Homeಮುಖಪುಟಗುಜರಾತ್‌ | ಹದಿಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಗುಜರಾತ್‌ | ಹದಿಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ತನ್ನ ಸ್ನೇಹಿತನನ್ನು ಭೇಟಿಯಾಗಲು ತೆರಳಿದ್ದ ಹದಿಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಗುಜರಾತಿನ ವಡೋದರಾದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಅತ್ಯಾಚಾರ ಎಸಗಿದ ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಪೊಲೀಸರು ಶೋಧ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.ಗುಜರಾತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅತ್ಯಾಚಾರದ ಬಗ್ಗೆ ಬಾಲಕಿಯ ತಂದೆ ದೂರು ದಾಖಲಿಸಿದ್ದು, ಬಾಲಕಿಯು ರಾತ್ರಿ 11:30ರ ಸುಮಾರಿಗೆ ಸನ್‌ಸಿಟಿ ಸೊಸೈಟಿ ಬಳಿ ಸ್ನೇಹಿತನನ್ನು ಭೇಟಿಯಾಗಿದ್ದಳು. ಇಬ್ಬರೂ ಒಟ್ಟಿಗೆ ಕುಳಿತಿದ್ದಾಗ, ಮಧ್ಯರಾತ್ರಿಯ ಸುಮಾರಿಗೆ ಇಬ್ಬರು ಒಂದು ಬೈಕಿನಲ್ಲಿ ಮತ್ತು ಇನ್ನೊಂದು ಬೈಕ್‌ನಲ್ಲಿ ಮೂವರು ಸೇರಿ ಐದು ಜನರ ಗುಂಪು ಎರಡು ಮೋಟಾರು ಸೈಕಲ್‌ಗಳಲ್ಲಿ ಬಂದಿತ್ತು ಎಂದು ದೂರಿದ್ದಾರೆ. ಈ ಗುಂಪಿನಲ್ಲಿ ಇಬ್ಬರು ಬಾಲಕಿಯ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂಓದಿ: ಚುನಾವಣೋತ್ತರ ಸಮೀಕ್ಷೆ | ಹರಿಯಾಣ-ಕಾಶ್ಮೀರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಸಾಧ್ಯತೆ

ಗುಂಪು ಮೊದಲಿಗೆ ಸಂತ್ರಸ್ತರ ನಡುವೆ ವಾಗ್ವಾದ ನಡೆಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ನಂತರ, ಐವರಲ್ಲಿ ಇಬ್ಬರು ಹೊರಟುಹೋಗಿದ್ದಾರೆ. ಆದರೆ ಉಳಿದ ಮೂವರಲ್ಲಿ ಇಬ್ಬರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಮತ್ತೊಬ್ಬ ದುಷ್ಕರ್ಮಿ ಬಾಲಕಿಯ ಸ್ನೇಹಿತನನ್ನು ತಡೆದಿದ್ದನು. ಅತ್ಯಾಚಾರದ ನಂತರ ಸಂತ್ರಸ್ತೆ ಮತ್ತು ಅವರ ಸ್ನೇಹಿತ ತಕ್ಷಣವೇ ಪೊಲೀಸರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ನಂತರ ಅಧಿಕಾರಿಗಳು ಆ ಪ್ರದೇಶದಲ್ಲಿ ಸುತ್ತುವರಿದು ತನಿಖೆ ಆರಂಭಿಸಿದ್ದಾರೆ. ಅಪರಾಧ ಸ್ಥಳದಲ್ಲಿ, ಪೊಲೀಸರು ಒಡೆದ ಗಾಜು ಮತ್ತು ಇನ್ನಿತರ ವಸ್ತುಗಳನ್ನು ಕಂಡುಕೊಂಡಿದ್ದು ಅದನ್ನು ಸಾಕ್ಷ್ಯವಾಗಿ ವಶಪಡಿಸಿಕೊಂಡಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತೆ ಹಿಂದಿ ಮತ್ತು ಗುಜರಾತಿ ಭಾಷೆಗಳಲ್ಲಿ ಮಾತನಾಡುತ್ತಿದ್ದ ಆರೋಪಿಗಳ ಮುಖವನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಕ್ಕೂ ಮುನ್ನ ಹೊರಟು ಹೋದ ಇಬ್ಬರು ಅಪ್ರಾಪ್ತರು ಎಂದು ವರದಿಯಾಗಿದೆ.

ಜಿಲ್ಲಾ ಪೊಲೀಸ್ ಮುಖ್ಯಸ್ಥ ರೋಹನ್ ಆನಂದ್ ಮಾತನಾಡಿ, ಸಂತ್ರಸ್ತೆ ಧರಿಸಿದ್ದ ಒಂದು ಅಥವಾ ಎರಡು ಆಭರಣಗಳು, ಆರೋಪಿಗಳ ಕೆಲವು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಪೊಲೀಸ್ ತಂಡಗಳು ದುಷ್ಕರ್ಮಿಗಳ ಪತ್ತೆಗೆ ಅವಿರತವಾಗಿ ಶ್ರಮಿಸುತ್ತಿವೆ. ಒಂದೂವರೆಯಿಂದ ಎರಡು ಗಂಟೆಗಳ ಕಾಲ ಕೌನ್ಸೆಲಿಂಗ್ ನಂತರ ಸಂತ್ರಸ್ತೆಯ ದೂರನ್ನು ಅಧಿಕೃತವಾಗಿ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಸಂತ್ರಸ್ತೆ ಮತ್ತು ಅವರ ಸ್ನೇಹಿತನ ಪ್ರಕಾರ, ಮೂವರು ಆರೋಪಿಗಳು ಸುಮಾರು 30-35 ವರ್ಷ ವಯಸ್ಸಿನವರಾಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.ಗುಜರಾತ್‌

ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...