Homeಮುಖಪುಟಗುಜರಾತ್‌: ಕಳ್ಳರೆಂದು ಶಂಕಿಸಿ ಇಬ್ಬರು ವಲಸೆ ಕಾರ್ಮಿಕರ ಕೊಲೆ

ಗುಜರಾತ್‌: ಕಳ್ಳರೆಂದು ಶಂಕಿಸಿ ಇಬ್ಬರು ವಲಸೆ ಕಾರ್ಮಿಕರ ಕೊಲೆ

- Advertisement -
- Advertisement -

ಗುಜರಾತಿನಲ್ಲಿ ಇಬ್ಬರು ವಲಸೆ ಕಾರ್ಮಿಕರನ್ನು ಕಳ್ಳರೆಂದು ಶಂಕಿಸಿ ಕೊಲೆ ಮಾಡಿರುವ ಎರಡು ಪ್ರತ್ಯೇಕ ಘಟನೆಗಳು ನಡೆದಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕುಲ್ಮಾನ್ ಗಗನ್ ಎಂದು ಗುರುತಿಸಲಾದ 35 ವರ್ಷದ ನೇಪಾಳದ ಪ್ರಜೆಯನ್ನು ಭಾನುವಾರದಂದು ಅಹಮದಾಬಾದ್ ಜಿಲ್ಲೆಯ ಚಂಗೋದರ್ ಪ್ರದೇಶದಲ್ಲಿ ಗುಂಪೊಂದು ಹತ್ಯೆ ಮಾಡಿದೆ.

ಈ ಪ್ರದೇಶದಲ್ಲಿ ಬೀದಿನಾಯಿಗಳು ವಲಸೆ ಕಾರ್ಮಿಕನನ್ನು ಬೆನ್ನಟ್ಟಲು ಆರಂಭಿಸಿದ ನಂತರ ಸ್ಥಳೀಯರು ಕಳ್ಳನೆಂದು ಭಾವಿಸಿದ್ದಾರೆ. ಜನರ ಗುಂಪು ಅವರನ್ನು ಹಿಡಿದ ನಂತರ, ತನ್ನ ಬಗ್ಗೆ ಹೇಳಿಕೊಳ್ಳಲು ಗಗನ್ ಯತ್ನಿಸಿದ್ದಾರೆ. ಆದರೆ ಸ್ಥಳೀಯ ಭಾಷೆ ಮಾತನಾಡಲು ಬಾರದ ಕಾರಣ ತನ್ನ ಬಗ್ಗೆ ಮನವರಿಕೆ ಮಾಡಿಕೊಡಲು ಗಗನ್‌ ಅವರಿಗೆ ಸಾಧ್ಯವಾಗಿಲ್ಲ.

ಪೊಲೀಸರು ಗಗನ್ ಶವವನ್ನು ಕಾಲುವೆಯಲ್ಲಿ ಪತ್ತೆ ಹಚ್ಚಿದ್ದು, 10 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಮತ್ತೊಂದು ಪ್ರಕರಣ: ಗುಜರಾತ್‌ನ ಖೇಡಾ ಜಿಲ್ಲೆಯ ಮಹಮದಾಬಾದ್ ತಾಲೂಕಿನ ಸುಧಾವನ್‌ಸೋಲ್ ಗ್ರಾಮದ ಜನಸಮೂಹವು ಛತ್ತೀಸ್‌ಗಢದ ವಲಸೆ ಕಾರ್ಮಿಕನನ್ನು ಸೋಮವಾರ ಥಳಿಸಿ ಕೊಂದಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಸಂತ್ರಸ್ತರಾದ ರಮೇಶ್ ಕುಮಾರ್ ಖೇರಾವರ್ ಅವರನ್ನು ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಸೋಮವಾರ ಅಪರಿಚಿತ ವ್ಯಕ್ತಿಗಳ ವಿರುದ್ಧ ಮಹಮದಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸಬರಮತಿಯ ಹೈಸ್ಪೀಡ್ ರೈಲ್ವೇ ಟರ್ಮಿನಲ್‌ನಲ್ಲಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿರುವ ಬಿಹಾರ ಮೂಲದ ಮನೀಶ್ ಕುಮಾರ್ ಸಿಂಗ್ ಎಂಬವರು ಮೃತದೇಹವನ್ನು ಗುರುತಿಸಲು ಪೊಲೀಸ್ ಠಾಣೆಯಿಂದ ಕರೆ ಸ್ವೀಕರಿಸಿದ್ದಾರೆ.

ಇದನ್ನೂ ಓದಿರಿ: ದಲಿತರ ಮೇಲಿನ ದೌರ್ಜನ್ಯ: ನಾಲ್ಕು ವರ್ಷಗಳಲ್ಲಿ 1,89,945 ಪ್ರಕರಣ ದಾಖಲು

“ಕೆಲಸಕ್ಕಾಗಿ ಸುಮಾರು ಮೂರು ದಿನಗಳ ಹಿಂದೆ ಅವರು ನನ್ನ ಬಳಿಗೆ ಬಂದಿದ್ದರು, ಆದರೆ ನಂತರ ಅವರು ಇಲ್ಲಿ ಕೆಲಸ ಮಾಡಲು ಬಯಸಲಿಲ್ಲ. ತಮ್ಮ ಸ್ವಂತ ಸ್ಥಳಕ್ಕೆ ಮರಳಲು ಇಚ್ಛಿಸಿದ್ದರು” ಎಂದು ಸಿಂಗ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. “ಅವರು ಸುಮಾರು ಒಂದು ದಿನದ ಹಿಂದೆ ಅಹಮದಾಬಾದ್‌ನಿಂದ ಬೆಳಿಗ್ಗೆ 10.30ಕ್ಕೆ ಹೊರಟು ಹೋಗಿದ್ದರು” ಎಂದು ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಯಾರನ್ನೂ ಬಂಧಿಸಿಲ್ಲ.

“ಗ್ರಾಮಸ್ಥರು ಈ ಕಾರ್ಮಿಕನನ್ನು ಕಳ್ಳನೆಂದು ಶಂಕಿಸಿ ಥಳಿಸಿದ್ದಾರೆ” ಎಂದು ಮಹಮದಾಬಾದ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಂಎನ್ ಪಾಂಚಾಲ್ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ. “ಆದರೂ ಅವರು ಅಲ್ಲಿಗೆ ಏಕೆ ಹೋದರು ಎಂಬುದರ ಬಗ್ಗೆ ಖಚಿತವಾಗಿ ಏನನ್ನೂ ಹೇಳಲಾಗುವುದಿಲ್ಲ. ಆದರೆ ಅವರು ಕೆಲಸ ಹುಡುಕಿಕೊಂಡು ಅಲ್ಲಿಗೆ ಹೋಗಿರುವ ಸಾಧ್ಯತೆ ಇದೆ” ಎಂದು ಶಂಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...