Homeಚಳವಳಿಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ತನ್ನ ತಂದೆಯನ್ನು ಕೊಲ್ಲದಂತೆ ಅಡ್ಡಿಪಡಿಸಿದ ಮಗಳ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

- Advertisement -
- Advertisement -

ತನ್ನ ಜಮೀನನ್ನು ವಶಪಡಿಸಿದ್ದ ಗೂಂಡಾಗಳ ವಿರುದ್ದ ಹೋರಾಟ ನಡೆಸುತ್ತಿದ್ದ ದಲಿತ ಆರ್‌ಟಿಐ ಹೋರಾಟಗಾರರೊಬ್ಬರನ್ನು, ಮೇಲ್ಜಾತಿಯ ಜನರು ಹತ್ಯೆಗೈದಿರುವ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಂಗಳವಾರ ನಡೆದಿದೆ. ಈ ವೇಳೆ ತನ್ನ ತಂದೆಯನ್ನು ಕೊಲ್ಲದಂತೆ ಅಡ್ಡಿಪಡಿಸಿದ ಮಗಳ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಜಿಲ್ಲೆಯ ಘೋಘಾ ತಾಲೂಕಿನ ಸನೋದರ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಹತ್ಯೆಗೀಡಾದ ಹೋರಾಟಗಾರನ್ನು ಅಮ್ರಾಭಾಯ್ ಬೋರಿಚಾ (50) ಎಂದು ಗುರಿತಿಸಲಾಗಿದೆ. ದುಷ್ಕರ್ಮಿಗಳು ಅವರ ಮೇಲೆ ಈಟಿ, ಕಬ್ಬಿಣದ ಪೈಪ್ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಅವರ ಕುಟುಂಬ ಸದಸ್ಯರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಮೊದಲು ಅವರು ನಮ್ಮ ಮೇಲೆ ಕಲ್ಲು ಎಸೆದರು. ನನ್ನ ತಂದೆ ರಕ್ಷಣೆಗಾಗಿ ಮನೆಯೊಳಗೆ ಧಾವಿಸುತ್ತಿದ್ದಂತೆ, ಹಲ್ಲೆಕೋರರು ಗೇಟ್ ಮುರಿದು, ಅಡ್ಡಗಟ್ಟಿ ಈಟಿ, ಕಬ್ಬಿಣದ ಪೈಪ್‌‌ ಮತ್ತು ಕತ್ತಿಯಿಂದ ಹಲ್ಲೆ ನಡೆಸಿ ಕೊಂದುಹಾಕಿದರು” ಎಂದು ಬೋರಿಚಾ ಅವರ ಮಗಳು ನಿರ್ಮಲಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮಂಗಳವಾರ ಸಂಜೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

“ತಂದೆ ಮತ್ತು ನಾನು ಹೊರಗೆ ನಿಂತಿದ್ದಾಗ ನಮ್ಮ ಹಳ್ಳಿಯ ದರ್ಬಾರ್‌ಗಳ (ಕ್ಷತ್ರಿಯರು) ಸುಮಾರು 50 ಸದಸ್ಯರು ನಮ್ಮ ಮನೆಯ ಮುಂದಿನಿಂದ ಡಿಜೆ ಸಂಗೀತ ನುಡಿಸುತ್ತಾ ಹೋಗಿದ್ದಾರೆ. ಸ್ವಲ್ಪ ಸಮಯದ ನಂತರ ಹಿಂತಿರುಗಿದ ಅವರು ನಮ್ಮ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದರು. ನಮಗೆ ಪೊಲೀಸ್ ರಕ್ಷಣೆ ಇದೆ, ಅದನ್ನೂ ಮೀರಿ ಅವರು ಈಟಿ, ಕೊಡಲಿ, ಪೈಪ್ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿದ್ದಾರೆ” ಎಂದು ನಿರ್ಮಲಾ ಹೇಳಿದ್ದಾರೆ.

ದಾಳಿಯಲ್ಲಿ ಗಾಯಗೊಂಡ ನಿರ್ಮಲಾ ಅವರನ್ನು ಭಾವನಗರದ ಸರ್ ತಕ್ತಾಸಿಂಜಿ ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ತಮ್ಮ ತಂದೆಯ ಮೇಲೆ 2013 ರಲ್ಲೂ ಹಲ್ಲೆ ನಡೆಸಲಾಗಿತ್ತು ಈ ವೇಳೆ ಅವರ ಕಾಲನ್ನು ಮುರಿಯಲಾಗಿತ್ತು ಎಂದು ನಿರ್ಮಲಾ ಹೇಳಿದ್ದಾರೆ.

ಘಟನೆಯ ಬಗ್ಗೆ ಶಾಸಕ ಜಿಗ್ನೇಶ್ ವಿವರಿಸುವ ವಿಡಿಯೋ ನೋಡಿ

ದಲಿತ ಹಕ್ಕುಗಳಿಗಾಗಿ ಕೆಲಸ ಮಾಡುತ್ತಿರುವ ಅಹಮದಾಬಾದ್ ಮೂಲದ ಎನ್‌ಜಿಒದ ಕಾರ್ಯಕರ್ತ ಅರವಿಂದ್ ಮಕ್ವಾನಾ ಹೇಳುವಂತೆ, “ಸುಮಾರು ಒಂದು ತಿಂಗಳ ಹಿಂದೆ ಬೋರಿಚಾ ಅವರು ಕ್ಷತ್ರಿಯರ ವಿರುದ್ಧ ಘೋಘಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಆದರೆ ಘೋಗಾದ ಸಬ್ ಇನ್ಸ್‌ಪೆಕ್ಟರ್ ಪಿ.ಆರ್.ಸೋಲಂಕಿ ಎಫ್ಐಆರ್ ನೋಂದಾಯಿಸಲಿಲ್ಲ. ಇದಕ್ಕಾಗಿ ಬೋರಿಚಾ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಈ ಮಧ್ಯೆ, ಕ್ಷತ್ರಿಯರ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ಬೋರಿಚಾ ಹತ್ಯೆಗೆ ಸಂಬಂಧಿಸಿದಂತೆ ರಾತ್ರಿ 10.30 ರವರೆಗೆ ಘೋಘಾ ಪೊಲೀಸ್ ಠಾಣೆಯಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎನ್ನಲಾಗಿದೆ. ಈ ಬಗ್ಗೆ ಪಿಎಸ್‌ಐ ಸೋಲಂಕಿ, ಭಾವನಗರ ಎಸ್‌ಪಿ ಮತ್ತು ಐಜಿ ವರದಿಗಾರರ ದೂರವಾಣಿ ಕರೆಗಳಿಗೆ ಉತ್ತರಿಸಲಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲಿ ಹೇಳಿದೆ.

ಬೋರಿಚಾ ಸನೋದರ್ ಗ್ರಾಮದ ಏಕೈಕ ದಲಿತ ಕುಟುಂಬಿಕನಾಗಿದ್ದು, ಕ್ಷತ್ರಿಯರು ಅವರ ಕೃಷಿ ಭೂಮಿಯನ್ನು ಮತ್ತು ವಸತಿ ಜಮೀನನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಮಕ್ವಾನಾ ಆರೋಪಿಸಿದ್ದಾರೆ.

“ಸುಮಾರು ಒಂದು ತಿಂಗಳ ಹಿಂದೆ, ಆರೋಪಿಗಳು ಬೋರಿಚಾ ಅವರ ವಸತಿ ಜಾಗವನ್ನು ಅತಿಕ್ರಮಿಸಿಕೊಂಡಿದ್ದರು. ಅವರು ಪೊಲೀಸರಿಗೆ ದೂರು ನೀಡಿದ್ದರು ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಮಕ್ವಾನಾ ತಿಳಿಸಿದ್ದಾರೆ.

ಘಟನೆಯನ್ನು ಗುಜರಾತ್‌ ಶಾಸಕ, ಊನಾ ಚಳವಳಿಯ ನಾಯಕ ಜಿಗ್ನೇಶ್ ಮೇವಾನಿ ಖಂಡಿಸಿದ್ದು, ಹೋರಾಟಗಾರರು, ಪ್ರಭಾವಿ ಸೆಲೆಬ್ರಿಟಿಗಳು ಮತ್ತು ಪತ್ರಕರ್ತರು ಈ ಘಟನೆಯ ಬಗ್ಗೆ ಧ್ವನಿ ಎತ್ತುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ: ’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

ಐತಿಹಾಸಿಕ ಹೋರಾಟದಲ್ಲಿರುವ ರೈತರು ದೆಹಲಿಯ ಬಿರು ಬಿಸಿಲಿನಿಂದ ರಕ್ಷಣೆ ಹೊಂದಲು ಮಾಡುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...