Homeಮುಖಪುಟರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

ರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

- Advertisement -
- Advertisement -

ರಷ್ಯಾ ಪರವಾಗಿ ಹೋರಾಡಿದ ಆರೋಪದ ಮೇಲೆ ಪ್ರಸ್ತುತ ಉಕ್ರೇನಿಯನ್ ಬಂಧನದಲ್ಲಿರುವ ಗುಜರಾತ್‌ನ ಮೊರ್ಬಿ ಜಿಲ್ಲೆಯ 23 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಿಡುಗಡೆ ಮಾಡಿ, ಸಹಾಯ ಮಾಡುವಂತೆ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

ತಮ್ಮ ಕುಟುಂಬಕ್ಕೆ ಕಳುಹಿಸಲಾದ ವೀಡಿಯೊ ಸಂದೇಶಗಳಲ್ಲಿ, ಅಧ್ಯಯನ ಅಥವಾ ಕೆಲಸಕ್ಕಾಗಿ ರಷ್ಯಾಕ್ಕೆ ಹೋಗಲು ಯೋಜಿಸುತ್ತಿರುವ ಭಾರತೀಯ ನಾಗರಿಕರು ವಂಚನೆಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಅವರು ಎಚ್ಚರಿಸಿದ್ದಾರೆ.

ಗುಜರಾತ್‌ ಮೊರ್ಬಿ ನಿವಾಸಿ ಸಾಹಿಲ್ ಮೊಹಮ್ಮದ್ ಹುಸೇನ್ ಮಜೋತಿ ಎಂಬ ವ್ಯಕ್ತಿ, ಈ ಅಕ್ಟೋಬರ್ ಆರಂಭದಲ್ಲಿ ಉಕ್ರೇನಿಯನ್ ಪಡೆಗಳಿಗೆ ಶರಣಾಗುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಬಿಡುಗಡೆ ಮಾಡಿದ ನಂತರ ಸುದ್ದಿಯಾದರು.

ಮಜೋತಿ, ಜನವರಿ 10, 2024 ರಂದು ಐಟಿಎಂಒ ವಿಶ್ವವಿದ್ಯಾಲಯದಲ್ಲಿ ರಷ್ಯನ್ ಭಾಷೆ ಮತ್ತು ಸಂಸ್ಕೃತಿಯಲ್ಲಿ ಕೋರ್ಸ್ ಅನ್ನು ಮುಂದುವರಿಸಲು ವಿದ್ಯಾರ್ಥಿ ವೀಸಾದಲ್ಲಿ ಸೇಂಟ್ ಪೀಟರ್ಸ್‌ಬರ್ಗ್‌ಗೆ ಪ್ರಯಾಣ ಬೆಳೆಸಿದ್ದರು.

ನಂತರ ಅವರು ಕಾನೂನು ತೊಂದರೆಯಲ್ಲಿ ಸಿಲುಕಿಕೊಂಡು, ರಷ್ಯಾದಲ್ಲಿ ಜೈಲಿನಲ್ಲಿದ್ದರು. ಉಕ್ರೇನಿಯನ್ ಪಡೆಗಳಿಂದ ಸೆರೆಹಿಡಿಯಲ್ಪಡುವ ಮೊದಲು ರಷ್ಯಾದ ಮಿಲಿಟರಿಗೆ ಸೇರಲು ಒತ್ತಾಯಿಸಲಾಯಿತು ಎಂದು ಆರೋಪಿಸಲಾಗಿದೆ.

ಭಾನುವಾರ ರಾತ್ರಿ ಅವರ ಕುಟುಂಬಕ್ಕೆ ಬಂದಿದೆ ಮತ್ತು ಉಕ್ರೇನಿಯನ್ ಅಧಿಕಾರಿಗಳು ಹಂಚಿಕೊಂಡಿದ್ದಾರೆ ಎಂದು ಹೇಳಲಾದ ಎರಡು ವೀಡಿಯೊ ಸಂದೇಶಗಳಲ್ಲಿ, ಒಂದು ಇಂಗ್ಲಿಷ್ ಮತ್ತು ಇನ್ನೊಂದು ಹಿಂದಿಯಲ್ಲಿದೆ. ಮಜೋತಿ, ತಮ್ಮ ಪರಿಸ್ಥಿತಿಯನ್ನು ಹತಾಶ ಎಂದು ವಿವರಿಸಿದ್ದಾರೆ.

“ಸದ್ಯ ನಾನು ಯುದ್ಧ ಅಪರಾಧಿಯಾಗಿ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದೇನೆ. ನಾನು ಹತಾಶನಾಗಿದ್ದೇನೆ. ಭವಿಷ್ಯದಲ್ಲಿ ಏನಾಗುತ್ತದೆ ಎಂದು ತಿಳಿದಿಲ್ಲ” ಎಂದು ಅವರು ವೀಡಿಯೊಗಳಲ್ಲಿ ಒಂದರಲ್ಲಿ ಹೇಳುತ್ತಾರೆ. “ಉನ್ನತ ಅಧ್ಯಯನ ಅಥವಾ ಕೆಲಸಕ್ಕಾಗಿ ರಷ್ಯಾಕ್ಕೆ ಬರುವವರು ಬಹಳ ಜಾಗರೂಕರಾಗಿರಬೇಕು. ಇಲ್ಲಿ ಅನೇಕ ವಂಚಕರಿದ್ದಾರೆ. ನೀವು ಕ್ರಿಮಿನಲ್, ಮಾದಕ ದ್ರವ್ಯ ಅಥವಾ ಅಕ್ರಮ ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು. ಸಾಧ್ಯವಾದಷ್ಟು, ಇದೆಲ್ಲದರಿಂದ ದೂರವಿರಿ” ಎಂದು ಹೇಳಿದ್ದಾರೆ.

ಭಾರತೀಯ ಅಧಿಕಾರಿಗಳಲ್ಲಿ ಮನವಿ ಮಾಡಿರುವ ಮಜೋತಿ, “ದಯವಿಟ್ಟು ನನಗೆ ಸಹಾಯ ಮಾಡಬೇಕು ಎಂದು ನಾನು ಭಾರತ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ವಿನಂತಿಸುತ್ತೇನೆ” ಎಂದು ಹೆಳಿದ್ದಾರೆ.

ಇಂಗ್ಲಿಷ್ ಭಾಷೆಯ ವೀಡಿಯೊದಲ್ಲಿ ಮಾತನಾಡಿರುವ ಅವರು, ಉಕ್ರೇನಿಯನ್ ಮಿಲಿಟರಿ ಜೈಲಿನಲ್ಲಿ ನಾನು ಬಂಧಿಸಲ್ಪಟ್ಟಿದ್ದೇನೆ. ರಷ್ಯಾದ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಮಾತ್ರ ಯುದ್ಧದಲ್ಲಿ ಹೋರಾಡಲು ಒಪ್ಪಂದಕ್ಕೆ ಸಹಿ ಹಾಕಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

“ನಾನು ರಷ್ಯಾದ ಜೈಲಿನಲ್ಲಿ ಸಿಲುಕಿದ್ದಾಗ ಯುದ್ಧ ಒಪ್ಪಂದಕ್ಕೆ ಸಹಿ ಹಾಕಿದೆ. ಅದು ನನ್ನ ಜೀವನದ ದೊಡ್ಡ ತಪ್ಪು. ಭಾರತೀಯ ಅಧಿಕಾರಿಗಳು ತಮ್ಮ ಮನೆಗೆ ಮರಳಲು ಅನುಕೂಲವಾಗುವಂತೆ ರಷ್ಯಾದೊಂದಿಗೆ ತಮ್ಮ ಪ್ರಕರಣದ ಕುರಿತು ಮಾತನಾಡಬೇಕು” ಎಂದು ಮನವಿ ಮಾಡಿದ್ದಾರೆ.

ರಷ್ಯಾದಲ್ಲಿ ಮಾದಕವಸ್ತು ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಯಿತು. ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಯುದ್ಧಕ್ಕೆ ಸೇರುವಂತೆ ದಾರಿ ತಪ್ಪಿಸಲಾಯಿತು ಎಂದು ಮಜೋತಿ ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...