Homeದಲಿತ್ ಫೈಲ್ಸ್ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

- Advertisement -
- Advertisement -

ಹೊಸದಿಲ್ಲಿ: ಕಳೆದ ಸೋಮವಾರ (ಫೆ.7ರಂದು) ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಮೋಟಾ ಗ್ರಾಮದಲ್ಲಿ ದಲಿತರ ಮೇಲೆ ಸವರ್ಣೀಯರು ಕಲ್ಲು ತೂರಾಟ ನಡೆಸಿದ್ದಾರೆ. ದಲಿತ ವ್ಯಕ್ತಿಯ ವಿವಾಹದ ಮೆರವಣಿಗೆಯಲ್ಲಿ ದಲಿತರು ಸಫಾಗಳನ್ನು (ಸಾಂಪ್ರದಾಯಿಕ ಪೇಟಗಳನ್ನು) ಧರಿಸಿದ್ದಕ್ಕಾಗಿ ಸವರ್ಣೀಯರು ಕಲ್ಲುಗಳಿಂದ ದಾಳಿ ಮಾಡಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಸವರ್ಣೀಯ ರಜಪೂತ ಸಮುದಾಯದವರಾದ ಗ್ರಾಮದ ಸರಪಂಚ್ ಸೇರಿದಂತೆ 28 ಜನರ ಮೇಲೆ ಪ್ರಕರಣವನ್ನು ಬನಸ್ಕಾಂತ ಪೊಲೀಸರು ದಾಖಲಿಸಿದ್ದಾರೆ. ದಾಳಿಕೋರರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಐಪಿಸಿ ಸೆಕ್ಷನ್ 143 (ಕಾನೂನುಬಾಹಿರ ಸಭೆ), 506 (ಅಪರಾಧ ಬೆದರಿಕೆ) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಹಲವು ವಿಭಾಗಗಳ ಅಡಿಯಲ್ಲಿ ಗಢ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಂತರ ಪ್ರಕರಣವನ್ನು ಎಸ್‌ಸಿ/ಎಸ್‌ಟಿ ಪೊಲೀಸ್ ವಿಭಾಗದ ಉಪ ಅಧೀಕ್ಷಕರಿಗೆ (ಡಿವೈಎಸ್‌ಪಿಗೆ) ಹಸ್ತಾಂತರಿಸಲಾಯಿತು ಎಂದು ಗಢ್ ಪೊಲೀಸ್ ಠಾಣೆಯ ಡಿವೈಎಸ್‌ಪಿ ಕುಶಾಲ್ ಓಜಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಘಟನೆಯ ವಿವರಗಳು

ಮದುಮಗ ಅತುಲ್ ಸೆಖಾಲಿಯಾ ಅವರ ತಂದೆ ವೀರಭಾಯ್ ಸೆಖಾಲಿಯಾ ಅವರು ಘಟನೆಯ ಕುರಿತು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

“ಮೆರವಣಿಗೆಯ ಸಮಯದಲ್ಲಿ ದಲಿತ ಸಮುದಾಯದ ವರ ಕುದುರೆಯ ಮೇಲೆ ಸವಾರಿ ಮಾಡಬಾರದು. ಕುಟುಂಬ ತನ್ನ ಯೋಜನೆಯನ್ನು ಕೈಬಿಡಬೇಕು ಎಂದು ಗ್ರಾಮದ ಸರಪಂಚ್ ಭರತ್‌ಸಿಂಹ ರಜಪೂತ್ ಸೇರಿದಂತೆ ಗ್ರಾಮದ ಹಲವಾರು ಸದಸ್ಯರು ಆಗ್ರಹಿಸಿದ್ದರು. ಕುದುರೆಯಲ್ಲಿ ಮೆರವಣಿಗೆ ಮಾಡಿದರೆ ಪರಿಣಾಮಗಳು ವ್ಯತಿರಿಕ್ತವಾಗುತ್ತವೆ ಎಂದು ಬೆದರಿಕೆ ಹಾಕಿದ್ದರು” ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಕುಟುಂಬವು ತಮ್ಮ ನಿರ್ಧಾರವನ್ನು ಬದಲಿಸಲಿಲ್ಲ. ಸರಪಂಚರು ಭಾನುವಾರ ಗ್ರಾಮಸ್ಥರ ಸಾರ್ವಜನಿಕ ಸಭೆಯನ್ನು ಕರೆದರು. ಅಲ್ಲಿ ಅವರು ಮತ್ತೊಮ್ಮೆ ಕುಟುಂಬಕ್ಕೆ ಬೆದರಿಕೆ ಹಾಕಿದರು. ದಲಿತ ಸಮುದಾಯದ ಸದಸ್ಯನು ಕುದುರೆ ಸವಾರಿ ಮಾಡಬಾರದು. ಏಕೆಂದರೆ ಅದು ಶತಮಾನಗಳ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ವಾದಿಸಿದರು.

ಮದುವೆಯ ದಿನದಂದು ಘರ್ಷಣೆಯಾಗುವುದನ್ನು ತಪ್ಪಿಸಲು, ಮದುಮಗನನ್ನು ಕುದುರೆಯಲ್ಲಿ ಕರೆತರುವ ನಿರ್ಧಾರವನ್ನು ಕುಟುಂಬವು ಕೈಬಿಟ್ಟಿತು. ಮದುವೆಗೂ ಮುನ್ನ ದಲಿತ ಕುಟುಂಬ ಪೊಲೀಸರ ರಕ್ಷಣೆಯನ್ನೂ ಕೋರಿತ್ತು.

ಸೋಮವಾರ ಪೊಲೀಸ್ ಸಿಬ್ಬಂದಿಯ ಉಪಸ್ಥಿತಿಯ ನಡುವೆ ಮೆರವಣಿಗೆ ಪ್ರಾರಂಭವಾದಾಗ, ಮೆರವಣಿಗೆಯ ಸಮಯದಲ್ಲಿ ದಲಿತ ಸಮುದಾಯದ ಸದಸ್ಯರು ಸಫಾಗಳನ್ನು ಧರಿಸಿದ್ದನ್ನು ಸವರ್ಣೀಯರು ಆಕ್ಷೇಪಿಸಿದರು. ಜಾತಿ ನಿಂದನೆ ಪದಗಳನ್ನು ಬಳಸುವ ಮೂಲಕ ಕುಟುಂಬವನ್ನು ನಿಂದಿಸಿದರು.

ಎಫ್ಐಆರ್ ಪ್ರಕಾರ, ಕೆಲವು “ಅಪರಿಚಿತ” ವ್ಯಕ್ತಿಗಳು ಕಲ್ಲುಗಳಿಂದ ಹೊಡೆಯಲು ಪ್ರಾರಂಭಿಸಿದರು. ವರನ ಸಂಬಂಧಿಕರಲ್ಲಿ ಒಬ್ಬರು ಗಾಯಗೊಂಡಿದ್ದಾರೆ.


ಇದನ್ನೂ ಓದಿರಿ: ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯಕ್ಕೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...