Homeರಾಷ್ಟ್ರೀಯಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

- Advertisement -
- Advertisement -

ಇಂಗ್ಲೇಂಡ್‌‌‌ ಪ್ರಧಾನಿ ಬೋರಿಸ್ ಜಾನ್ಸನ್‌ ಅವರು ಗುರುವಾರದಂದು ಗುಜರಾತ್‌‌ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಕಾರ್ಯಕ್ರಮದ ಸ್ಥಳಕ್ಕೆ ತೆರಳಿದ ಮಾರ್ಗದಲ್ಲಿ ದೊಡ್ಡ ಗಾತ್ರದ ಬಿಳಿ ಪರದೆಗಳನ್ನು ಕಟ್ಟಿ ಸ್ಲಂಗಳು ಕಾಣದಂದತೆ ಕಟ್ಟಲಾಗಿತ್ತು. ಅದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ‘ಗುಜರಾತ್‌ ಮಾಡೆಲ್‌‌’ ಎಂದು ಜನರು ವ್ಯಂಗ್ಯವಾಗಿದ್ದಾರೆ.

ಇಂಗ್ಲೇಂಡ್‌‌ ಪ್ರಧಾನಿ ತಮ್ಮ ಭಾರತ ಪ್ರವಾಸದ ಮೊದಲ ದಿನದಂದು ಗುಜರಾತ್‌ಗೆ ಭೇಟಿ ನೀಡಿದ್ದರು. ಅವರ ಭೇಟಿಯ ನಂತರ ಈ ಬಟ್ಟೆಯ ಪರದೆಗಳನ್ನು ತೆಗೆಯಲಾಗಿದೆ. ಈ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿತ್ತೆ ಅಥವಾ ಜಿಲ್ಲಾಡಳಿತ ಮಾಡಿತ್ತೆ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿತ್ರನಿರ್ಮಾಪಕ ವಿನೋದ್ ಕಪ್ರಿ ಅವರು ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ನರೇಂದ್ರ ಮೋದಿಯವರೇ, ನೀವು 12 ವರ್ಷಗಳ ಕಾಲ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದೀರಿ. 8 ವರ್ಷಗಳಿಂದ ದೇಶದ ಪ್ರಧಾನಿಯಾಗಿದ್ದೀರಿ. ಆದರೂ, ಬೋರಿಸ್‌ ಜೋನ್ಸನ್‌ ಅವರಿಗೆ ಇದನ್ನು ತೋರಿಸಲು ನಿಮಗೆ ನಾಚಿಕೆಯಾಗುವುದು ಏನಿದೆ?” ಎಂದು ಅವರು ವಿಡಿಯೊ ಜೊತೆಗೆ ಬರೆದುಕೊಂಡಿದ್ದಾರೆ.

ಎನ್‌ಡಿಟಿವಿ ಪತ್ರಕರ್ತ ಉಮಾಶಂಕರ್ ಸಿಂಗ್  ಅವರು ಗುರುವಾರ ಸಂಜೆ ಪೋಸ್ಟ್ ಮಾಡಿದ ವಿಡಿಯೊದಲ್ಲಿ ಬಿಳಿ ಪರದೆಗಳನ್ನು ತೆಗೆಯುತ್ತಿರುವುದನ್ನು ಕಾಣಬಹುದು. ಈ ವಿಡಿಯೊದಲ್ಲಿ ಸ್ಲಂಗಳಲ್ಲಿ ಇರುವ ಗುಡಿಸಲುಗಳು ಮತ್ತು ಹಿಂದೆ ನಿಲ್ಲಿಸಿದ ವಾಹನಗಳನ್ನು ಕಾಣುತ್ತದೆ.

ಇದನ್ನೂ ಓದಿ: ‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ…’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

ಬೋರಿಸ್‌ ಜಾನ್ಸನ್‌ ಅವರು ಶುಕ್ರವಾರ ಪ್ರಧಾನಿ ಮೋದಿಯೊಂದಿಗೆ ಮಾತುಕತೆ ನಡೆಸಲು ದೆಹಲಿಗೆ ತೆರಳಿದ್ದರು. ಈ ಬಗ್ಗೆ ಬರೆದಿರುವ ಅವರು “ಜಾನ್ಸನ್ ಹೊರಡುತ್ತಿದ್ದಂತೆ ಪರದೆಗಳನ್ನು ತೆಗೆಯಲಾಗುತ್ತಿವೆ” ಎಂದು ಬರೆದಿದ್ದಾರೆ.

ತಮ್ಮ ಎರಡು ದಿನಗಳ ಭಾರತದ ಪ್ರವಾಸಕ್ಕಾಗಿ ಬೋರಿಸ್‌ ಜಾನ್ಸನ್ ಅವರು ಗುರುವಾರದಂದು ಗುಜರಾತ್‌ಗೆ ಬಂದಿಳಿದಿದ್ದರು. ಅವರು ಅಹಮದಾಬಾದ್‌ನ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತವನ್ನು ಪಡೆದು, ಮಹಾತ್ಮ ಗಾಂಧಿಯವರ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ಗಾಂಧಿಯವರ ಪ್ರಸಿದ್ಧ ಚರಕ ಜೊತೆ ಕುಳಿತು ಪೋಸ್ ನೀಡಿದರು.

ಅವರ ಗುಜರಾತ್ ಭೇಟಿಯನ್ನು ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರು ಆಯೋಜಿಸಿದ್ದರು. ಬೋರಿಸ್‌ ಅವರು ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ಭೇಟಿಯಾಗಿ, ಆತ್ಮನಿರ್ಭರ್ ಭಾರತ್ ಉಪಕ್ರಮದ ಭಾಗವಾಗಿ ಏರೋಸ್ಪೇಸ್ ಮತ್ತು ರಕ್ಷಣಾ ತಂತ್ರಜ್ಞಾನಗಳನ್ನು ಸಹ-ವಿನ್ಯಾಸಗೊಳಿಸಲು ಮತ್ತು ಅಭಿವೃದ್ಧಿಪಡಿಸಲು ಅದಾನಿ ಗ್ರೂಪ್ ಮತ್ತು ಬ್ರಿಟಿಷ್ ಕಂಪನಿಗಳು ಹೇಗೆ ಸಹಕರಿಸಬಹುದು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ.

ಕೊರೊನಾ ಸಮಯದಲ್ಲಿ ಭಾರತಕ್ಕೆ ಬಂದಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌‌ ಅವರು ಗುಜರಾತ್‌ಗೆ ಭೇಟಿ ನೀಡಿದಾಗ ಈ ಸ್ಲಂಗಳು ಕಾಣದಂತೆ ದೊಡ್ಡ ಗೋಡೆಗಳನ್ನು ಕಟ್ಟಲಾಗಿತ್ತು. ಇದರ ವಿರುದ್ದ ದೇಶದಾದ್ಯಂತ ಭಾರಿ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಿಜೆಪಿಗೆ ಮತ ಹಾಕುವಂತೆ...

0
ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಅಧೀರ್ ರಂಜನ್ ಚೌಧರಿ ಅವರಿ ಬಿಜೆಪಿ ಪರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ " ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷಕ್ಕೆ ಮತ...