Homeರಾಷ್ಟ್ರೀಯಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

- Advertisement -
- Advertisement -

ಇಂಗ್ಲೇಂಡ್‌‌‌ ಪ್ರಧಾನಿ ಬೋರಿಸ್ ಜಾನ್ಸನ್‌ ಅವರು ಗುರುವಾರದಂದು ಗುಜರಾತ್‌‌ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಕಾರ್ಯಕ್ರಮದ ಸ್ಥಳಕ್ಕೆ ತೆರಳಿದ ಮಾರ್ಗದಲ್ಲಿ ದೊಡ್ಡ ಗಾತ್ರದ ಬಿಳಿ ಪರದೆಗಳನ್ನು ಕಟ್ಟಿ ಸ್ಲಂಗಳು ಕಾಣದಂದತೆ ಕಟ್ಟಲಾಗಿತ್ತು. ಅದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ‘ಗುಜರಾತ್‌ ಮಾಡೆಲ್‌‌’ ಎಂದು ಜನರು ವ್ಯಂಗ್ಯವಾಗಿದ್ದಾರೆ.

ಇಂಗ್ಲೇಂಡ್‌‌ ಪ್ರಧಾನಿ ತಮ್ಮ ಭಾರತ ಪ್ರವಾಸದ ಮೊದಲ ದಿನದಂದು ಗುಜರಾತ್‌ಗೆ ಭೇಟಿ ನೀಡಿದ್ದರು. ಅವರ ಭೇಟಿಯ ನಂತರ ಈ ಬಟ್ಟೆಯ ಪರದೆಗಳನ್ನು ತೆಗೆಯಲಾಗಿದೆ. ಈ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿತ್ತೆ ಅಥವಾ ಜಿಲ್ಲಾಡಳಿತ ಮಾಡಿತ್ತೆ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿತ್ರನಿರ್ಮಾಪಕ ವಿನೋದ್ ಕಪ್ರಿ ಅವರು ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ನರೇಂದ್ರ ಮೋದಿಯವರೇ, ನೀವು 12 ವರ್ಷಗಳ ಕಾಲ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದೀರಿ. 8 ವರ್ಷಗಳಿಂದ ದೇಶದ ಪ್ರಧಾನಿಯಾಗಿದ್ದೀರಿ. ಆದರೂ, ಬೋರಿಸ್‌ ಜೋನ್ಸನ್‌ ಅವರಿಗೆ ಇದನ್ನು ತೋರಿಸಲು ನಿಮಗೆ ನಾಚಿಕೆಯಾಗುವುದು ಏನಿದೆ?” ಎಂದು ಅವರು ವಿಡಿಯೊ ಜೊತೆಗೆ ಬರೆದುಕೊಂಡಿದ್ದಾರೆ.

ಎನ್‌ಡಿಟಿವಿ ಪತ್ರಕರ್ತ ಉಮಾಶಂಕರ್ ಸಿಂಗ್  ಅವರು ಗುರುವಾರ ಸಂಜೆ ಪೋಸ್ಟ್ ಮಾಡಿದ ವಿಡಿಯೊದಲ್ಲಿ ಬಿಳಿ ಪರದೆಗಳನ್ನು ತೆಗೆಯುತ್ತಿರುವುದನ್ನು ಕಾಣಬಹುದು. ಈ ವಿಡಿಯೊದಲ್ಲಿ ಸ್ಲಂಗಳಲ್ಲಿ ಇರುವ ಗುಡಿಸಲುಗಳು ಮತ್ತು ಹಿಂದೆ ನಿಲ್ಲಿಸಿದ ವಾಹನಗಳನ್ನು ಕಾಣುತ್ತದೆ.

ಇದನ್ನೂ ಓದಿ: ‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ…’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

ಬೋರಿಸ್‌ ಜಾನ್ಸನ್‌ ಅವರು ಶುಕ್ರವಾರ ಪ್ರಧಾನಿ ಮೋದಿಯೊಂದಿಗೆ ಮಾತುಕತೆ ನಡೆಸಲು ದೆಹಲಿಗೆ ತೆರಳಿದ್ದರು. ಈ ಬಗ್ಗೆ ಬರೆದಿರುವ ಅವರು “ಜಾನ್ಸನ್ ಹೊರಡುತ್ತಿದ್ದಂತೆ ಪರದೆಗಳನ್ನು ತೆಗೆಯಲಾಗುತ್ತಿವೆ” ಎಂದು ಬರೆದಿದ್ದಾರೆ.

ತಮ್ಮ ಎರಡು ದಿನಗಳ ಭಾರತದ ಪ್ರವಾಸಕ್ಕಾಗಿ ಬೋರಿಸ್‌ ಜಾನ್ಸನ್ ಅವರು ಗುರುವಾರದಂದು ಗುಜರಾತ್‌ಗೆ ಬಂದಿಳಿದಿದ್ದರು. ಅವರು ಅಹಮದಾಬಾದ್‌ನ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತವನ್ನು ಪಡೆದು, ಮಹಾತ್ಮ ಗಾಂಧಿಯವರ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ಗಾಂಧಿಯವರ ಪ್ರಸಿದ್ಧ ಚರಕ ಜೊತೆ ಕುಳಿತು ಪೋಸ್ ನೀಡಿದರು.

ಅವರ ಗುಜರಾತ್ ಭೇಟಿಯನ್ನು ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರು ಆಯೋಜಿಸಿದ್ದರು. ಬೋರಿಸ್‌ ಅವರು ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ಭೇಟಿಯಾಗಿ, ಆತ್ಮನಿರ್ಭರ್ ಭಾರತ್ ಉಪಕ್ರಮದ ಭಾಗವಾಗಿ ಏರೋಸ್ಪೇಸ್ ಮತ್ತು ರಕ್ಷಣಾ ತಂತ್ರಜ್ಞಾನಗಳನ್ನು ಸಹ-ವಿನ್ಯಾಸಗೊಳಿಸಲು ಮತ್ತು ಅಭಿವೃದ್ಧಿಪಡಿಸಲು ಅದಾನಿ ಗ್ರೂಪ್ ಮತ್ತು ಬ್ರಿಟಿಷ್ ಕಂಪನಿಗಳು ಹೇಗೆ ಸಹಕರಿಸಬಹುದು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ.

ಕೊರೊನಾ ಸಮಯದಲ್ಲಿ ಭಾರತಕ್ಕೆ ಬಂದಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌‌ ಅವರು ಗುಜರಾತ್‌ಗೆ ಭೇಟಿ ನೀಡಿದಾಗ ಈ ಸ್ಲಂಗಳು ಕಾಣದಂತೆ ದೊಡ್ಡ ಗೋಡೆಗಳನ್ನು ಕಟ್ಟಲಾಗಿತ್ತು. ಇದರ ವಿರುದ್ದ ದೇಶದಾದ್ಯಂತ ಭಾರಿ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...