Homeಮುಖಪುಟಗುಜರಾತ್| 200ಕ್ಕೆ 212 ಅಂಕ ಪಡೆದ ವಿದ್ಯಾರ್ಥಿನಿ: ಶಿಕ್ಷಣ ವ್ಯವಸ್ಥೆಯ ಗುಣಮಟ್ಟ ಪ್ರಶ್ನಿಸಿದ ಜನ

ಗುಜರಾತ್| 200ಕ್ಕೆ 212 ಅಂಕ ಪಡೆದ ವಿದ್ಯಾರ್ಥಿನಿ: ಶಿಕ್ಷಣ ವ್ಯವಸ್ಥೆಯ ಗುಣಮಟ್ಟ ಪ್ರಶ್ನಿಸಿದ ಜನ

- Advertisement -
- Advertisement -

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಪರೀಕ್ಷೆಯ ಫಲಿತಾಂಶಗಳಲ್ಲಿ ಕಂಡು ಬಂದ ದೋಷಗಳು ಭಾರೀ ಚರ್ಚೆಗೆ ಕಾರಣವಾಗಿದ್ದು, ಶಿಕ್ಷಣ ವ್ಯವಸ್ಥೆಯ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತವಾಗಿದೆ.

ವರದಿಗಳ ಪ್ರಕಾರ, ನಾಲ್ಕನೇ ತರಗತಿಯ ವಿದ್ಯಾರ್ಥಿನಿ ವಂಶಿಬೆನ್ ಮನೀಶ್‌ಭಾಯ್ ತನ್ನ ಅಂಕ ಪಟ್ಟಿಯನ್ನು ನೋಡಿ ಆಶ್ಚರ್ಯಚಕಿತಳಾಗಿದ್ದಾಳೆ. ಏಕೆಂದರೆ, ಆಕೆಗೆ 200 ಅಂಕದ ಗುಜರಾತಿ ವಿಷಯದಲ್ಲಿ 211 ಅಂಕ ಸಿಕ್ಕಿತ್ತು. ಇನ್ನು 200 ಅಂಕದ ಗಣಿತದಲ್ಲಿ 212 ಅಂಕ ದೊರೆತಿತ್ತು.

ಫಲಿತಾಂಶ ಸಂಕಲನದ ವೇಳೆ ದೋಷ ಸಂಭವಿಸಿದೆ ಎಂದು ನಂತರ ತಿಳಿದು ಬಂದಿದೆ. ಪರಿಷ್ಕೃತ ಫಲಿತಾಂಶ ಅಂಕ ಪಟ್ಟಿಯಲ್ಲಿ ವಿದ್ಯಾರ್ಥಿನಿಗೆ ಗುಜರಾತಿಯಲ್ಲಿ 200ಕ್ಕೆ 191 ಅಂಕಗಳು ಮತ್ತು ಗಣಿತದಲ್ಲಿ 200ಕ್ಕೆ 190 ಅಂಕಗಳು ದೊರೆತಿವೆ. ಉಳಿದ ವಿಷಯಗಳ ಅಂಕಗಳು ಬದಲಾಗದೆ ಉಳಿದಿವೆ.

ವಂಶಿಬೆನ್ ತನ್ನ ಫಲಿತಾಂಶಗಳನ್ನು ತನ್ನ ಕುಟುಂಬದೊಂದಿಗೆ ಹೆಮ್ಮೆಯಿಂದ ಹಂಚಿಕೊಂಡ ನಂತರ ಅಂಕಪಟ್ಟಿಯಲ್ಲಿನ ತಪ್ಪು ವೈರಲ್ ಆಗಿದೆ.

ಪ್ರಮಾದಕ್ಕೆ ಪ್ರತಿಕ್ರಿಯೆಯಾಗಿ, ಜಿಲ್ಲಾ ಶಿಕ್ಷಣ ಅಧಿಕಾರಿಗಳು ದೋಷದ ಕಾರಣವನ್ನು ನಿರ್ಧರಿಸಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಶಿಕ್ಷಣದ ಗುಣಮಟ್ಟದ ಬಗ್ಗೆ ಚರ್ಚೆ:

ವಿದ್ಯಾರ್ಥಿನಿಯ ಅಂಕಪಟ್ಟಿಯನ್ನು ಸಂಕಲನ ಮಾಡುವಾಗ ಅಂಕಗಳಲ್ಲಿ ವ್ಯತ್ಯಾಸ ಉಂಟಾಗಿದೆ ಎಂದು ಅಧಿಕಾರಿಗಳು ಸಮಜಾಯಿಸಿ ನೀಡಿದ್ದಾರೆ. ಆದರೆ, ಸಾರ್ವಜನಿಕರು ಸಂಕಲನ ಮಾಡಿದ ಶಿಕ್ಷಕರ ಪಾಠದ ಗುಣಮಟ್ಟವನ್ನು ಪ್ರಶ್ನಿಸಿದ್ದಾರೆ. ಗಮನಾರ್ಹವಾಗಿ ಗಣಿತ ವಿಷದಲ್ಲಿ ವಿದ್ಯಾರ್ಥನಿಗೆ 200ಕ್ಕೆ 212 ಅಂಕ ನೀಡಲಾಗಿತ್ತು.

ವೈರಲ್ ಆದ ಬಳಿಕ ವಿದ್ಯಾರ್ಥಿನಿಯ ಅಂಕಪಟ್ಟಿಯನ್ನು ತಿದ್ದಲಾಗಿದೆ. ಆದರೆ, ಈ ರೀತಿಯ ಪ್ರಮಾದಗಳು ಇನ್ನೆಷ್ಟು ವಿದ್ಯಾರ್ಥಿಗಳಲ್ಲಿ ಸಂಭವಿಸಿದೆ ಎಂದು ಗೊತ್ತಿಲ್ಲ.

ಗುಜರಾತ್ ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾಗಿರುವುದರಿಂದ ಈ ಹಿಂದೆ ಮೋದಿ ಹೇಳಿದ 2ab ಫಾರ್ಮುಲಾವನ್ನು ನೆನಪಿಸಿ ಸಾಮಾಜಿಕ ಜಾಲತಾಣ ಬಳಕೆದಾರರು, ಗುಜರಾತ್ ಮಾದರಿಯ ಶಿಕ್ಷಣ, ಹೆಚ್ಚುವರಿ 2ab ಎಲ್ಲಿಂದ ಬಂತು ಎಂದು ನಿಮಗೆ ಈಗ ಗೊತ್ತಾಗಿರಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ : ಕೇಜ್ರಿವಾಲ್‌ ನ್ಯಾಯಾಂಗ ಬಂಧನದ ಅವಧಿ ಮೇ.20ರವರೆಗೆ ವಿಸ್ತರಣೆ: ಮಧ್ಯಂತರ ಜಾಮೀನು ನೀಡುತ್ತಾ ಸುಪ್ರೀಂಕೋರ್ಟ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...