Homeಮುಖಪುಟಗುಜರಾತ್‌ ತೂಗು ಸೇತುವೆ ದುರಂತ: ಸಾವಿಗೀಡಾದವರ ಸಂಖ್ಯೆ 60ಕ್ಕೆ ಏರಿಕೆ

ಗುಜರಾತ್‌ ತೂಗು ಸೇತುವೆ ದುರಂತ: ಸಾವಿಗೀಡಾದವರ ಸಂಖ್ಯೆ 60ಕ್ಕೆ ಏರಿಕೆ

ಇತ್ತೀಚೆಗೆ ನವೀಕರಿಸಿದ ನಂತರ ಜನರ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಾವಿನ ಸಂಖ್ಯೆ 35ರಿಂದ 60ಕ್ಕೆ ಏರಿಕೆಯಾಗಿದೆ.

- Advertisement -
- Advertisement -

ಗುಜರಾತ್‌ನ ಮೊರ್ಬಿ ನಗರದಲ್ಲಿ ಮಚ್ಚು ನದಿಯ ಮೇಲೆ ನಿರ್ಮಿಸಲಾದ ಸುಮಾರು ಶತಮಾನಗಳಷ್ಟು ಹಳೆಯದಾದ ತೂಗು ಸೇತುವೆ ಇಂದು (ಅಕ್ಟೋಬರ್‌ 30) ಸಂಜೆ ಕುಸಿದಿದೆ. ಸೇತುವೆ ಮೇಲಿದ್ದ ಹಲವರು ನದಿಗೆ ಬಿದ್ದಿದ್ದಾರೆ. ವರದಿಗಳ ಪ್ರಕಾರ ಗುಜರಾತ್ ಸೇತುವೆ ದುರಂತದಲ್ಲಿ ಸುಮಾರು 60 ಜನರು ಸಾವನ್ನಪ್ಪಿದ್ದಾರೆ.

60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಘಟನೆಯ ಸ್ಥಳದಲ್ಲಿದ್ದ ಗುಜರಾತ್ ಪಂಚಾಯತ್ ಸಚಿವ ಬ್ರಿಜೇಶ್ ಮೆರ್ಜಾ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

60ಕ್ಕೂ ಹೆಚ್ಚು ಮೃತದೇಹಗಳು ಪತ್ತೆಯಾಗಿದ್ದು, ಅದರಲ್ಲಿ ಹೆಚ್ಚು ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಇದ್ದಾರೆ. ಉಳಿದವರನ್ನು ರಕ್ಷಿಸಲಾಗಿದೆ. ಎನ್‌ಡಿಆರ್‌ಎಫ್‌ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ಇದು ತುಂಬಾ ದುಃಖಕರವಾಗಿದೆ ಎಂದು ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಪ್ರತಿಕ್ರಿಯಿಸಿದ್ದಾರೆ.

ಸೇತುವೆ ಕುಸಿದ ನಂತರ ಹಲವರು ಈಜಿಕೊಂಡು ಬದುಕುಳಿಯಲು ಯತ್ನಿಸುತ್ತಿರುವುದು ಕಂಡುಬಂದಿದೆ. ಸೇತುವೆಯ ಮುರಿದ ತುದಿಗೆ ಜನರ ಗುಂಪು ಅಂಟಿಕುಳಿತಿರುವ ದೃಶ್ಯಗಳು ಕಂಡುಬಂದಿವೆ. ಮರಿದ ಸೇತುವೆಯೂ ಕೂಡ ಭಾಗಶಃ ಮುಳುಗಿದೆ.

ಮಹಿಳೆಯರು ಮತ್ತು ಮಕ್ಕಳು ದೃಶ್ಯಗಳಲ್ಲಿ ಕಂಡುಬಂದಿದ್ದಾರೆ. ಐತಿಹಾಸಿಕವಾದ ಸೇತುವೆಯನ್ನು ಇತ್ತೀಚೆಗೆ ನವೀಕರಿಸಿದ ನಂತರ ಜನರ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇಂದು ಸಂಜೆ 6.42ರ ವೇಳೆಗೆ ಸೇತುವೆ ಮುರಿದುಬಿದ್ದಿದೆ.

100ಕ್ಕೂ ಹೆಚ್ಚು ಜನರು ನೀರಿನಡಿ ಸಿಕ್ಕಿಬಿದ್ದಿದ್ದಾರೆ. ಸೇತುವೆ ಕುಸಿದಾಗ ಸೇತುವೆ ಮೇಲೆ ಸುಮಾರು 500 ಮಂದಿ ಇದ್ದರು. ಛಾತ್ ಪೂಜೆಯ ನಿಮಿತ್ತ ಕೆಲವು ವಿಧಿವಿಧಾನಗಳನ್ನು ನೆರವೇರಿಸಲು ಜನರು ಜಮಾಯಿಸಿದ್ದರು. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

“ಈ ದುರಂತದ ಹೊಣೆಯನ್ನು ಸರ್ಕಾರ ಹೊರುತ್ತದೆ. ಪ್ರಧಾನಿಯವರು ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದಾರೆ. ಎಲ್ಲಾ ಉನ್ನತ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಕಳೆದ ವಾರ ನವೀಕರಣ ನಡೆದಿತ್ತು. ನಮಗೂ ಆಘಾತವಾಗಿದೆ. ನಾವು ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ” ಎಂದು ಗುಜರಾತ್‌ನ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ (ಸ್ವತಂತ್ರ ಉಸ್ತುವಾರಿ) ರಾಜ್ಯ ಸಚಿವ ಬ್ರಿಜೇಶ್ ಮೆರ್ಜಾ ತಿಳಿಸಿದ್ದಾರೆ.

ಘಟನೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಮತ್ತು ಇತರ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. “ನವೀಕರಣದ ನಂತರ ಸಾರ್ವಜನಿಕರಿಗೆ ಇತ್ತೀಚೆಗೆ ತೆರೆಯಲಾದ ಸೇತುವೆಯು ಕುಸಿದು ಉಂಟಾಗಿರುವ ಘಟನೆಯಿಂದ ತೀವ್ರ ದುಃಖವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮೋರ್ಬಿಯಲ್ಲಿ ಸಂಭವಿಸಿದ ದುರ್ಘಟನೆಗೆ ಸಂಬಂಧಿಸಿದಂತೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಇತರ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಪ್ರಧಾನಿಯವರ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳನ್ನು ತುರ್ತು ಸಜ್ಜುಗೊಳಿಸುವಂತೆ ಕೋರಿದ್ದಾರೆ. ಪರಿಸ್ಥಿತಿಯನ್ನು ಸರಿಯಾಗಿ ಮತ್ತು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕೆಂದು ತಿಳಿಸಿರುವ ಅವರು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ವಿಸ್ತರಿಸಬೇಕು ಎಂದು ಸೂಚಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ಮೋರ್ಬಿ ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಎಎಪಿ ಮುಖ್ಯಸ್ಥರಾದ ಅರವಿಂದ ಕೇಜ್ರೀವಾಲ್ ಅವರು, ಸಂತ್ರಸ್ತರು ಬದುಕುಳಿಯಲಿ ಎಂದು ಪ್ರಾರ್ಥಿಸಿದ್ದಾರೆ.

ಅಪಘಾತದಲ್ಲಿ ತಮ್ಮವರನ್ನು ಕಳೆದುಕೊಂಡವರ ಕುಟುಂಬಗಳಿಗೆ ತಲಾ ₹ 2 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ ₹ 50,000 ನೀಡಲಾಗುವುದು ಎಂದು ತಿಳಿಸಿದ್ದಾರೆ.

ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಅವರು ರಾಜ್ಯ ರಾಜಧಾನಿ ಅಹಮದಾಬಾದ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಘಟನಾ ಸ್ಥಳಕ್ಕೆ ತೆರಳಿದ್ದಾರೆ.

ಮೋರ್ಬಿಯಲ್ಲಿರುವ ಕೇಬಲ್ ಸೇತುವೆಯು ಐತಿಹಾಸಿಕವಾದದ್ದು. ಕಳೆದ ವಾರ ಅದನ್ನು ನವೀಕರಿಸಲಾಗಿತ್ತು. ನವೀಕರಣದ ನಂತರ, ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ದಿನದಂದು ಅದನ್ನು ಸಾರ್ವಜನಿಕರ ಉಪಯೋಗಕ್ಕೆ ತೆರೆಯಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...