Homeಮುಖಪುಟಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

- Advertisement -
- Advertisement -

ಗುಜರಾತಿನ ಶತಮಾನದಷ್ಟು ಹಳೆಯದಾದ ಸೇತುವೆಯ ನವೀಕರಣ ನಡೆಸಿದ ಖಾಸಗಿ ಸಂಸ್ಥೆಯು ಕೆಲವು ಹಳೆಯ ತಂತಿಗಳನ್ನೂ ತನ್ನ ಏಳು ತಿಂಗಳ ನವೀಕರಣದ ಸಮಯದಲ್ಲಿ ಬದಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.

‘ಸೇತುವೆಯನ್ನು ನವೀಕರಿಸಿದ ಗುಜರಾತ್ ಮೂಲದ ಗಡಿಯಾರ ತಯಾರಿಕಾ ಒರೆವಾ ಸಂಸ್ಥೆಗೆ ಮಾರ್ಚ್‌ನಲ್ಲಿ ಮೋರ್ಬಿ ನಗರ ಪುರಸಭೆಯಿಂದ ಗುತ್ತಿಗೆ ನೀಡಲಾಯಿತು. ಆದರೆ ಯಾವುದೇ ಟೆಂಡರ್ ನೀಡುವ ಕ್ರಮ ಜರುಗಿಸಿರಲಿಲ್ಲ’ ಎಂದು ಒಪ್ಪಂದದ ಕಡತಗಳು ಹೇಳುತ್ತಿವೆ. ಸೇತುವೆಯಲ್ಲಿ ಕಟ್ಟಲಾಗಿದ್ದ ಕೆಲವು ಹಳೆಯ ತಂತಿಗಳನ್ನು ನವೀಕರಣದ ನಂತರವೂ ಉಳಿಸಿಕೊಳ್ಳಲಾಗಿದೆ ಎಂಬ ಸಂಗತಿ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜನರ ಭಾರೀ ನೂಕುನುಗ್ಗಲಿನ ಭಾರದಿಂದ ಸೇತುವೆ ಕುಸಿದಿದೆ ಎಂದು ಗುಜರಾತಿನ ವಿಧಿವಿಜ್ಞಾನ ಪ್ರಯೋಗಾಲಯವು ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ವಿಧಿವಿಜ್ಞಾನ ತಂಡವು ಕತ್ತರಿಸಿಬಿದ್ದ ಸೇತುವೆಯ ಲೋಹದ ತುಣುಕುಗಳನ್ನು ಪರೀಕ್ಷೆಗೆ ಒಳಪಡಿಸಿದೆ.

ಹೆಚ್ಚಾದ ಜನಸಂದಣಿಯು ಸೇತುವೆಯ ರಚನಾತ್ಮಕ ಸಮಗ್ರತೆಯ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದು ದುರಂತಕ್ಕೆ ಕಾರಣವಾಯಿತು ಎಂದು ವಿಧಿವಿಜ್ಞಾನ ತಂಡದ ಮೂಲಗಳು ಹೇಳಿವೆ.

ಲೋಹದ ತಂತಿಗಳು ಕತ್ತರಿಸಿ ನದಿಗೆ ಬೀಳುವ ಮೊದಲು ಜನರ ಗುಂಪು ಫೋಟೋಗಳನ್ನು ತೆಗೆದುಕೊಳ್ಳುತ್ತಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ. ಜೊತೆಗೆ ಸೇತುವೆಯು ತಿರುಗುತ್ತಿರುವುದು ಕಂಡುಬಂದಿದೆ.

“ಸೇತುವೆಯನ್ನು ಮತ್ತೆ ತೆರೆಯುವ ಬಗ್ಗೆ ಓರೆವಾ ಸಂಸ್ಥೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿರಲಿಲ್ಲ. ಹಾಗೆ ಮಾಡಲು ಕಂಪನಿಗೆ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗಿಲ್ಲ” ಎಂದು ಪುರಸಭೆಯ ಮುಖ್ಯಾಧಿಕಾರಿ ಸಂದೀಪ್‌ಸಿಂಗ್ ಝಾಲಾ ಹೇಳಿದ್ದಾರೆ. ಈ ಆರೋಪಕ್ಕೆ ಓರೆವಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗಡಿಯಾರ ತಯಾರಕ ಸಂಸ್ಥೆಯು “ನವೀಕರಣದ ತಾಂತ್ರಿಕ ಸಂಗತಿಗಳನ್ನು ಚಿಕ್ಕ ನಿರ್ಮಾಣ ಕಂಪನಿಯಾದ ದೇವಪ್ರಕಾಶ್ ಸೊಲ್ಯೂಷನ್ಸ್‌ಗೆ ಹೊರಗುತ್ತಿಗೆ ನೀಡಿದೆ” ಎಂದು ವರದಿಯಾಗಿದೆ.

ಕಳೆದ ವಾರ ಸೇತುವೆಯನ್ನು ಪುನಾರಾಂಭ ಮಾಡುವ ಸಂದರ್ಭದಲ್ಲಿ ಓರೆವಾ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ಭಾಯ್ ಪಟೇಲ್ ಮಾತನಾಡುತ್ತಾ, “ಕಂಪನಿಯು ₹ 2 ಕೋಟಿ ವೆಚ್ಚದಲ್ಲಿ 100 ರಷ್ಟು ನವೀಕರಣವನ್ನು ನೆರವೇರಿಸಿದೆ” ಎಂದಿದ್ದರು.

ಇದನ್ನೂ ಓದಿರಿ: ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಘಟನೆಯ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಒಂಬತ್ತು ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಒರೆವಾ ವ್ಯವಸ್ಥಾಪಕರು, ಟಿಕೆಟ್ ಕಲೆಕ್ಟರ್‌ಗಳು, ಸೇತುವೆ ರಿಪೇರಿ ಗುತ್ತಿಗೆದಾರರು ಮತ್ತು ಮೂವರು ಸೆಕ್ಯುರಿಟಿ ಗಾರ್ಡ್‌ಗಳು ಇದ್ದಾರೆ. ಜನಸಂದಣಿಯನ್ನು ನಿಯಂತ್ರಿಸುವುದು ಅವರ ಕೆಲಸವಾಗಿತ್ತು.

ಮಚ್ಚು ನದಿಯಲ್ಲಿನ ಶೋಧ ಕಾರ್ಯಾಚರಣೆಯನ್ನು ದಿನದ ಮಟ್ಟಿಗೆ ಹಿಂತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇಂದು ಬೆಳಿಗ್ಗೆ ಕಾರ್ಯಾಚರಣೆ ಪುನಾರಂಭಿಸಲಿದ್ದಾರೆ. ಸುಮಾರು ನೂರಕ್ಕೂ ಹೆಚ್ಚು ಮೃತದೇಹಗಳು ನೀರಿನಡಿಯ ಕೆಸರಿನಲ್ಲಿ ಸಿಲುಕಿರುವ ಆತಂಕವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸೇತುವೆಯ ಎರಡೂ ತುದಿಗಳಿಗೆ ಸಮೀಪದಲ್ಲಿದ್ದ ಅನೇಕ ಜನರು ನೀರಿಲ್ಲದ ಜಾಗಕ್ಕೆ ಬಿದ್ದು ಸತ್ತಿದ್ದಾರೆ. ಅಂದರೆ ಸೇತುವೆ ಮುರಿದ ರಭಸಕ್ಕೆ ಗಟ್ಟಿಯಾದ ನೆಲದತ್ತ ಅನೇಕರು ಎಸೆಯಲ್ಪಟ್ಟಿದ್ದಾರೆ. ಸೇತುವೆಯ ಮಧ್ಯದಲ್ಲಿದ್ದವರು ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...