Homeಮುಖಪುಟಗುಜರಾತ್‌: ಕಾಂಗ್ರೆಸ್ ಶಾಸಕ ಅನಂತ್‌ ಪಟೇಲ್‌ ಮೇಲೆ ಹಲ್ಲೆ; ಕೃತ್ಯದ ಹಿಂದೆ ಬಿಜೆಪಿ ಕೈವಾಡ?

ಗುಜರಾತ್‌: ಕಾಂಗ್ರೆಸ್ ಶಾಸಕ ಅನಂತ್‌ ಪಟೇಲ್‌ ಮೇಲೆ ಹಲ್ಲೆ; ಕೃತ್ಯದ ಹಿಂದೆ ಬಿಜೆಪಿ ಕೈವಾಡ?

- Advertisement -
- Advertisement -

ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕ, ಬುಡಕಟ್ಟು ನಾಯಕ ಅನಂತ್ ಪಟೇಲ್ ಮೇಲೆ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದವರು ಬಿಜೆಪಿಯ ಮುಖಂಡರೆಂದು ಆರೋಪಿಸಲಾಗಿದೆ.

“ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸರ್ಕಾರದ ಆಡಳಿತದಲ್ಲಿ ಯಾರೇ ಧ್ವನಿ ಎತ್ತಿದರೂ ಅವರನ್ನು ಹೊಡೆದು ಜೈಲಿಗೆ ಕಳುಹಿಸಲಾಗುತ್ತದೆ” ಎಂದು ಅನಂತ್ ಪಟೇಲ್ ತಿಳಿಸಿದ್ದಾರೆ.

“ಸಭೆಯೊಂದರಲ್ಲಿ ಪಾಲ್ಗೊಳ್ಳಲು ನವಸಾರಿಯ ಖೇರ್ಗಾಮ್ ತಲುಪುತ್ತಿದ್ದಾಗ ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಅವರ ಗೂಂಡಾಗಳು ನನ್ನ ಕಾರನ್ನು ಧ್ವಂಸಗೊಳಿಸಿ ಥಳಿಸಿದ್ದಾರೆ” ಎಂದು ಬುಡಕಟ್ಟು ನಾಯಕ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಗೂಂಡಾಗಳು ತಮ್ಮ ಮೇಲೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿರುವ ಅವರು, “ನೀವು ಆದಿವಾಸಿಯಾಗಿ ನಾಯಕರಾಗುತ್ತಿದ್ದೀರಿ. ಆದಿವಾಸಿಯನ್ನು ಇಲ್ಲಿ ಕಾಲಿಡಲು ಬಿಡುವುದಿಲ್ಲ” ಎಂದಿರುವುದಾಗಿ ತಿಳಿಸಿದ್ದಾರೆ.

ಬುಡಕಟ್ಟು ನಾಯಕನನ್ನು ಥಳಿಸಿರುವ ಸುದ್ದಿ ತಿಳಿದ ತಕ್ಷಣ, ಕಾಂಗ್ರೆಸ್ ಶಾಸಕರ ಬೆಂಬಲಕ್ಕೆ ಜನರು ದೌಡಾಯಿಸಿದ್ದಾರೆ. ಶನಿವಾರ ರಾತ್ರಿ ಪ್ರತಿಭಟನಾಕಾರರ ಭಾರೀ ಗುಂಪು ಜಮಾಯಿಸಿತು. ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಅವರ ಗೂಂಡಾಗಳನ್ನು ಹಿಡಿಯುವವರೆಗೆ 14 ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಎಎನ್‌ಐ ಜೊತೆ ಮಾತನಾಡಿದ ಪಟೇಲ್, “ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಅವರ ಗೂಂಡಾಗಳು ನನ್ನ ಕಾರನ್ನು ಧ್ವಂಸಗೊಳಿಸಿದರು. ನಾನು ಸಭೆಯಲ್ಲಿ ಪಾಲ್ಗೊಳ್ಳಲು ನವಸಾರಿಯ ಖೇರ್ಗಾಮ್‌ಗೆ ತಲುಪುತ್ತಿದ್ದಾಗ ನನ್ನನ್ನು ಹೊಡೆಯಲಾಯಿತು. ಆದಿವಾಸಿಗಳಾಗಿರುವ ನೀನು ನಾಯಕನಾಗುತ್ತಿದ್ದೀಯ, ನಿನ್ನನ್ನು ಬಿಡುವುದಿಲ್ಲ. ಒಬ್ಬ ಆದಿವಾಸಿ ಇಲ್ಲಿ ನಡೆಯಲು ಬಿಡುವುದಿಲ್ಲ ಎಂದು ನಿಂದಿಸಿದರು” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ಬೀದರ್‌: ಮದರಸಾಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ, ಪೂಜೆ; ಪ್ರಕರಣ ದಾಖಲು

“ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಅವರ ಗೂಂಡಾಗಳನ್ನು ಹಿಡಿಯುವವರೆಗೂ ನಾವು ಇಲ್ಲಿ ಪ್ರತಿಭಟನೆ ನಡೆಸುತ್ತೇವೆ. ಅಲ್ಲಿಯವರೆಗೆ 14 ಜಿಲ್ಲೆಗಳ ಹೆದ್ದಾರಿಗಳನ್ನು ಆದಿವಾಸಿಗಳು ನಿರ್ಬಂಧಿಸಲಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದಲ್ಲಿ ಯಾರೇ ಧ್ವನಿ ಎತ್ತಿದರೂ ಅವರನ್ನು ಹೊಡೆದು ಜೈಲಿಗೆ ಕಳುಹಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ನಿನ್ನೆ ನಾಲ್ಕೈದು ಮಂದಿ ಅನಂತ್ ಪಟೇಲ್ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಪಟೇಲ್‌ ತಮ್ಮ ಆದಿವಾಸಿ ಬೆಂಬಲಿಗರೊಂದಿಗೆ ಪ್ರತಿಭಟನೆಗೆ ಕುಳಿತರು. ಮೂರು ದಿನಗಳಲ್ಲಿ ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರಿಗೆ ಭರವಸೆ ನೀಡಲಾಗಿದೆ. ಪೊಲೀಸರನ್ನು ನಿಯೋಜಿಸಲಾಗಿದೆ. ಆದರೆ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ನಿಯಮಗಳ ಪ್ರಕಾರ ದೂರು ದಾಖಲಿಸಲಾಗಿದೆ” ಎಂದು ನವಸಾರಿ ಉಪ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...