Homeಮುಖಪುಟಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

- Advertisement -
- Advertisement -

ಗುಜರಾತಿನ ಶತಮಾನದಷ್ಟು ಹಳೆಯದಾದ ಸೇತುವೆಯ ನವೀಕರಣ ನಡೆಸಿದ ಖಾಸಗಿ ಸಂಸ್ಥೆಯು ಕೆಲವು ಹಳೆಯ ತಂತಿಗಳನ್ನೂ ತನ್ನ ಏಳು ತಿಂಗಳ ನವೀಕರಣದ ಸಮಯದಲ್ಲಿ ಬದಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.

‘ಸೇತುವೆಯನ್ನು ನವೀಕರಿಸಿದ ಗುಜರಾತ್ ಮೂಲದ ಗಡಿಯಾರ ತಯಾರಿಕಾ ಒರೆವಾ ಸಂಸ್ಥೆಗೆ ಮಾರ್ಚ್‌ನಲ್ಲಿ ಮೋರ್ಬಿ ನಗರ ಪುರಸಭೆಯಿಂದ ಗುತ್ತಿಗೆ ನೀಡಲಾಯಿತು. ಆದರೆ ಯಾವುದೇ ಟೆಂಡರ್ ನೀಡುವ ಕ್ರಮ ಜರುಗಿಸಿರಲಿಲ್ಲ’ ಎಂದು ಒಪ್ಪಂದದ ಕಡತಗಳು ಹೇಳುತ್ತಿವೆ. ಸೇತುವೆಯಲ್ಲಿ ಕಟ್ಟಲಾಗಿದ್ದ ಕೆಲವು ಹಳೆಯ ತಂತಿಗಳನ್ನು ನವೀಕರಣದ ನಂತರವೂ ಉಳಿಸಿಕೊಳ್ಳಲಾಗಿದೆ ಎಂಬ ಸಂಗತಿ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜನರ ಭಾರೀ ನೂಕುನುಗ್ಗಲಿನ ಭಾರದಿಂದ ಸೇತುವೆ ಕುಸಿದಿದೆ ಎಂದು ಗುಜರಾತಿನ ವಿಧಿವಿಜ್ಞಾನ ಪ್ರಯೋಗಾಲಯವು ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ವಿಧಿವಿಜ್ಞಾನ ತಂಡವು ಕತ್ತರಿಸಿಬಿದ್ದ ಸೇತುವೆಯ ಲೋಹದ ತುಣುಕುಗಳನ್ನು ಪರೀಕ್ಷೆಗೆ ಒಳಪಡಿಸಿದೆ.

ಹೆಚ್ಚಾದ ಜನಸಂದಣಿಯು ಸೇತುವೆಯ ರಚನಾತ್ಮಕ ಸಮಗ್ರತೆಯ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದು ದುರಂತಕ್ಕೆ ಕಾರಣವಾಯಿತು ಎಂದು ವಿಧಿವಿಜ್ಞಾನ ತಂಡದ ಮೂಲಗಳು ಹೇಳಿವೆ.

ಲೋಹದ ತಂತಿಗಳು ಕತ್ತರಿಸಿ ನದಿಗೆ ಬೀಳುವ ಮೊದಲು ಜನರ ಗುಂಪು ಫೋಟೋಗಳನ್ನು ತೆಗೆದುಕೊಳ್ಳುತ್ತಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ. ಜೊತೆಗೆ ಸೇತುವೆಯು ತಿರುಗುತ್ತಿರುವುದು ಕಂಡುಬಂದಿದೆ.

“ಸೇತುವೆಯನ್ನು ಮತ್ತೆ ತೆರೆಯುವ ಬಗ್ಗೆ ಓರೆವಾ ಸಂಸ್ಥೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿರಲಿಲ್ಲ. ಹಾಗೆ ಮಾಡಲು ಕಂಪನಿಗೆ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗಿಲ್ಲ” ಎಂದು ಪುರಸಭೆಯ ಮುಖ್ಯಾಧಿಕಾರಿ ಸಂದೀಪ್‌ಸಿಂಗ್ ಝಾಲಾ ಹೇಳಿದ್ದಾರೆ. ಈ ಆರೋಪಕ್ಕೆ ಓರೆವಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗಡಿಯಾರ ತಯಾರಕ ಸಂಸ್ಥೆಯು “ನವೀಕರಣದ ತಾಂತ್ರಿಕ ಸಂಗತಿಗಳನ್ನು ಚಿಕ್ಕ ನಿರ್ಮಾಣ ಕಂಪನಿಯಾದ ದೇವಪ್ರಕಾಶ್ ಸೊಲ್ಯೂಷನ್ಸ್‌ಗೆ ಹೊರಗುತ್ತಿಗೆ ನೀಡಿದೆ” ಎಂದು ವರದಿಯಾಗಿದೆ.

ಕಳೆದ ವಾರ ಸೇತುವೆಯನ್ನು ಪುನಾರಾಂಭ ಮಾಡುವ ಸಂದರ್ಭದಲ್ಲಿ ಓರೆವಾ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ಭಾಯ್ ಪಟೇಲ್ ಮಾತನಾಡುತ್ತಾ, “ಕಂಪನಿಯು ₹ 2 ಕೋಟಿ ವೆಚ್ಚದಲ್ಲಿ 100 ರಷ್ಟು ನವೀಕರಣವನ್ನು ನೆರವೇರಿಸಿದೆ” ಎಂದಿದ್ದರು.

ಇದನ್ನೂ ಓದಿರಿ: ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಘಟನೆಯ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಒಂಬತ್ತು ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಒರೆವಾ ವ್ಯವಸ್ಥಾಪಕರು, ಟಿಕೆಟ್ ಕಲೆಕ್ಟರ್‌ಗಳು, ಸೇತುವೆ ರಿಪೇರಿ ಗುತ್ತಿಗೆದಾರರು ಮತ್ತು ಮೂವರು ಸೆಕ್ಯುರಿಟಿ ಗಾರ್ಡ್‌ಗಳು ಇದ್ದಾರೆ. ಜನಸಂದಣಿಯನ್ನು ನಿಯಂತ್ರಿಸುವುದು ಅವರ ಕೆಲಸವಾಗಿತ್ತು.

ಮಚ್ಚು ನದಿಯಲ್ಲಿನ ಶೋಧ ಕಾರ್ಯಾಚರಣೆಯನ್ನು ದಿನದ ಮಟ್ಟಿಗೆ ಹಿಂತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇಂದು ಬೆಳಿಗ್ಗೆ ಕಾರ್ಯಾಚರಣೆ ಪುನಾರಂಭಿಸಲಿದ್ದಾರೆ. ಸುಮಾರು ನೂರಕ್ಕೂ ಹೆಚ್ಚು ಮೃತದೇಹಗಳು ನೀರಿನಡಿಯ ಕೆಸರಿನಲ್ಲಿ ಸಿಲುಕಿರುವ ಆತಂಕವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸೇತುವೆಯ ಎರಡೂ ತುದಿಗಳಿಗೆ ಸಮೀಪದಲ್ಲಿದ್ದ ಅನೇಕ ಜನರು ನೀರಿಲ್ಲದ ಜಾಗಕ್ಕೆ ಬಿದ್ದು ಸತ್ತಿದ್ದಾರೆ. ಅಂದರೆ ಸೇತುವೆ ಮುರಿದ ರಭಸಕ್ಕೆ ಗಟ್ಟಿಯಾದ ನೆಲದತ್ತ ಅನೇಕರು ಎಸೆಯಲ್ಪಟ್ಟಿದ್ದಾರೆ. ಸೇತುವೆಯ ಮಧ್ಯದಲ್ಲಿದ್ದವರು ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತಿದ್ದಾರೆ ಎಂದು ವರದಿಯಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...