Homeರಾಷ್ಟ್ರೀಯಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

- Advertisement -
- Advertisement -

ಇಂಗ್ಲೇಂಡ್‌‌‌ ಪ್ರಧಾನಿ ಬೋರಿಸ್ ಜಾನ್ಸನ್‌ ಅವರು ಗುರುವಾರದಂದು ಗುಜರಾತ್‌‌ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಕಾರ್ಯಕ್ರಮದ ಸ್ಥಳಕ್ಕೆ ತೆರಳಿದ ಮಾರ್ಗದಲ್ಲಿ ದೊಡ್ಡ ಗಾತ್ರದ ಬಿಳಿ ಪರದೆಗಳನ್ನು ಕಟ್ಟಿ ಸ್ಲಂಗಳು ಕಾಣದಂದತೆ ಕಟ್ಟಲಾಗಿತ್ತು. ಅದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ‘ಗುಜರಾತ್‌ ಮಾಡೆಲ್‌‌’ ಎಂದು ಜನರು ವ್ಯಂಗ್ಯವಾಗಿದ್ದಾರೆ.

ಇಂಗ್ಲೇಂಡ್‌‌ ಪ್ರಧಾನಿ ತಮ್ಮ ಭಾರತ ಪ್ರವಾಸದ ಮೊದಲ ದಿನದಂದು ಗುಜರಾತ್‌ಗೆ ಭೇಟಿ ನೀಡಿದ್ದರು. ಅವರ ಭೇಟಿಯ ನಂತರ ಈ ಬಟ್ಟೆಯ ಪರದೆಗಳನ್ನು ತೆಗೆಯಲಾಗಿದೆ. ಈ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿತ್ತೆ ಅಥವಾ ಜಿಲ್ಲಾಡಳಿತ ಮಾಡಿತ್ತೆ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿತ್ರನಿರ್ಮಾಪಕ ವಿನೋದ್ ಕಪ್ರಿ ಅವರು ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ನರೇಂದ್ರ ಮೋದಿಯವರೇ, ನೀವು 12 ವರ್ಷಗಳ ಕಾಲ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದೀರಿ. 8 ವರ್ಷಗಳಿಂದ ದೇಶದ ಪ್ರಧಾನಿಯಾಗಿದ್ದೀರಿ. ಆದರೂ, ಬೋರಿಸ್‌ ಜೋನ್ಸನ್‌ ಅವರಿಗೆ ಇದನ್ನು ತೋರಿಸಲು ನಿಮಗೆ ನಾಚಿಕೆಯಾಗುವುದು ಏನಿದೆ?” ಎಂದು ಅವರು ವಿಡಿಯೊ ಜೊತೆಗೆ ಬರೆದುಕೊಂಡಿದ್ದಾರೆ.

ಎನ್‌ಡಿಟಿವಿ ಪತ್ರಕರ್ತ ಉಮಾಶಂಕರ್ ಸಿಂಗ್  ಅವರು ಗುರುವಾರ ಸಂಜೆ ಪೋಸ್ಟ್ ಮಾಡಿದ ವಿಡಿಯೊದಲ್ಲಿ ಬಿಳಿ ಪರದೆಗಳನ್ನು ತೆಗೆಯುತ್ತಿರುವುದನ್ನು ಕಾಣಬಹುದು. ಈ ವಿಡಿಯೊದಲ್ಲಿ ಸ್ಲಂಗಳಲ್ಲಿ ಇರುವ ಗುಡಿಸಲುಗಳು ಮತ್ತು ಹಿಂದೆ ನಿಲ್ಲಿಸಿದ ವಾಹನಗಳನ್ನು ಕಾಣುತ್ತದೆ.

ಇದನ್ನೂ ಓದಿ: ‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ…’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

ಬೋರಿಸ್‌ ಜಾನ್ಸನ್‌ ಅವರು ಶುಕ್ರವಾರ ಪ್ರಧಾನಿ ಮೋದಿಯೊಂದಿಗೆ ಮಾತುಕತೆ ನಡೆಸಲು ದೆಹಲಿಗೆ ತೆರಳಿದ್ದರು. ಈ ಬಗ್ಗೆ ಬರೆದಿರುವ ಅವರು “ಜಾನ್ಸನ್ ಹೊರಡುತ್ತಿದ್ದಂತೆ ಪರದೆಗಳನ್ನು ತೆಗೆಯಲಾಗುತ್ತಿವೆ” ಎಂದು ಬರೆದಿದ್ದಾರೆ.

ತಮ್ಮ ಎರಡು ದಿನಗಳ ಭಾರತದ ಪ್ರವಾಸಕ್ಕಾಗಿ ಬೋರಿಸ್‌ ಜಾನ್ಸನ್ ಅವರು ಗುರುವಾರದಂದು ಗುಜರಾತ್‌ಗೆ ಬಂದಿಳಿದಿದ್ದರು. ಅವರು ಅಹಮದಾಬಾದ್‌ನ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತವನ್ನು ಪಡೆದು, ಮಹಾತ್ಮ ಗಾಂಧಿಯವರ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ಗಾಂಧಿಯವರ ಪ್ರಸಿದ್ಧ ಚರಕ ಜೊತೆ ಕುಳಿತು ಪೋಸ್ ನೀಡಿದರು.

ಅವರ ಗುಜರಾತ್ ಭೇಟಿಯನ್ನು ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರು ಆಯೋಜಿಸಿದ್ದರು. ಬೋರಿಸ್‌ ಅವರು ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ಭೇಟಿಯಾಗಿ, ಆತ್ಮನಿರ್ಭರ್ ಭಾರತ್ ಉಪಕ್ರಮದ ಭಾಗವಾಗಿ ಏರೋಸ್ಪೇಸ್ ಮತ್ತು ರಕ್ಷಣಾ ತಂತ್ರಜ್ಞಾನಗಳನ್ನು ಸಹ-ವಿನ್ಯಾಸಗೊಳಿಸಲು ಮತ್ತು ಅಭಿವೃದ್ಧಿಪಡಿಸಲು ಅದಾನಿ ಗ್ರೂಪ್ ಮತ್ತು ಬ್ರಿಟಿಷ್ ಕಂಪನಿಗಳು ಹೇಗೆ ಸಹಕರಿಸಬಹುದು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ.

ಕೊರೊನಾ ಸಮಯದಲ್ಲಿ ಭಾರತಕ್ಕೆ ಬಂದಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌‌ ಅವರು ಗುಜರಾತ್‌ಗೆ ಭೇಟಿ ನೀಡಿದಾಗ ಈ ಸ್ಲಂಗಳು ಕಾಣದಂತೆ ದೊಡ್ಡ ಗೋಡೆಗಳನ್ನು ಕಟ್ಟಲಾಗಿತ್ತು. ಇದರ ವಿರುದ್ದ ದೇಶದಾದ್ಯಂತ ಭಾರಿ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...