Homeರಾಷ್ಟ್ರೀಯಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

- Advertisement -
- Advertisement -

ಇಂಗ್ಲೇಂಡ್‌‌‌ ಪ್ರಧಾನಿ ಬೋರಿಸ್ ಜಾನ್ಸನ್‌ ಅವರು ಗುರುವಾರದಂದು ಗುಜರಾತ್‌‌ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಕಾರ್ಯಕ್ರಮದ ಸ್ಥಳಕ್ಕೆ ತೆರಳಿದ ಮಾರ್ಗದಲ್ಲಿ ದೊಡ್ಡ ಗಾತ್ರದ ಬಿಳಿ ಪರದೆಗಳನ್ನು ಕಟ್ಟಿ ಸ್ಲಂಗಳು ಕಾಣದಂದತೆ ಕಟ್ಟಲಾಗಿತ್ತು. ಅದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ‘ಗುಜರಾತ್‌ ಮಾಡೆಲ್‌‌’ ಎಂದು ಜನರು ವ್ಯಂಗ್ಯವಾಗಿದ್ದಾರೆ.

ಇಂಗ್ಲೇಂಡ್‌‌ ಪ್ರಧಾನಿ ತಮ್ಮ ಭಾರತ ಪ್ರವಾಸದ ಮೊದಲ ದಿನದಂದು ಗುಜರಾತ್‌ಗೆ ಭೇಟಿ ನೀಡಿದ್ದರು. ಅವರ ಭೇಟಿಯ ನಂತರ ಈ ಬಟ್ಟೆಯ ಪರದೆಗಳನ್ನು ತೆಗೆಯಲಾಗಿದೆ. ಈ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿತ್ತೆ ಅಥವಾ ಜಿಲ್ಲಾಡಳಿತ ಮಾಡಿತ್ತೆ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿತ್ರನಿರ್ಮಾಪಕ ವಿನೋದ್ ಕಪ್ರಿ ಅವರು ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ನರೇಂದ್ರ ಮೋದಿಯವರೇ, ನೀವು 12 ವರ್ಷಗಳ ಕಾಲ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದೀರಿ. 8 ವರ್ಷಗಳಿಂದ ದೇಶದ ಪ್ರಧಾನಿಯಾಗಿದ್ದೀರಿ. ಆದರೂ, ಬೋರಿಸ್‌ ಜೋನ್ಸನ್‌ ಅವರಿಗೆ ಇದನ್ನು ತೋರಿಸಲು ನಿಮಗೆ ನಾಚಿಕೆಯಾಗುವುದು ಏನಿದೆ?” ಎಂದು ಅವರು ವಿಡಿಯೊ ಜೊತೆಗೆ ಬರೆದುಕೊಂಡಿದ್ದಾರೆ.

ಎನ್‌ಡಿಟಿವಿ ಪತ್ರಕರ್ತ ಉಮಾಶಂಕರ್ ಸಿಂಗ್  ಅವರು ಗುರುವಾರ ಸಂಜೆ ಪೋಸ್ಟ್ ಮಾಡಿದ ವಿಡಿಯೊದಲ್ಲಿ ಬಿಳಿ ಪರದೆಗಳನ್ನು ತೆಗೆಯುತ್ತಿರುವುದನ್ನು ಕಾಣಬಹುದು. ಈ ವಿಡಿಯೊದಲ್ಲಿ ಸ್ಲಂಗಳಲ್ಲಿ ಇರುವ ಗುಡಿಸಲುಗಳು ಮತ್ತು ಹಿಂದೆ ನಿಲ್ಲಿಸಿದ ವಾಹನಗಳನ್ನು ಕಾಣುತ್ತದೆ.

ಇದನ್ನೂ ಓದಿ: ‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ…’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

ಬೋರಿಸ್‌ ಜಾನ್ಸನ್‌ ಅವರು ಶುಕ್ರವಾರ ಪ್ರಧಾನಿ ಮೋದಿಯೊಂದಿಗೆ ಮಾತುಕತೆ ನಡೆಸಲು ದೆಹಲಿಗೆ ತೆರಳಿದ್ದರು. ಈ ಬಗ್ಗೆ ಬರೆದಿರುವ ಅವರು “ಜಾನ್ಸನ್ ಹೊರಡುತ್ತಿದ್ದಂತೆ ಪರದೆಗಳನ್ನು ತೆಗೆಯಲಾಗುತ್ತಿವೆ” ಎಂದು ಬರೆದಿದ್ದಾರೆ.

ತಮ್ಮ ಎರಡು ದಿನಗಳ ಭಾರತದ ಪ್ರವಾಸಕ್ಕಾಗಿ ಬೋರಿಸ್‌ ಜಾನ್ಸನ್ ಅವರು ಗುರುವಾರದಂದು ಗುಜರಾತ್‌ಗೆ ಬಂದಿಳಿದಿದ್ದರು. ಅವರು ಅಹಮದಾಬಾದ್‌ನ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತವನ್ನು ಪಡೆದು, ಮಹಾತ್ಮ ಗಾಂಧಿಯವರ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ಗಾಂಧಿಯವರ ಪ್ರಸಿದ್ಧ ಚರಕ ಜೊತೆ ಕುಳಿತು ಪೋಸ್ ನೀಡಿದರು.

ಅವರ ಗುಜರಾತ್ ಭೇಟಿಯನ್ನು ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರು ಆಯೋಜಿಸಿದ್ದರು. ಬೋರಿಸ್‌ ಅವರು ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ಭೇಟಿಯಾಗಿ, ಆತ್ಮನಿರ್ಭರ್ ಭಾರತ್ ಉಪಕ್ರಮದ ಭಾಗವಾಗಿ ಏರೋಸ್ಪೇಸ್ ಮತ್ತು ರಕ್ಷಣಾ ತಂತ್ರಜ್ಞಾನಗಳನ್ನು ಸಹ-ವಿನ್ಯಾಸಗೊಳಿಸಲು ಮತ್ತು ಅಭಿವೃದ್ಧಿಪಡಿಸಲು ಅದಾನಿ ಗ್ರೂಪ್ ಮತ್ತು ಬ್ರಿಟಿಷ್ ಕಂಪನಿಗಳು ಹೇಗೆ ಸಹಕರಿಸಬಹುದು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ.

ಕೊರೊನಾ ಸಮಯದಲ್ಲಿ ಭಾರತಕ್ಕೆ ಬಂದಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌‌ ಅವರು ಗುಜರಾತ್‌ಗೆ ಭೇಟಿ ನೀಡಿದಾಗ ಈ ಸ್ಲಂಗಳು ಕಾಣದಂತೆ ದೊಡ್ಡ ಗೋಡೆಗಳನ್ನು ಕಟ್ಟಲಾಗಿತ್ತು. ಇದರ ವಿರುದ್ದ ದೇಶದಾದ್ಯಂತ ಭಾರಿ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...