Homeಮುಖಪುಟಗುಜರಾತ್ | ಆದಿವಾಸಿ ಮಹಿಳೆಗೆ ನಗ್ನಗೊಳಿಸಿ ಹಲ್ಲೆ, ಬೈಕ್‌ಗೆ ಕಟ್ಟಿ ಮೆರವಣಿಗೆ

ಗುಜರಾತ್ | ಆದಿವಾಸಿ ಮಹಿಳೆಗೆ ನಗ್ನಗೊಳಿಸಿ ಹಲ್ಲೆ, ಬೈಕ್‌ಗೆ ಕಟ್ಟಿ ಮೆರವಣಿಗೆ

- Advertisement -
- Advertisement -

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಜನವರಿ 28, 2024 ರಂದು ಆದಿವಾಸಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಬೈಕ್‌ಗೆ ಕಟ್ಟಿ, ಧಲ್ಸಿಮಲ್ ಗ್ರಾಮದ ಮೂಲಕ ಮೆರವಣಿಗೆ ಮಾಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ ಪೊಲೀಸರು 12 ಜನರನ್ನು ಬಂಧಿಸಿದ್ದು, ಆರೋಪಿಗಳಲ್ಲಿ ನಾಲ್ವರು ಮಹಿಳೆಯರು ಮತ್ತು ನಾಲ್ವರು ಅಪ್ರಾಪ್ತ ವಯಸ್ಕರು ಸೇರಿದ್ದಾರೆ ಎಂದು ವರದಿಯಾಗಿದೆ. ಗುಜರಾತ್

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 15-20 ಜನರು ಸಂತ್ರಸ್ತ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ರಾಜ್‌ದೀಪ್‌ಸಿನ್ಹ್ ಝಾಲಾ ಅವರು ಹೇಳಿದ್ದಾರೆ. ಗುಜರಾತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದುಷ್ಕರ್ಮಿಗಳು ಹಲ್ಲೆಯ ಘಟನೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಇದು ಸ್ಥಳೀಯ ಅಧಿಕಾರಿಳಿಗೆ ಸಿಕ್ಕಿತ್ತು. ಕೂಡಲೆ ಎಚ್ಚೆತ್ತ ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಿ, ಮಹಿಳೆಯನ್ನು ಅವರ ಅತ್ತೆ-ಮಾವಂದಿರು ಅಕ್ರಮ ಬಂಧನದಿಂದ ರಕ್ಷಿಸಿದ್ದಾರೆ.

ಬಂಧಿತರಲ್ಲಿ, ವಯಸ್ಕ ಮಹಿಳೆಯರು ನ್ಯಾಯಾಂಗ ಬಂಧನದಲ್ಲಿದ್ದಾರೆ, ಅಪ್ರಾಪ್ತ ವಯಸ್ಕರು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರಾಗಿದ್ದಾರೆ. ನಾಲ್ವರು ಪುರುಷ ಆರೋಪಿಗಳು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಜೊತೆಗೆ ಮೂವರು ಶಂಕಿತರು – ಒಬ್ಬ ಪುರುಷ, ಒಬ್ಬ ಮಹಿಳೆ ಮತ್ತು ಒಬ್ಬ ಅಪ್ರಾಪ್ತ ವಯಸ್ಕ – ಇನ್ನೂ ತಲೆಮರೆಸಿಕೊಂಡಿದ್ದಾರೆ.

ಸಂತ್ರಸ್ತ ಮಹಿಳೆಯ ಪತಿ ಪ್ರಸ್ತುತ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ ಎಂದು ಸ್ಥಳೀಯ ಮೂಲಗಳು ವರದಿ ಮಾಡಿವೆ. ಹಾಗಾಗಿ ಮಹಿಳೆಯು ತಮ್ಮ ಅತ್ತೆ-ಮಾವಂದಿರೊಂದಿಗೆ ವಾಸಿಸುತ್ತಿದ್ದರು. ಆದರೆ ಕೌಟುಂಬಿಕ ಕಲಹಗಳಿಂದಾಗಿ ಅವರನ್ನು ಬಿಟ್ಟು ತೆರಳಿದ್ದ ಮಹಿಳೆ, ತನ್ನ ಗಂಡನ ಹಳ್ಳಿಯ ವ್ಯಕ್ತಿಯೊಬ್ಬರೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದರು ಮತ್ತು ಅವರೊಂದಿಗೆ ಮೂರು ತಿಂಗಳಿನಿಂದ ವಾಸಿಸುತ್ತಿದ್ದರು. ಇದನ್ನು ಅವರ ಕುಟುಂಬಿಕರು ವಿರೋಧಿಸಿದ್ದರು ಎಂದು ವರದಿಯಾಗಿದೆ.

ಗುಜರಾತ್‌ನ ಕೆಲವು ಬುಡಕಟ್ಟು ಸಮುದಾಯಗಳಲ್ಲಿ ಬಹು ಪತ್ನಿತ್ವ ಸ್ವೀಕಾರಾರ್ಹವಾಗಿದ್ದರೂ, ಒಂದೇ ಜಾತಿ, ಬುಡಕಟ್ಟು ಅಥವಾ ಗೋತ್ರದೊಳಗಿನ ಸಂಬಂಧಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದೇ ರೀತಿಯ ಘಟನೆಗಳು ಈ ಹಿಂದೆಯೂ ನಡೆದಿದ್ದು, ಇದರಲ್ಲಿ ಮೇ 2022 ರಲ್ಲಿ ಮಾರ್ಗಲಾ ಗ್ರಾಮದಲ್ಲಿ ನಡೆದ ಪ್ರಕರಣವೂ ಒಂದಾಗಿದೆ. ಘಟನೆಯಲ್ಲಿ ಮತ್ತೊಬ್ಬ ಮಹಿಳೆ ಅಕ್ರಮ ಸಂಬಂಧಕ್ಕಾಗಿ ಇದೇ ರೀತಿಯ ದೌರ್ಜನ್ಯವನ್ನು ಎದುರಿಸಬೇಕಾಯಿತು.

ಇದನ್ನೂಓದಿ:  ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...