Homeಮುಖಪುಟಗುಜರಾತ್‌: ಕಾಂಗ್ರೆಸ್ ಶಾಸಕ ಅನಂತ್‌ ಪಟೇಲ್‌ ಮೇಲೆ ಹಲ್ಲೆ; ಕೃತ್ಯದ ಹಿಂದೆ ಬಿಜೆಪಿ ಕೈವಾಡ?

ಗುಜರಾತ್‌: ಕಾಂಗ್ರೆಸ್ ಶಾಸಕ ಅನಂತ್‌ ಪಟೇಲ್‌ ಮೇಲೆ ಹಲ್ಲೆ; ಕೃತ್ಯದ ಹಿಂದೆ ಬಿಜೆಪಿ ಕೈವಾಡ?

- Advertisement -
- Advertisement -

ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕ, ಬುಡಕಟ್ಟು ನಾಯಕ ಅನಂತ್ ಪಟೇಲ್ ಮೇಲೆ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದವರು ಬಿಜೆಪಿಯ ಮುಖಂಡರೆಂದು ಆರೋಪಿಸಲಾಗಿದೆ.

“ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸರ್ಕಾರದ ಆಡಳಿತದಲ್ಲಿ ಯಾರೇ ಧ್ವನಿ ಎತ್ತಿದರೂ ಅವರನ್ನು ಹೊಡೆದು ಜೈಲಿಗೆ ಕಳುಹಿಸಲಾಗುತ್ತದೆ” ಎಂದು ಅನಂತ್ ಪಟೇಲ್ ತಿಳಿಸಿದ್ದಾರೆ.

“ಸಭೆಯೊಂದರಲ್ಲಿ ಪಾಲ್ಗೊಳ್ಳಲು ನವಸಾರಿಯ ಖೇರ್ಗಾಮ್ ತಲುಪುತ್ತಿದ್ದಾಗ ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಅವರ ಗೂಂಡಾಗಳು ನನ್ನ ಕಾರನ್ನು ಧ್ವಂಸಗೊಳಿಸಿ ಥಳಿಸಿದ್ದಾರೆ” ಎಂದು ಬುಡಕಟ್ಟು ನಾಯಕ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಗೂಂಡಾಗಳು ತಮ್ಮ ಮೇಲೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿರುವ ಅವರು, “ನೀವು ಆದಿವಾಸಿಯಾಗಿ ನಾಯಕರಾಗುತ್ತಿದ್ದೀರಿ. ಆದಿವಾಸಿಯನ್ನು ಇಲ್ಲಿ ಕಾಲಿಡಲು ಬಿಡುವುದಿಲ್ಲ” ಎಂದಿರುವುದಾಗಿ ತಿಳಿಸಿದ್ದಾರೆ.

ಬುಡಕಟ್ಟು ನಾಯಕನನ್ನು ಥಳಿಸಿರುವ ಸುದ್ದಿ ತಿಳಿದ ತಕ್ಷಣ, ಕಾಂಗ್ರೆಸ್ ಶಾಸಕರ ಬೆಂಬಲಕ್ಕೆ ಜನರು ದೌಡಾಯಿಸಿದ್ದಾರೆ. ಶನಿವಾರ ರಾತ್ರಿ ಪ್ರತಿಭಟನಾಕಾರರ ಭಾರೀ ಗುಂಪು ಜಮಾಯಿಸಿತು. ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಅವರ ಗೂಂಡಾಗಳನ್ನು ಹಿಡಿಯುವವರೆಗೆ 14 ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಎಎನ್‌ಐ ಜೊತೆ ಮಾತನಾಡಿದ ಪಟೇಲ್, “ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಅವರ ಗೂಂಡಾಗಳು ನನ್ನ ಕಾರನ್ನು ಧ್ವಂಸಗೊಳಿಸಿದರು. ನಾನು ಸಭೆಯಲ್ಲಿ ಪಾಲ್ಗೊಳ್ಳಲು ನವಸಾರಿಯ ಖೇರ್ಗಾಮ್‌ಗೆ ತಲುಪುತ್ತಿದ್ದಾಗ ನನ್ನನ್ನು ಹೊಡೆಯಲಾಯಿತು. ಆದಿವಾಸಿಗಳಾಗಿರುವ ನೀನು ನಾಯಕನಾಗುತ್ತಿದ್ದೀಯ, ನಿನ್ನನ್ನು ಬಿಡುವುದಿಲ್ಲ. ಒಬ್ಬ ಆದಿವಾಸಿ ಇಲ್ಲಿ ನಡೆಯಲು ಬಿಡುವುದಿಲ್ಲ ಎಂದು ನಿಂದಿಸಿದರು” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ಬೀದರ್‌: ಮದರಸಾಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ, ಪೂಜೆ; ಪ್ರಕರಣ ದಾಖಲು

“ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಅವರ ಗೂಂಡಾಗಳನ್ನು ಹಿಡಿಯುವವರೆಗೂ ನಾವು ಇಲ್ಲಿ ಪ್ರತಿಭಟನೆ ನಡೆಸುತ್ತೇವೆ. ಅಲ್ಲಿಯವರೆಗೆ 14 ಜಿಲ್ಲೆಗಳ ಹೆದ್ದಾರಿಗಳನ್ನು ಆದಿವಾಸಿಗಳು ನಿರ್ಬಂಧಿಸಲಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದಲ್ಲಿ ಯಾರೇ ಧ್ವನಿ ಎತ್ತಿದರೂ ಅವರನ್ನು ಹೊಡೆದು ಜೈಲಿಗೆ ಕಳುಹಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ನಿನ್ನೆ ನಾಲ್ಕೈದು ಮಂದಿ ಅನಂತ್ ಪಟೇಲ್ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಪಟೇಲ್‌ ತಮ್ಮ ಆದಿವಾಸಿ ಬೆಂಬಲಿಗರೊಂದಿಗೆ ಪ್ರತಿಭಟನೆಗೆ ಕುಳಿತರು. ಮೂರು ದಿನಗಳಲ್ಲಿ ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರಿಗೆ ಭರವಸೆ ನೀಡಲಾಗಿದೆ. ಪೊಲೀಸರನ್ನು ನಿಯೋಜಿಸಲಾಗಿದೆ. ಆದರೆ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ನಿಯಮಗಳ ಪ್ರಕಾರ ದೂರು ದಾಖಲಿಸಲಾಗಿದೆ” ಎಂದು ನವಸಾರಿ ಉಪ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...