Homeಮುಖಪುಟಗುಜರಾತ್ | ಏಕರೂಪ ನಾಗರಿಕ ಸಂಹಿತೆ ಕರಡು ರಚನೆಗೆ ಸಮಿತಿ ನೇಮಿಸಿದ ಬಿಜೆಪಿ ಸರ್ಕಾರ

ಗುಜರಾತ್ | ಏಕರೂಪ ನಾಗರಿಕ ಸಂಹಿತೆ ಕರಡು ರಚನೆಗೆ ಸಮಿತಿ ನೇಮಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

ರಾಜ್ಯಕ್ಕೆ ಏಕರೂಪ ನಾಗರಿಕ ಸಂಹಿತೆ (ಯುಸಿಸಿ)ಯ ಕರಡು ಸಿದ್ಧಪಡಿಸಲು ಐದು ಸದಸ್ಯರ ಸಮಿತಿಯನ್ನುಗುಜರಾತ್ ಸರ್ಕಾರ ಮಂಗಳವಾರ ನೇಮಿಸಿದೆ ಎಂದು ANI ವರದಿ ಮಾಡಿದೆ. ಸಮಿತಿಯು 45 ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಲಿದ್ದು, ಅದರ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ. ಗುಜರಾತ್

ಭಾರತೀಯತೆ ನಮ್ಮ ಧರ್ಮ, ಸಂವಿಧಾನವು ನಮ್ಮ ‘ಪವಿತ್ರ ಗ್ರಂಥ’ ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ನಾವು ಸಂವಿಧಾನದ 75 ವರ್ಷಗಳನ್ನು ಆಚರಿಸುತ್ತಿದ್ದೇವೆ. ಸಮಾನ ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಏಕರೂಪ ಕಾನೂನನ್ನು ಜಾರಿಗೆ ತರಲು ನಿರ್ಧರಿಸಿದ್ದಾರೆ.” ಎಂದು ಅವರು ಹೇಳಿದ್ದಾರೆ. ಗುಜರಾತ್

ಸಮಿತಿಯು ಸಾಮಾನ್ಯ ವೈಯಕ್ತಿಕ ಸಂಹಿತೆಯನ್ನು ಜಾರಿಗೆ ತರುವ ಹಲವಾರು ಅಂಶಗಳನ್ನು ಪರಿಶೀಲಿಸುತ್ತದೆ ಮತ್ತು ಎಲ್ಲಾ ವಲಯಗಳ ವ್ಯಕ್ತಿಗಳಿಂದ ಪ್ರತಿಕ್ರಿಯೆಯನ್ನು ಸಂಗ್ರಹಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶೆ ರಂಜನಾ ದೇಸಾಯಿ ಈ ಸಮಿತಿಯ ನೇತೃತ್ವ ವಹಿಸಲಿದ್ದು, ಹಲವಾರು ಧಾರ್ಮಿಕ ನಾಯಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ರಾಜ್ಯದ ಗೃಹ ಸಚಿವ ಹರ್ಷ ಸಂಘವಿ ಪಿಟಿಐಗೆ ತಿಳಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆ

ಜನವರಿ 27 ರಂದು ಉತ್ತರಾಖಂಡ ಸರ್ಕಾರವು ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದಿತ್ತು. ಉತ್ತರಾಖಂಡವು ಸ್ವಾತಂತ್ರ್ಯದ ನಂತರ ಏಕರೂಪ ನಾಗರಿಕ ಸಂಹಿತೆಯನ್ನಿ ಜಾರಿಗೆ ತಂದ ಮೊದಲ ರಾಜ್ಯವಾಗಿದೆ. 1867 ರಲ್ಲಿ ಪೋರ್ಚುಗೀಸರು ನಾಗರಿಕ ಸಂಹಿತೆಯನ್ನು ಅಂಗೀಕರಿಸಿದ್ದರು. ಅಂದಿನಿಂದ ಗೋವಾದಲ್ಲಿ ಸಾಮಾನ್ಯ ನಾಗರಿಕ ಸಂಹಿತೆ ಜಾರಿಯಲ್ಲಿದೆ.

ಈ ಸಂಹಿತೆಯು ಎಲ್ಲಾ ನಾಗರಿಕರಿಗೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರವನ್ನು ನಿಯಂತ್ರಿಸುವ ಕಾನೂನುಗಳ ಸಾಮಾನ್ಯ ಗುಂಪಾಗಿದೆ. ಪ್ರಸ್ತುತ ಎಲ್ಲಾ ಕಾರ್ಯಗಳು ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳ ವೈಯಕ್ತಿಕ ವ್ಯವಹಾರಗಳು ಎಂದು ಪರಿಗಣಿಸಲಾಗಿದ್ದು, ಸಮುದಾಯಗಳ ನಿರ್ದಿಷ್ಟ ಧರ್ಮ ಗ್ರಂಥಗಳ ಕಾನೂನುಗಳನ್ನು ಆಧರಿಸಿ ನಡೆಯುತ್ತವೆ.

ಸಾಮಾನ್ಯ ವೈಯಕ್ತಿಕ ಕಾನೂನಿನ ಪರಿಚಯ ಮಾಡುವುದು ಬಹಳ ಹಿಂದಿನಿಂದಲೂ ಬಿಜೆಪಿಯ  ಕಾರ್ಯಸೂಚಿಯಲ್ಲಿದ್ದು, ಪಕ್ಷ ಆಳದಲ್ಲಿರುವ ಹಲವಾರು ರಾಜ್ಯಗಳು ಅದನ್ನು ಅನುಷ್ಠಾನಗೊಳಿಸುವತ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಉತ್ತರಾಖಂಡದಲ್ಲಿ ಈ ನಿಯಮಗಳ ಅನುಷ್ಠಾನವು ಇತರ ಬಿಜೆಪಿ ಆಡಳಿತದ ರಾಜ್ಯಗಳು ಇದನ್ನು ಅನುಸರಿಸಲು ಒಂದು ಪೂರ್ವನಿದರ್ಶನವಾಲಿದೆ ಎಂದು ನಿರೀಕ್ಷಿಸಲಾಗಿದೆ.

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಯ ತನ್ನ ಅಭಿಯಾನದಲ್ಲಿ ಬಿಜೆಪಿ ಮುಖ್ಯವಾಗಿ ಮುಸ್ಲಿಂ ವೈಯಕ್ತಿಕ ಕಾನೂನನ್ನು ಗುರಿಯಾಗಿಸಿಕೊಂಡಿತ್ತು. ಈ ಅಭಿಯಾನದ ವೇಳೆ ಬಿಜೆಪಿಯು, ಮುಸ್ಲಿಂ ಪುರುಷರು ಬಹುಪತ್ನಿತ್ವವನ್ನು ಆಚರಿಸಲು, ಹೆಚ್ಚಿನ ಆಸ್ತಿಯನ್ನು ಆನುವಂಶಿಕವಾಗಿ ಪಡೆಯಲು, ವಿಚ್ಛೇದನವನ್ನು ಪ್ರಾರಂಭಿಸಲು ಮತ್ತು ಜೀವನಾಂಶವನ್ನು ನಿರಾಕರಿಸಲು ಅನುವು ಮಾಡಿಕೊಡುವುದರಿಂದ ಮುಸ್ಲಿಂ ಮಹಿಳೆಯರ ವಿರುದ್ಧ ತಾರತಮ್ಯ ಆಗುತ್ತಿವೆ ಎಂದು ವಾದಿಸಿತ್ತು.

ಉತ್ತರಾಖಂಡದ ಬಿಜೆಪಿ ಸರ್ಕಾರ ಅನುಷ್ಠಾನ ಮಾಡಿರುವ ಕಾನೂನು, ಪ್ರಾಥಮಿಕವಾಗಿ ಹಿಂದೂ ವೈಯಕ್ತಿಕ ಕಾನೂನಾಗಿದ್ದು, ಅದು ಅಲ್ಪಸಂಖ್ಯಾತ ಸಮುದಾಯಗಳ ವೈಯಕ್ತಿಕ ಕಾನೂನು ಪದ್ಧತಿಗಳನ್ನು ಅಳಿಸಿಹಾಕಲು ಕಾರಣವಾಗಲಿದೆ ಎಂದು ಕಾನೂನು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂಓದಿ:  ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಇದನ್ನೂಓದಿ:  ಛತ್ತೀಸ್‌ಗಢ| ಬಿಜಾಪುರ-ದಂತೇವಾಡ ಗಡಿ ಪ್ರದೇಶದಲ್ಲಿ ಐಇಡಿ ಸ್ಫೋಟ; ಮೂವರು ಯೋಧರಿಗೆ ಗಾಯ

ಛತ್ತೀಸ್‌ಗಢ| ಬಿಜಾಪುರ-ದಂತೇವಾಡ ಗಡಿ ಪ್ರದೇಶದಲ್ಲಿ ಐಇಡಿ ಸ್ಫೋಟ; ಮೂವರು ಯೋಧರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...