Homeಮುಖಪುಟಗುಜರಾತ್ | ಆದಿವಾಸಿ ಮಹಿಳೆಗೆ ನಗ್ನಗೊಳಿಸಿ ಹಲ್ಲೆ, ಬೈಕ್‌ಗೆ ಕಟ್ಟಿ ಮೆರವಣಿಗೆ

ಗುಜರಾತ್ | ಆದಿವಾಸಿ ಮಹಿಳೆಗೆ ನಗ್ನಗೊಳಿಸಿ ಹಲ್ಲೆ, ಬೈಕ್‌ಗೆ ಕಟ್ಟಿ ಮೆರವಣಿಗೆ

- Advertisement -
- Advertisement -

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಜನವರಿ 28, 2024 ರಂದು ಆದಿವಾಸಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಬೈಕ್‌ಗೆ ಕಟ್ಟಿ, ಧಲ್ಸಿಮಲ್ ಗ್ರಾಮದ ಮೂಲಕ ಮೆರವಣಿಗೆ ಮಾಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ ಪೊಲೀಸರು 12 ಜನರನ್ನು ಬಂಧಿಸಿದ್ದು, ಆರೋಪಿಗಳಲ್ಲಿ ನಾಲ್ವರು ಮಹಿಳೆಯರು ಮತ್ತು ನಾಲ್ವರು ಅಪ್ರಾಪ್ತ ವಯಸ್ಕರು ಸೇರಿದ್ದಾರೆ ಎಂದು ವರದಿಯಾಗಿದೆ. ಗುಜರಾತ್

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 15-20 ಜನರು ಸಂತ್ರಸ್ತ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ರಾಜ್‌ದೀಪ್‌ಸಿನ್ಹ್ ಝಾಲಾ ಅವರು ಹೇಳಿದ್ದಾರೆ. ಗುಜರಾತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದುಷ್ಕರ್ಮಿಗಳು ಹಲ್ಲೆಯ ಘಟನೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಇದು ಸ್ಥಳೀಯ ಅಧಿಕಾರಿಳಿಗೆ ಸಿಕ್ಕಿತ್ತು. ಕೂಡಲೆ ಎಚ್ಚೆತ್ತ ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಿ, ಮಹಿಳೆಯನ್ನು ಅವರ ಅತ್ತೆ-ಮಾವಂದಿರು ಅಕ್ರಮ ಬಂಧನದಿಂದ ರಕ್ಷಿಸಿದ್ದಾರೆ.

ಬಂಧಿತರಲ್ಲಿ, ವಯಸ್ಕ ಮಹಿಳೆಯರು ನ್ಯಾಯಾಂಗ ಬಂಧನದಲ್ಲಿದ್ದಾರೆ, ಅಪ್ರಾಪ್ತ ವಯಸ್ಕರು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರಾಗಿದ್ದಾರೆ. ನಾಲ್ವರು ಪುರುಷ ಆರೋಪಿಗಳು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಜೊತೆಗೆ ಮೂವರು ಶಂಕಿತರು – ಒಬ್ಬ ಪುರುಷ, ಒಬ್ಬ ಮಹಿಳೆ ಮತ್ತು ಒಬ್ಬ ಅಪ್ರಾಪ್ತ ವಯಸ್ಕ – ಇನ್ನೂ ತಲೆಮರೆಸಿಕೊಂಡಿದ್ದಾರೆ.

ಸಂತ್ರಸ್ತ ಮಹಿಳೆಯ ಪತಿ ಪ್ರಸ್ತುತ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ ಎಂದು ಸ್ಥಳೀಯ ಮೂಲಗಳು ವರದಿ ಮಾಡಿವೆ. ಹಾಗಾಗಿ ಮಹಿಳೆಯು ತಮ್ಮ ಅತ್ತೆ-ಮಾವಂದಿರೊಂದಿಗೆ ವಾಸಿಸುತ್ತಿದ್ದರು. ಆದರೆ ಕೌಟುಂಬಿಕ ಕಲಹಗಳಿಂದಾಗಿ ಅವರನ್ನು ಬಿಟ್ಟು ತೆರಳಿದ್ದ ಮಹಿಳೆ, ತನ್ನ ಗಂಡನ ಹಳ್ಳಿಯ ವ್ಯಕ್ತಿಯೊಬ್ಬರೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದರು ಮತ್ತು ಅವರೊಂದಿಗೆ ಮೂರು ತಿಂಗಳಿನಿಂದ ವಾಸಿಸುತ್ತಿದ್ದರು. ಇದನ್ನು ಅವರ ಕುಟುಂಬಿಕರು ವಿರೋಧಿಸಿದ್ದರು ಎಂದು ವರದಿಯಾಗಿದೆ.

ಗುಜರಾತ್‌ನ ಕೆಲವು ಬುಡಕಟ್ಟು ಸಮುದಾಯಗಳಲ್ಲಿ ಬಹು ಪತ್ನಿತ್ವ ಸ್ವೀಕಾರಾರ್ಹವಾಗಿದ್ದರೂ, ಒಂದೇ ಜಾತಿ, ಬುಡಕಟ್ಟು ಅಥವಾ ಗೋತ್ರದೊಳಗಿನ ಸಂಬಂಧಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದೇ ರೀತಿಯ ಘಟನೆಗಳು ಈ ಹಿಂದೆಯೂ ನಡೆದಿದ್ದು, ಇದರಲ್ಲಿ ಮೇ 2022 ರಲ್ಲಿ ಮಾರ್ಗಲಾ ಗ್ರಾಮದಲ್ಲಿ ನಡೆದ ಪ್ರಕರಣವೂ ಒಂದಾಗಿದೆ. ಘಟನೆಯಲ್ಲಿ ಮತ್ತೊಬ್ಬ ಮಹಿಳೆ ಅಕ್ರಮ ಸಂಬಂಧಕ್ಕಾಗಿ ಇದೇ ರೀತಿಯ ದೌರ್ಜನ್ಯವನ್ನು ಎದುರಿಸಬೇಕಾಯಿತು.

ಇದನ್ನೂಓದಿ:  ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...