿಸಿದ್ದಾರೆ.

“ಸದ್ಯ ನಾನು ಯುದ್ಧ ಅಪರಾಧಿಯಾಗಿ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದೇನೆ. ನಾನು ಹತಾಶನಾಗಿದ್ದೇನೆ. ಭವಿಷ್ಯದಲ್ಲಿ ಏನಾಗುತ್ತದೆ ಎಂದು ತಿಳಿದಿಲ್ಲ” ಎಂದು ಅವರು ವೀಡಿಯೊಗಳಲ್ಲಿ ಒಂದರಲ್ಲಿ ಹೇಳುತ್ತಾರೆ. “ಉನ್ನತ ಅಧ್ಯಯನ ಅಥವಾ ಕೆಲಸಕ್ಕಾಗಿ ರಷ್ಯಾಕ್ಕೆ ಬರುವವರು ಬಹಳ ಜಾಗರೂಕರಾಗಿರಬೇಕು. ಇಲ್ಲಿ ಅನೇಕ ವಂಚಕರಿದ್ದಾರೆ. ನೀವು ಕ್ರಿಮಿನಲ್, ಮಾದಕ ದ್ರವ್ಯ ಅಥವಾ ಅಕ್ರಮ ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು. ಸಾಧ್ಯವಾದಷ್ಟು, ಇದೆಲ್ಲದರಿಂದ ದೂರವಿರಿ” ಎಂದು ಹೇಳಿದ್ದಾರೆ.

ಭಾರತೀಯ ಅಧಿಕಾರಿಗಳಲ್ಲಿ ಮನವಿ ಮಾಡಿರುವ ಮಜೋತಿ, “ದಯವಿಟ್ಟು ನನಗೆ ಸಹಾಯ ಮಾಡಬೇಕು ಎಂದು ನಾನು ಭಾರತ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ವಿನಂತಿಸುತ್ತೇನೆ” ಎಂದು ಹೆಳಿದ್ದಾರೆ.

ಇಂಗ್ಲಿಷ್ ಭಾಷೆಯ ವೀಡಿಯೊದಲ್ಲಿ ಮಾತನಾಡಿರುವ ಅವರು, ಉಕ್ರೇನಿಯನ್ ಮಿಲಿಟರಿ ಜೈಲಿನಲ್ಲಿ ನಾನು ಬಂಧಿಸಲ್ಪಟ್ಟಿದ್ದೇನೆ. ರಷ್ಯಾದ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಮಾತ್ರ ಯುದ್ಧದಲ್ಲಿ ಹೋರಾಡಲು ಒಪ್ಪಂದಕ್ಕೆ ಸಹಿ ಹಾಕಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

“ನಾನು ರಷ್ಯಾದ ಜೈಲಿನಲ್ಲಿ ಸಿಲುಕಿದ್ದಾಗ ಯುದ್ಧ ಒಪ್ಪಂದಕ್ಕೆ ಸಹಿ ಹಾಕಿದೆ. ಅದು ನನ್ನ ಜೀವನದ ದೊಡ್ಡ ತಪ್ಪು. ಭಾರತೀಯ ಅಧಿಕಾರಿಗಳು ತಮ್ಮ ಮನೆಗೆ ಮರಳಲು ಅನುಕೂಲವಾಗುವಂತೆ ರಷ್ಯಾದೊಂದಿಗೆ ತಮ್ಮ ಪ್ರಕರಣದ ಕುರಿತು ಮಾತನಾಡಬೇಕು” ಎಂದು ಮನವಿ ಮಾಡಿದ್ದಾರೆ.

ರಷ್ಯಾದಲ್ಲಿ ಮಾದಕವಸ್ತು ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಯಿತು. ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಯುದ್ಧಕ್ಕೆ ಸೇರುವಂತೆ ದಾರಿ ತಪ್ಪಿಸಲಾಯಿತು ಎಂದು ಮಜೋತಿ ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...