Homeಮುಖಪುಟಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

- Advertisement -
- Advertisement -

ಗುಜರಾತಿನ ಶತಮಾನದಷ್ಟು ಹಳೆಯದಾದ ಸೇತುವೆಯ ನವೀಕರಣ ನಡೆಸಿದ ಖಾಸಗಿ ಸಂಸ್ಥೆಯು ಕೆಲವು ಹಳೆಯ ತಂತಿಗಳನ್ನೂ ತನ್ನ ಏಳು ತಿಂಗಳ ನವೀಕರಣದ ಸಮಯದಲ್ಲಿ ಬದಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.

‘ಸೇತುವೆಯನ್ನು ನವೀಕರಿಸಿದ ಗುಜರಾತ್ ಮೂಲದ ಗಡಿಯಾರ ತಯಾರಿಕಾ ಒರೆವಾ ಸಂಸ್ಥೆಗೆ ಮಾರ್ಚ್‌ನಲ್ಲಿ ಮೋರ್ಬಿ ನಗರ ಪುರಸಭೆಯಿಂದ ಗುತ್ತಿಗೆ ನೀಡಲಾಯಿತು. ಆದರೆ ಯಾವುದೇ ಟೆಂಡರ್ ನೀಡುವ ಕ್ರಮ ಜರುಗಿಸಿರಲಿಲ್ಲ’ ಎಂದು ಒಪ್ಪಂದದ ಕಡತಗಳು ಹೇಳುತ್ತಿವೆ. ಸೇತುವೆಯಲ್ಲಿ ಕಟ್ಟಲಾಗಿದ್ದ ಕೆಲವು ಹಳೆಯ ತಂತಿಗಳನ್ನು ನವೀಕರಣದ ನಂತರವೂ ಉಳಿಸಿಕೊಳ್ಳಲಾಗಿದೆ ಎಂಬ ಸಂಗತಿ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜನರ ಭಾರೀ ನೂಕುನುಗ್ಗಲಿನ ಭಾರದಿಂದ ಸೇತುವೆ ಕುಸಿದಿದೆ ಎಂದು ಗುಜರಾತಿನ ವಿಧಿವಿಜ್ಞಾನ ಪ್ರಯೋಗಾಲಯವು ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ವಿಧಿವಿಜ್ಞಾನ ತಂಡವು ಕತ್ತರಿಸಿಬಿದ್ದ ಸೇತುವೆಯ ಲೋಹದ ತುಣುಕುಗಳನ್ನು ಪರೀಕ್ಷೆಗೆ ಒಳಪಡಿಸಿದೆ.

ಹೆಚ್ಚಾದ ಜನಸಂದಣಿಯು ಸೇತುವೆಯ ರಚನಾತ್ಮಕ ಸಮಗ್ರತೆಯ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದು ದುರಂತಕ್ಕೆ ಕಾರಣವಾಯಿತು ಎಂದು ವಿಧಿವಿಜ್ಞಾನ ತಂಡದ ಮೂಲಗಳು ಹೇಳಿವೆ.

ಲೋಹದ ತಂತಿಗಳು ಕತ್ತರಿಸಿ ನದಿಗೆ ಬೀಳುವ ಮೊದಲು ಜನರ ಗುಂಪು ಫೋಟೋಗಳನ್ನು ತೆಗೆದುಕೊಳ್ಳುತ್ತಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ. ಜೊತೆಗೆ ಸೇತುವೆಯು ತಿರುಗುತ್ತಿರುವುದು ಕಂಡುಬಂದಿದೆ.

“ಸೇತುವೆಯನ್ನು ಮತ್ತೆ ತೆರೆಯುವ ಬಗ್ಗೆ ಓರೆವಾ ಸಂಸ್ಥೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿರಲಿಲ್ಲ. ಹಾಗೆ ಮಾಡಲು ಕಂಪನಿಗೆ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗಿಲ್ಲ” ಎಂದು ಪುರಸಭೆಯ ಮುಖ್ಯಾಧಿಕಾರಿ ಸಂದೀಪ್‌ಸಿಂಗ್ ಝಾಲಾ ಹೇಳಿದ್ದಾರೆ. ಈ ಆರೋಪಕ್ಕೆ ಓರೆವಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗಡಿಯಾರ ತಯಾರಕ ಸಂಸ್ಥೆಯು “ನವೀಕರಣದ ತಾಂತ್ರಿಕ ಸಂಗತಿಗಳನ್ನು ಚಿಕ್ಕ ನಿರ್ಮಾಣ ಕಂಪನಿಯಾದ ದೇವಪ್ರಕಾಶ್ ಸೊಲ್ಯೂಷನ್ಸ್‌ಗೆ ಹೊರಗುತ್ತಿಗೆ ನೀಡಿದೆ” ಎಂದು ವರದಿಯಾಗಿದೆ.

ಕಳೆದ ವಾರ ಸೇತುವೆಯನ್ನು ಪುನಾರಾಂಭ ಮಾಡುವ ಸಂದರ್ಭದಲ್ಲಿ ಓರೆವಾ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ಭಾಯ್ ಪಟೇಲ್ ಮಾತನಾಡುತ್ತಾ, “ಕಂಪನಿಯು ₹ 2 ಕೋಟಿ ವೆಚ್ಚದಲ್ಲಿ 100 ರಷ್ಟು ನವೀಕರಣವನ್ನು ನೆರವೇರಿಸಿದೆ” ಎಂದಿದ್ದರು.

ಇದನ್ನೂ ಓದಿರಿ: ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಘಟನೆಯ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಒಂಬತ್ತು ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಒರೆವಾ ವ್ಯವಸ್ಥಾಪಕರು, ಟಿಕೆಟ್ ಕಲೆಕ್ಟರ್‌ಗಳು, ಸೇತುವೆ ರಿಪೇರಿ ಗುತ್ತಿಗೆದಾರರು ಮತ್ತು ಮೂವರು ಸೆಕ್ಯುರಿಟಿ ಗಾರ್ಡ್‌ಗಳು ಇದ್ದಾರೆ. ಜನಸಂದಣಿಯನ್ನು ನಿಯಂತ್ರಿಸುವುದು ಅವರ ಕೆಲಸವಾಗಿತ್ತು.

ಮಚ್ಚು ನದಿಯಲ್ಲಿನ ಶೋಧ ಕಾರ್ಯಾಚರಣೆಯನ್ನು ದಿನದ ಮಟ್ಟಿಗೆ ಹಿಂತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇಂದು ಬೆಳಿಗ್ಗೆ ಕಾರ್ಯಾಚರಣೆ ಪುನಾರಂಭಿಸಲಿದ್ದಾರೆ. ಸುಮಾರು ನೂರಕ್ಕೂ ಹೆಚ್ಚು ಮೃತದೇಹಗಳು ನೀರಿನಡಿಯ ಕೆಸರಿನಲ್ಲಿ ಸಿಲುಕಿರುವ ಆತಂಕವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸೇತುವೆಯ ಎರಡೂ ತುದಿಗಳಿಗೆ ಸಮೀಪದಲ್ಲಿದ್ದ ಅನೇಕ ಜನರು ನೀರಿಲ್ಲದ ಜಾಗಕ್ಕೆ ಬಿದ್ದು ಸತ್ತಿದ್ದಾರೆ. ಅಂದರೆ ಸೇತುವೆ ಮುರಿದ ರಭಸಕ್ಕೆ ಗಟ್ಟಿಯಾದ ನೆಲದತ್ತ ಅನೇಕರು ಎಸೆಯಲ್ಪಟ್ಟಿದ್ದಾರೆ. ಸೇತುವೆಯ ಮಧ್ಯದಲ್ಲಿದ್ದವರು ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...