Homeರಾಷ್ಟ್ರೀಯಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

- Advertisement -
- Advertisement -

ಇಂಗ್ಲೇಂಡ್‌‌‌ ಪ್ರಧಾನಿ ಬೋರಿಸ್ ಜಾನ್ಸನ್‌ ಅವರು ಗುರುವಾರದಂದು ಗುಜರಾತ್‌‌ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಕಾರ್ಯಕ್ರಮದ ಸ್ಥಳಕ್ಕೆ ತೆರಳಿದ ಮಾರ್ಗದಲ್ಲಿ ದೊಡ್ಡ ಗಾತ್ರದ ಬಿಳಿ ಪರದೆಗಳನ್ನು ಕಟ್ಟಿ ಸ್ಲಂಗಳು ಕಾಣದಂದತೆ ಕಟ್ಟಲಾಗಿತ್ತು. ಅದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ‘ಗುಜರಾತ್‌ ಮಾಡೆಲ್‌‌’ ಎಂದು ಜನರು ವ್ಯಂಗ್ಯವಾಗಿದ್ದಾರೆ.

ಇಂಗ್ಲೇಂಡ್‌‌ ಪ್ರಧಾನಿ ತಮ್ಮ ಭಾರತ ಪ್ರವಾಸದ ಮೊದಲ ದಿನದಂದು ಗುಜರಾತ್‌ಗೆ ಭೇಟಿ ನೀಡಿದ್ದರು. ಅವರ ಭೇಟಿಯ ನಂತರ ಈ ಬಟ್ಟೆಯ ಪರದೆಗಳನ್ನು ತೆಗೆಯಲಾಗಿದೆ. ಈ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿತ್ತೆ ಅಥವಾ ಜಿಲ್ಲಾಡಳಿತ ಮಾಡಿತ್ತೆ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿತ್ರನಿರ್ಮಾಪಕ ವಿನೋದ್ ಕಪ್ರಿ ಅವರು ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ನರೇಂದ್ರ ಮೋದಿಯವರೇ, ನೀವು 12 ವರ್ಷಗಳ ಕಾಲ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದೀರಿ. 8 ವರ್ಷಗಳಿಂದ ದೇಶದ ಪ್ರಧಾನಿಯಾಗಿದ್ದೀರಿ. ಆದರೂ, ಬೋರಿಸ್‌ ಜೋನ್ಸನ್‌ ಅವರಿಗೆ ಇದನ್ನು ತೋರಿಸಲು ನಿಮಗೆ ನಾಚಿಕೆಯಾಗುವುದು ಏನಿದೆ?” ಎಂದು ಅವರು ವಿಡಿಯೊ ಜೊತೆಗೆ ಬರೆದುಕೊಂಡಿದ್ದಾರೆ.

ಎನ್‌ಡಿಟಿವಿ ಪತ್ರಕರ್ತ ಉಮಾಶಂಕರ್ ಸಿಂಗ್  ಅವರು ಗುರುವಾರ ಸಂಜೆ ಪೋಸ್ಟ್ ಮಾಡಿದ ವಿಡಿಯೊದಲ್ಲಿ ಬಿಳಿ ಪರದೆಗಳನ್ನು ತೆಗೆಯುತ್ತಿರುವುದನ್ನು ಕಾಣಬಹುದು. ಈ ವಿಡಿಯೊದಲ್ಲಿ ಸ್ಲಂಗಳಲ್ಲಿ ಇರುವ ಗುಡಿಸಲುಗಳು ಮತ್ತು ಹಿಂದೆ ನಿಲ್ಲಿಸಿದ ವಾಹನಗಳನ್ನು ಕಾಣುತ್ತದೆ.

ಇದನ್ನೂ ಓದಿ: ‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ…’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

ಬೋರಿಸ್‌ ಜಾನ್ಸನ್‌ ಅವರು ಶುಕ್ರವಾರ ಪ್ರಧಾನಿ ಮೋದಿಯೊಂದಿಗೆ ಮಾತುಕತೆ ನಡೆಸಲು ದೆಹಲಿಗೆ ತೆರಳಿದ್ದರು. ಈ ಬಗ್ಗೆ ಬರೆದಿರುವ ಅವರು “ಜಾನ್ಸನ್ ಹೊರಡುತ್ತಿದ್ದಂತೆ ಪರದೆಗಳನ್ನು ತೆಗೆಯಲಾಗುತ್ತಿವೆ” ಎಂದು ಬರೆದಿದ್ದಾರೆ.

ತಮ್ಮ ಎರಡು ದಿನಗಳ ಭಾರತದ ಪ್ರವಾಸಕ್ಕಾಗಿ ಬೋರಿಸ್‌ ಜಾನ್ಸನ್ ಅವರು ಗುರುವಾರದಂದು ಗುಜರಾತ್‌ಗೆ ಬಂದಿಳಿದಿದ್ದರು. ಅವರು ಅಹಮದಾಬಾದ್‌ನ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತವನ್ನು ಪಡೆದು, ಮಹಾತ್ಮ ಗಾಂಧಿಯವರ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ಗಾಂಧಿಯವರ ಪ್ರಸಿದ್ಧ ಚರಕ ಜೊತೆ ಕುಳಿತು ಪೋಸ್ ನೀಡಿದರು.

ಅವರ ಗುಜರಾತ್ ಭೇಟಿಯನ್ನು ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರು ಆಯೋಜಿಸಿದ್ದರು. ಬೋರಿಸ್‌ ಅವರು ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ಭೇಟಿಯಾಗಿ, ಆತ್ಮನಿರ್ಭರ್ ಭಾರತ್ ಉಪಕ್ರಮದ ಭಾಗವಾಗಿ ಏರೋಸ್ಪೇಸ್ ಮತ್ತು ರಕ್ಷಣಾ ತಂತ್ರಜ್ಞಾನಗಳನ್ನು ಸಹ-ವಿನ್ಯಾಸಗೊಳಿಸಲು ಮತ್ತು ಅಭಿವೃದ್ಧಿಪಡಿಸಲು ಅದಾನಿ ಗ್ರೂಪ್ ಮತ್ತು ಬ್ರಿಟಿಷ್ ಕಂಪನಿಗಳು ಹೇಗೆ ಸಹಕರಿಸಬಹುದು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ.

ಕೊರೊನಾ ಸಮಯದಲ್ಲಿ ಭಾರತಕ್ಕೆ ಬಂದಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌‌ ಅವರು ಗುಜರಾತ್‌ಗೆ ಭೇಟಿ ನೀಡಿದಾಗ ಈ ಸ್ಲಂಗಳು ಕಾಣದಂತೆ ದೊಡ್ಡ ಗೋಡೆಗಳನ್ನು ಕಟ್ಟಲಾಗಿತ್ತು. ಇದರ ವಿರುದ್ದ ದೇಶದಾದ್ಯಂತ ಭಾರಿ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...