Homeಚಳವಳಿಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ತನ್ನ ತಂದೆಯನ್ನು ಕೊಲ್ಲದಂತೆ ಅಡ್ಡಿಪಡಿಸಿದ ಮಗಳ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

- Advertisement -
- Advertisement -

ತನ್ನ ಜಮೀನನ್ನು ವಶಪಡಿಸಿದ್ದ ಗೂಂಡಾಗಳ ವಿರುದ್ದ ಹೋರಾಟ ನಡೆಸುತ್ತಿದ್ದ ದಲಿತ ಆರ್‌ಟಿಐ ಹೋರಾಟಗಾರರೊಬ್ಬರನ್ನು, ಮೇಲ್ಜಾತಿಯ ಜನರು ಹತ್ಯೆಗೈದಿರುವ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಂಗಳವಾರ ನಡೆದಿದೆ. ಈ ವೇಳೆ ತನ್ನ ತಂದೆಯನ್ನು ಕೊಲ್ಲದಂತೆ ಅಡ್ಡಿಪಡಿಸಿದ ಮಗಳ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಜಿಲ್ಲೆಯ ಘೋಘಾ ತಾಲೂಕಿನ ಸನೋದರ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಹತ್ಯೆಗೀಡಾದ ಹೋರಾಟಗಾರನ್ನು ಅಮ್ರಾಭಾಯ್ ಬೋರಿಚಾ (50) ಎಂದು ಗುರಿತಿಸಲಾಗಿದೆ. ದುಷ್ಕರ್ಮಿಗಳು ಅವರ ಮೇಲೆ ಈಟಿ, ಕಬ್ಬಿಣದ ಪೈಪ್ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಅವರ ಕುಟುಂಬ ಸದಸ್ಯರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಮೊದಲು ಅವರು ನಮ್ಮ ಮೇಲೆ ಕಲ್ಲು ಎಸೆದರು. ನನ್ನ ತಂದೆ ರಕ್ಷಣೆಗಾಗಿ ಮನೆಯೊಳಗೆ ಧಾವಿಸುತ್ತಿದ್ದಂತೆ, ಹಲ್ಲೆಕೋರರು ಗೇಟ್ ಮುರಿದು, ಅಡ್ಡಗಟ್ಟಿ ಈಟಿ, ಕಬ್ಬಿಣದ ಪೈಪ್‌‌ ಮತ್ತು ಕತ್ತಿಯಿಂದ ಹಲ್ಲೆ ನಡೆಸಿ ಕೊಂದುಹಾಕಿದರು” ಎಂದು ಬೋರಿಚಾ ಅವರ ಮಗಳು ನಿರ್ಮಲಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮಂಗಳವಾರ ಸಂಜೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

“ತಂದೆ ಮತ್ತು ನಾನು ಹೊರಗೆ ನಿಂತಿದ್ದಾಗ ನಮ್ಮ ಹಳ್ಳಿಯ ದರ್ಬಾರ್‌ಗಳ (ಕ್ಷತ್ರಿಯರು) ಸುಮಾರು 50 ಸದಸ್ಯರು ನಮ್ಮ ಮನೆಯ ಮುಂದಿನಿಂದ ಡಿಜೆ ಸಂಗೀತ ನುಡಿಸುತ್ತಾ ಹೋಗಿದ್ದಾರೆ. ಸ್ವಲ್ಪ ಸಮಯದ ನಂತರ ಹಿಂತಿರುಗಿದ ಅವರು ನಮ್ಮ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದರು. ನಮಗೆ ಪೊಲೀಸ್ ರಕ್ಷಣೆ ಇದೆ, ಅದನ್ನೂ ಮೀರಿ ಅವರು ಈಟಿ, ಕೊಡಲಿ, ಪೈಪ್ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿದ್ದಾರೆ” ಎಂದು ನಿರ್ಮಲಾ ಹೇಳಿದ್ದಾರೆ.

ದಾಳಿಯಲ್ಲಿ ಗಾಯಗೊಂಡ ನಿರ್ಮಲಾ ಅವರನ್ನು ಭಾವನಗರದ ಸರ್ ತಕ್ತಾಸಿಂಜಿ ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ತಮ್ಮ ತಂದೆಯ ಮೇಲೆ 2013 ರಲ್ಲೂ ಹಲ್ಲೆ ನಡೆಸಲಾಗಿತ್ತು ಈ ವೇಳೆ ಅವರ ಕಾಲನ್ನು ಮುರಿಯಲಾಗಿತ್ತು ಎಂದು ನಿರ್ಮಲಾ ಹೇಳಿದ್ದಾರೆ.

ಘಟನೆಯ ಬಗ್ಗೆ ಶಾಸಕ ಜಿಗ್ನೇಶ್ ವಿವರಿಸುವ ವಿಡಿಯೋ ನೋಡಿ

ದಲಿತ ಹಕ್ಕುಗಳಿಗಾಗಿ ಕೆಲಸ ಮಾಡುತ್ತಿರುವ ಅಹಮದಾಬಾದ್ ಮೂಲದ ಎನ್‌ಜಿಒದ ಕಾರ್ಯಕರ್ತ ಅರವಿಂದ್ ಮಕ್ವಾನಾ ಹೇಳುವಂತೆ, “ಸುಮಾರು ಒಂದು ತಿಂಗಳ ಹಿಂದೆ ಬೋರಿಚಾ ಅವರು ಕ್ಷತ್ರಿಯರ ವಿರುದ್ಧ ಘೋಘಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಆದರೆ ಘೋಗಾದ ಸಬ್ ಇನ್ಸ್‌ಪೆಕ್ಟರ್ ಪಿ.ಆರ್.ಸೋಲಂಕಿ ಎಫ್ಐಆರ್ ನೋಂದಾಯಿಸಲಿಲ್ಲ. ಇದಕ್ಕಾಗಿ ಬೋರಿಚಾ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಈ ಮಧ್ಯೆ, ಕ್ಷತ್ರಿಯರ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ಬೋರಿಚಾ ಹತ್ಯೆಗೆ ಸಂಬಂಧಿಸಿದಂತೆ ರಾತ್ರಿ 10.30 ರವರೆಗೆ ಘೋಘಾ ಪೊಲೀಸ್ ಠಾಣೆಯಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎನ್ನಲಾಗಿದೆ. ಈ ಬಗ್ಗೆ ಪಿಎಸ್‌ಐ ಸೋಲಂಕಿ, ಭಾವನಗರ ಎಸ್‌ಪಿ ಮತ್ತು ಐಜಿ ವರದಿಗಾರರ ದೂರವಾಣಿ ಕರೆಗಳಿಗೆ ಉತ್ತರಿಸಲಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲಿ ಹೇಳಿದೆ.

ಬೋರಿಚಾ ಸನೋದರ್ ಗ್ರಾಮದ ಏಕೈಕ ದಲಿತ ಕುಟುಂಬಿಕನಾಗಿದ್ದು, ಕ್ಷತ್ರಿಯರು ಅವರ ಕೃಷಿ ಭೂಮಿಯನ್ನು ಮತ್ತು ವಸತಿ ಜಮೀನನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಮಕ್ವಾನಾ ಆರೋಪಿಸಿದ್ದಾರೆ.

“ಸುಮಾರು ಒಂದು ತಿಂಗಳ ಹಿಂದೆ, ಆರೋಪಿಗಳು ಬೋರಿಚಾ ಅವರ ವಸತಿ ಜಾಗವನ್ನು ಅತಿಕ್ರಮಿಸಿಕೊಂಡಿದ್ದರು. ಅವರು ಪೊಲೀಸರಿಗೆ ದೂರು ನೀಡಿದ್ದರು ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಮಕ್ವಾನಾ ತಿಳಿಸಿದ್ದಾರೆ.

ಘಟನೆಯನ್ನು ಗುಜರಾತ್‌ ಶಾಸಕ, ಊನಾ ಚಳವಳಿಯ ನಾಯಕ ಜಿಗ್ನೇಶ್ ಮೇವಾನಿ ಖಂಡಿಸಿದ್ದು, ಹೋರಾಟಗಾರರು, ಪ್ರಭಾವಿ ಸೆಲೆಬ್ರಿಟಿಗಳು ಮತ್ತು ಪತ್ರಕರ್ತರು ಈ ಘಟನೆಯ ಬಗ್ಗೆ ಧ್ವನಿ ಎತ್ತುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ: ’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

ಐತಿಹಾಸಿಕ ಹೋರಾಟದಲ್ಲಿರುವ ರೈತರು ದೆಹಲಿಯ ಬಿರು ಬಿಸಿಲಿನಿಂದ ರಕ್ಷಣೆ ಹೊಂದಲು ಮಾಡುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....