Homeಚಳವಳಿಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ತನ್ನ ತಂದೆಯನ್ನು ಕೊಲ್ಲದಂತೆ ಅಡ್ಡಿಪಡಿಸಿದ ಮಗಳ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

- Advertisement -
- Advertisement -

ತನ್ನ ಜಮೀನನ್ನು ವಶಪಡಿಸಿದ್ದ ಗೂಂಡಾಗಳ ವಿರುದ್ದ ಹೋರಾಟ ನಡೆಸುತ್ತಿದ್ದ ದಲಿತ ಆರ್‌ಟಿಐ ಹೋರಾಟಗಾರರೊಬ್ಬರನ್ನು, ಮೇಲ್ಜಾತಿಯ ಜನರು ಹತ್ಯೆಗೈದಿರುವ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಂಗಳವಾರ ನಡೆದಿದೆ. ಈ ವೇಳೆ ತನ್ನ ತಂದೆಯನ್ನು ಕೊಲ್ಲದಂತೆ ಅಡ್ಡಿಪಡಿಸಿದ ಮಗಳ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಜಿಲ್ಲೆಯ ಘೋಘಾ ತಾಲೂಕಿನ ಸನೋದರ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಹತ್ಯೆಗೀಡಾದ ಹೋರಾಟಗಾರನ್ನು ಅಮ್ರಾಭಾಯ್ ಬೋರಿಚಾ (50) ಎಂದು ಗುರಿತಿಸಲಾಗಿದೆ. ದುಷ್ಕರ್ಮಿಗಳು ಅವರ ಮೇಲೆ ಈಟಿ, ಕಬ್ಬಿಣದ ಪೈಪ್ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಅವರ ಕುಟುಂಬ ಸದಸ್ಯರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಮೊದಲು ಅವರು ನಮ್ಮ ಮೇಲೆ ಕಲ್ಲು ಎಸೆದರು. ನನ್ನ ತಂದೆ ರಕ್ಷಣೆಗಾಗಿ ಮನೆಯೊಳಗೆ ಧಾವಿಸುತ್ತಿದ್ದಂತೆ, ಹಲ್ಲೆಕೋರರು ಗೇಟ್ ಮುರಿದು, ಅಡ್ಡಗಟ್ಟಿ ಈಟಿ, ಕಬ್ಬಿಣದ ಪೈಪ್‌‌ ಮತ್ತು ಕತ್ತಿಯಿಂದ ಹಲ್ಲೆ ನಡೆಸಿ ಕೊಂದುಹಾಕಿದರು” ಎಂದು ಬೋರಿಚಾ ಅವರ ಮಗಳು ನಿರ್ಮಲಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮಂಗಳವಾರ ಸಂಜೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

“ತಂದೆ ಮತ್ತು ನಾನು ಹೊರಗೆ ನಿಂತಿದ್ದಾಗ ನಮ್ಮ ಹಳ್ಳಿಯ ದರ್ಬಾರ್‌ಗಳ (ಕ್ಷತ್ರಿಯರು) ಸುಮಾರು 50 ಸದಸ್ಯರು ನಮ್ಮ ಮನೆಯ ಮುಂದಿನಿಂದ ಡಿಜೆ ಸಂಗೀತ ನುಡಿಸುತ್ತಾ ಹೋಗಿದ್ದಾರೆ. ಸ್ವಲ್ಪ ಸಮಯದ ನಂತರ ಹಿಂತಿರುಗಿದ ಅವರು ನಮ್ಮ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದರು. ನಮಗೆ ಪೊಲೀಸ್ ರಕ್ಷಣೆ ಇದೆ, ಅದನ್ನೂ ಮೀರಿ ಅವರು ಈಟಿ, ಕೊಡಲಿ, ಪೈಪ್ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿದ್ದಾರೆ” ಎಂದು ನಿರ್ಮಲಾ ಹೇಳಿದ್ದಾರೆ.

ದಾಳಿಯಲ್ಲಿ ಗಾಯಗೊಂಡ ನಿರ್ಮಲಾ ಅವರನ್ನು ಭಾವನಗರದ ಸರ್ ತಕ್ತಾಸಿಂಜಿ ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ತಮ್ಮ ತಂದೆಯ ಮೇಲೆ 2013 ರಲ್ಲೂ ಹಲ್ಲೆ ನಡೆಸಲಾಗಿತ್ತು ಈ ವೇಳೆ ಅವರ ಕಾಲನ್ನು ಮುರಿಯಲಾಗಿತ್ತು ಎಂದು ನಿರ್ಮಲಾ ಹೇಳಿದ್ದಾರೆ.

ಘಟನೆಯ ಬಗ್ಗೆ ಶಾಸಕ ಜಿಗ್ನೇಶ್ ವಿವರಿಸುವ ವಿಡಿಯೋ ನೋಡಿ

ದಲಿತ ಹಕ್ಕುಗಳಿಗಾಗಿ ಕೆಲಸ ಮಾಡುತ್ತಿರುವ ಅಹಮದಾಬಾದ್ ಮೂಲದ ಎನ್‌ಜಿಒದ ಕಾರ್ಯಕರ್ತ ಅರವಿಂದ್ ಮಕ್ವಾನಾ ಹೇಳುವಂತೆ, “ಸುಮಾರು ಒಂದು ತಿಂಗಳ ಹಿಂದೆ ಬೋರಿಚಾ ಅವರು ಕ್ಷತ್ರಿಯರ ವಿರುದ್ಧ ಘೋಘಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಆದರೆ ಘೋಗಾದ ಸಬ್ ಇನ್ಸ್‌ಪೆಕ್ಟರ್ ಪಿ.ಆರ್.ಸೋಲಂಕಿ ಎಫ್ಐಆರ್ ನೋಂದಾಯಿಸಲಿಲ್ಲ. ಇದಕ್ಕಾಗಿ ಬೋರಿಚಾ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಈ ಮಧ್ಯೆ, ಕ್ಷತ್ರಿಯರ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ಬೋರಿಚಾ ಹತ್ಯೆಗೆ ಸಂಬಂಧಿಸಿದಂತೆ ರಾತ್ರಿ 10.30 ರವರೆಗೆ ಘೋಘಾ ಪೊಲೀಸ್ ಠಾಣೆಯಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎನ್ನಲಾಗಿದೆ. ಈ ಬಗ್ಗೆ ಪಿಎಸ್‌ಐ ಸೋಲಂಕಿ, ಭಾವನಗರ ಎಸ್‌ಪಿ ಮತ್ತು ಐಜಿ ವರದಿಗಾರರ ದೂರವಾಣಿ ಕರೆಗಳಿಗೆ ಉತ್ತರಿಸಲಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲಿ ಹೇಳಿದೆ.

ಬೋರಿಚಾ ಸನೋದರ್ ಗ್ರಾಮದ ಏಕೈಕ ದಲಿತ ಕುಟುಂಬಿಕನಾಗಿದ್ದು, ಕ್ಷತ್ರಿಯರು ಅವರ ಕೃಷಿ ಭೂಮಿಯನ್ನು ಮತ್ತು ವಸತಿ ಜಮೀನನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಮಕ್ವಾನಾ ಆರೋಪಿಸಿದ್ದಾರೆ.

“ಸುಮಾರು ಒಂದು ತಿಂಗಳ ಹಿಂದೆ, ಆರೋಪಿಗಳು ಬೋರಿಚಾ ಅವರ ವಸತಿ ಜಾಗವನ್ನು ಅತಿಕ್ರಮಿಸಿಕೊಂಡಿದ್ದರು. ಅವರು ಪೊಲೀಸರಿಗೆ ದೂರು ನೀಡಿದ್ದರು ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಮಕ್ವಾನಾ ತಿಳಿಸಿದ್ದಾರೆ.

ಘಟನೆಯನ್ನು ಗುಜರಾತ್‌ ಶಾಸಕ, ಊನಾ ಚಳವಳಿಯ ನಾಯಕ ಜಿಗ್ನೇಶ್ ಮೇವಾನಿ ಖಂಡಿಸಿದ್ದು, ಹೋರಾಟಗಾರರು, ಪ್ರಭಾವಿ ಸೆಲೆಬ್ರಿಟಿಗಳು ಮತ್ತು ಪತ್ರಕರ್ತರು ಈ ಘಟನೆಯ ಬಗ್ಗೆ ಧ್ವನಿ ಎತ್ತುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ: ’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

ಐತಿಹಾಸಿಕ ಹೋರಾಟದಲ್ಲಿರುವ ರೈತರು ದೆಹಲಿಯ ಬಿರು ಬಿಸಿಲಿನಿಂದ ರಕ್ಷಣೆ ಹೊಂದಲು ಮಾಡುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...