Homeಮುಖಪುಟಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

- Advertisement -
- Advertisement -

ಗುಜರಾತಿನ ಶತಮಾನದಷ್ಟು ಹಳೆಯದಾದ ಸೇತುವೆಯ ನವೀಕರಣ ನಡೆಸಿದ ಖಾಸಗಿ ಸಂಸ್ಥೆಯು ಕೆಲವು ಹಳೆಯ ತಂತಿಗಳನ್ನೂ ತನ್ನ ಏಳು ತಿಂಗಳ ನವೀಕರಣದ ಸಮಯದಲ್ಲಿ ಬದಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.

‘ಸೇತುವೆಯನ್ನು ನವೀಕರಿಸಿದ ಗುಜರಾತ್ ಮೂಲದ ಗಡಿಯಾರ ತಯಾರಿಕಾ ಒರೆವಾ ಸಂಸ್ಥೆಗೆ ಮಾರ್ಚ್‌ನಲ್ಲಿ ಮೋರ್ಬಿ ನಗರ ಪುರಸಭೆಯಿಂದ ಗುತ್ತಿಗೆ ನೀಡಲಾಯಿತು. ಆದರೆ ಯಾವುದೇ ಟೆಂಡರ್ ನೀಡುವ ಕ್ರಮ ಜರುಗಿಸಿರಲಿಲ್ಲ’ ಎಂದು ಒಪ್ಪಂದದ ಕಡತಗಳು ಹೇಳುತ್ತಿವೆ. ಸೇತುವೆಯಲ್ಲಿ ಕಟ್ಟಲಾಗಿದ್ದ ಕೆಲವು ಹಳೆಯ ತಂತಿಗಳನ್ನು ನವೀಕರಣದ ನಂತರವೂ ಉಳಿಸಿಕೊಳ್ಳಲಾಗಿದೆ ಎಂಬ ಸಂಗತಿ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜನರ ಭಾರೀ ನೂಕುನುಗ್ಗಲಿನ ಭಾರದಿಂದ ಸೇತುವೆ ಕುಸಿದಿದೆ ಎಂದು ಗುಜರಾತಿನ ವಿಧಿವಿಜ್ಞಾನ ಪ್ರಯೋಗಾಲಯವು ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ವಿಧಿವಿಜ್ಞಾನ ತಂಡವು ಕತ್ತರಿಸಿಬಿದ್ದ ಸೇತುವೆಯ ಲೋಹದ ತುಣುಕುಗಳನ್ನು ಪರೀಕ್ಷೆಗೆ ಒಳಪಡಿಸಿದೆ.

ಹೆಚ್ಚಾದ ಜನಸಂದಣಿಯು ಸೇತುವೆಯ ರಚನಾತ್ಮಕ ಸಮಗ್ರತೆಯ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದು ದುರಂತಕ್ಕೆ ಕಾರಣವಾಯಿತು ಎಂದು ವಿಧಿವಿಜ್ಞಾನ ತಂಡದ ಮೂಲಗಳು ಹೇಳಿವೆ.

ಲೋಹದ ತಂತಿಗಳು ಕತ್ತರಿಸಿ ನದಿಗೆ ಬೀಳುವ ಮೊದಲು ಜನರ ಗುಂಪು ಫೋಟೋಗಳನ್ನು ತೆಗೆದುಕೊಳ್ಳುತ್ತಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ. ಜೊತೆಗೆ ಸೇತುವೆಯು ತಿರುಗುತ್ತಿರುವುದು ಕಂಡುಬಂದಿದೆ.

“ಸೇತುವೆಯನ್ನು ಮತ್ತೆ ತೆರೆಯುವ ಬಗ್ಗೆ ಓರೆವಾ ಸಂಸ್ಥೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿರಲಿಲ್ಲ. ಹಾಗೆ ಮಾಡಲು ಕಂಪನಿಗೆ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗಿಲ್ಲ” ಎಂದು ಪುರಸಭೆಯ ಮುಖ್ಯಾಧಿಕಾರಿ ಸಂದೀಪ್‌ಸಿಂಗ್ ಝಾಲಾ ಹೇಳಿದ್ದಾರೆ. ಈ ಆರೋಪಕ್ಕೆ ಓರೆವಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗಡಿಯಾರ ತಯಾರಕ ಸಂಸ್ಥೆಯು “ನವೀಕರಣದ ತಾಂತ್ರಿಕ ಸಂಗತಿಗಳನ್ನು ಚಿಕ್ಕ ನಿರ್ಮಾಣ ಕಂಪನಿಯಾದ ದೇವಪ್ರಕಾಶ್ ಸೊಲ್ಯೂಷನ್ಸ್‌ಗೆ ಹೊರಗುತ್ತಿಗೆ ನೀಡಿದೆ” ಎಂದು ವರದಿಯಾಗಿದೆ.

ಕಳೆದ ವಾರ ಸೇತುವೆಯನ್ನು ಪುನಾರಾಂಭ ಮಾಡುವ ಸಂದರ್ಭದಲ್ಲಿ ಓರೆವಾ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ಭಾಯ್ ಪಟೇಲ್ ಮಾತನಾಡುತ್ತಾ, “ಕಂಪನಿಯು ₹ 2 ಕೋಟಿ ವೆಚ್ಚದಲ್ಲಿ 100 ರಷ್ಟು ನವೀಕರಣವನ್ನು ನೆರವೇರಿಸಿದೆ” ಎಂದಿದ್ದರು.

ಇದನ್ನೂ ಓದಿರಿ: ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಘಟನೆಯ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಒಂಬತ್ತು ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಒರೆವಾ ವ್ಯವಸ್ಥಾಪಕರು, ಟಿಕೆಟ್ ಕಲೆಕ್ಟರ್‌ಗಳು, ಸೇತುವೆ ರಿಪೇರಿ ಗುತ್ತಿಗೆದಾರರು ಮತ್ತು ಮೂವರು ಸೆಕ್ಯುರಿಟಿ ಗಾರ್ಡ್‌ಗಳು ಇದ್ದಾರೆ. ಜನಸಂದಣಿಯನ್ನು ನಿಯಂತ್ರಿಸುವುದು ಅವರ ಕೆಲಸವಾಗಿತ್ತು.

ಮಚ್ಚು ನದಿಯಲ್ಲಿನ ಶೋಧ ಕಾರ್ಯಾಚರಣೆಯನ್ನು ದಿನದ ಮಟ್ಟಿಗೆ ಹಿಂತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇಂದು ಬೆಳಿಗ್ಗೆ ಕಾರ್ಯಾಚರಣೆ ಪುನಾರಂಭಿಸಲಿದ್ದಾರೆ. ಸುಮಾರು ನೂರಕ್ಕೂ ಹೆಚ್ಚು ಮೃತದೇಹಗಳು ನೀರಿನಡಿಯ ಕೆಸರಿನಲ್ಲಿ ಸಿಲುಕಿರುವ ಆತಂಕವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸೇತುವೆಯ ಎರಡೂ ತುದಿಗಳಿಗೆ ಸಮೀಪದಲ್ಲಿದ್ದ ಅನೇಕ ಜನರು ನೀರಿಲ್ಲದ ಜಾಗಕ್ಕೆ ಬಿದ್ದು ಸತ್ತಿದ್ದಾರೆ. ಅಂದರೆ ಸೇತುವೆ ಮುರಿದ ರಭಸಕ್ಕೆ ಗಟ್ಟಿಯಾದ ನೆಲದತ್ತ ಅನೇಕರು ಎಸೆಯಲ್ಪಟ್ಟಿದ್ದಾರೆ. ಸೇತುವೆಯ ಮಧ್ಯದಲ್ಲಿದ್ದವರು ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...