Homeಮುಖಪುಟಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

- Advertisement -
- Advertisement -

ಗುಜರಾತಿನ ಶತಮಾನದಷ್ಟು ಹಳೆಯದಾದ ಸೇತುವೆಯ ನವೀಕರಣ ನಡೆಸಿದ ಖಾಸಗಿ ಸಂಸ್ಥೆಯು ಕೆಲವು ಹಳೆಯ ತಂತಿಗಳನ್ನೂ ತನ್ನ ಏಳು ತಿಂಗಳ ನವೀಕರಣದ ಸಮಯದಲ್ಲಿ ಬದಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.

‘ಸೇತುವೆಯನ್ನು ನವೀಕರಿಸಿದ ಗುಜರಾತ್ ಮೂಲದ ಗಡಿಯಾರ ತಯಾರಿಕಾ ಒರೆವಾ ಸಂಸ್ಥೆಗೆ ಮಾರ್ಚ್‌ನಲ್ಲಿ ಮೋರ್ಬಿ ನಗರ ಪುರಸಭೆಯಿಂದ ಗುತ್ತಿಗೆ ನೀಡಲಾಯಿತು. ಆದರೆ ಯಾವುದೇ ಟೆಂಡರ್ ನೀಡುವ ಕ್ರಮ ಜರುಗಿಸಿರಲಿಲ್ಲ’ ಎಂದು ಒಪ್ಪಂದದ ಕಡತಗಳು ಹೇಳುತ್ತಿವೆ. ಸೇತುವೆಯಲ್ಲಿ ಕಟ್ಟಲಾಗಿದ್ದ ಕೆಲವು ಹಳೆಯ ತಂತಿಗಳನ್ನು ನವೀಕರಣದ ನಂತರವೂ ಉಳಿಸಿಕೊಳ್ಳಲಾಗಿದೆ ಎಂಬ ಸಂಗತಿ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜನರ ಭಾರೀ ನೂಕುನುಗ್ಗಲಿನ ಭಾರದಿಂದ ಸೇತುವೆ ಕುಸಿದಿದೆ ಎಂದು ಗುಜರಾತಿನ ವಿಧಿವಿಜ್ಞಾನ ಪ್ರಯೋಗಾಲಯವು ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ವಿಧಿವಿಜ್ಞಾನ ತಂಡವು ಕತ್ತರಿಸಿಬಿದ್ದ ಸೇತುವೆಯ ಲೋಹದ ತುಣುಕುಗಳನ್ನು ಪರೀಕ್ಷೆಗೆ ಒಳಪಡಿಸಿದೆ.

ಹೆಚ್ಚಾದ ಜನಸಂದಣಿಯು ಸೇತುವೆಯ ರಚನಾತ್ಮಕ ಸಮಗ್ರತೆಯ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದು ದುರಂತಕ್ಕೆ ಕಾರಣವಾಯಿತು ಎಂದು ವಿಧಿವಿಜ್ಞಾನ ತಂಡದ ಮೂಲಗಳು ಹೇಳಿವೆ.

ಲೋಹದ ತಂತಿಗಳು ಕತ್ತರಿಸಿ ನದಿಗೆ ಬೀಳುವ ಮೊದಲು ಜನರ ಗುಂಪು ಫೋಟೋಗಳನ್ನು ತೆಗೆದುಕೊಳ್ಳುತ್ತಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ. ಜೊತೆಗೆ ಸೇತುವೆಯು ತಿರುಗುತ್ತಿರುವುದು ಕಂಡುಬಂದಿದೆ.

“ಸೇತುವೆಯನ್ನು ಮತ್ತೆ ತೆರೆಯುವ ಬಗ್ಗೆ ಓರೆವಾ ಸಂಸ್ಥೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿರಲಿಲ್ಲ. ಹಾಗೆ ಮಾಡಲು ಕಂಪನಿಗೆ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗಿಲ್ಲ” ಎಂದು ಪುರಸಭೆಯ ಮುಖ್ಯಾಧಿಕಾರಿ ಸಂದೀಪ್‌ಸಿಂಗ್ ಝಾಲಾ ಹೇಳಿದ್ದಾರೆ. ಈ ಆರೋಪಕ್ಕೆ ಓರೆವಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗಡಿಯಾರ ತಯಾರಕ ಸಂಸ್ಥೆಯು “ನವೀಕರಣದ ತಾಂತ್ರಿಕ ಸಂಗತಿಗಳನ್ನು ಚಿಕ್ಕ ನಿರ್ಮಾಣ ಕಂಪನಿಯಾದ ದೇವಪ್ರಕಾಶ್ ಸೊಲ್ಯೂಷನ್ಸ್‌ಗೆ ಹೊರಗುತ್ತಿಗೆ ನೀಡಿದೆ” ಎಂದು ವರದಿಯಾಗಿದೆ.

ಕಳೆದ ವಾರ ಸೇತುವೆಯನ್ನು ಪುನಾರಾಂಭ ಮಾಡುವ ಸಂದರ್ಭದಲ್ಲಿ ಓರೆವಾ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ಭಾಯ್ ಪಟೇಲ್ ಮಾತನಾಡುತ್ತಾ, “ಕಂಪನಿಯು ₹ 2 ಕೋಟಿ ವೆಚ್ಚದಲ್ಲಿ 100 ರಷ್ಟು ನವೀಕರಣವನ್ನು ನೆರವೇರಿಸಿದೆ” ಎಂದಿದ್ದರು.

ಇದನ್ನೂ ಓದಿರಿ: ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಘಟನೆಯ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಒಂಬತ್ತು ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಒರೆವಾ ವ್ಯವಸ್ಥಾಪಕರು, ಟಿಕೆಟ್ ಕಲೆಕ್ಟರ್‌ಗಳು, ಸೇತುವೆ ರಿಪೇರಿ ಗುತ್ತಿಗೆದಾರರು ಮತ್ತು ಮೂವರು ಸೆಕ್ಯುರಿಟಿ ಗಾರ್ಡ್‌ಗಳು ಇದ್ದಾರೆ. ಜನಸಂದಣಿಯನ್ನು ನಿಯಂತ್ರಿಸುವುದು ಅವರ ಕೆಲಸವಾಗಿತ್ತು.

ಮಚ್ಚು ನದಿಯಲ್ಲಿನ ಶೋಧ ಕಾರ್ಯಾಚರಣೆಯನ್ನು ದಿನದ ಮಟ್ಟಿಗೆ ಹಿಂತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇಂದು ಬೆಳಿಗ್ಗೆ ಕಾರ್ಯಾಚರಣೆ ಪುನಾರಂಭಿಸಲಿದ್ದಾರೆ. ಸುಮಾರು ನೂರಕ್ಕೂ ಹೆಚ್ಚು ಮೃತದೇಹಗಳು ನೀರಿನಡಿಯ ಕೆಸರಿನಲ್ಲಿ ಸಿಲುಕಿರುವ ಆತಂಕವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸೇತುವೆಯ ಎರಡೂ ತುದಿಗಳಿಗೆ ಸಮೀಪದಲ್ಲಿದ್ದ ಅನೇಕ ಜನರು ನೀರಿಲ್ಲದ ಜಾಗಕ್ಕೆ ಬಿದ್ದು ಸತ್ತಿದ್ದಾರೆ. ಅಂದರೆ ಸೇತುವೆ ಮುರಿದ ರಭಸಕ್ಕೆ ಗಟ್ಟಿಯಾದ ನೆಲದತ್ತ ಅನೇಕರು ಎಸೆಯಲ್ಪಟ್ಟಿದ್ದಾರೆ. ಸೇತುವೆಯ ಮಧ್ಯದಲ್ಲಿದ್ದವರು ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...