Homeದಲಿತ್ ಫೈಲ್ಸ್ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

- Advertisement -
- Advertisement -

ಹೊಸದಿಲ್ಲಿ: ಕಳೆದ ಸೋಮವಾರ (ಫೆ.7ರಂದು) ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಮೋಟಾ ಗ್ರಾಮದಲ್ಲಿ ದಲಿತರ ಮೇಲೆ ಸವರ್ಣೀಯರು ಕಲ್ಲು ತೂರಾಟ ನಡೆಸಿದ್ದಾರೆ. ದಲಿತ ವ್ಯಕ್ತಿಯ ವಿವಾಹದ ಮೆರವಣಿಗೆಯಲ್ಲಿ ದಲಿತರು ಸಫಾಗಳನ್ನು (ಸಾಂಪ್ರದಾಯಿಕ ಪೇಟಗಳನ್ನು) ಧರಿಸಿದ್ದಕ್ಕಾಗಿ ಸವರ್ಣೀಯರು ಕಲ್ಲುಗಳಿಂದ ದಾಳಿ ಮಾಡಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಸವರ್ಣೀಯ ರಜಪೂತ ಸಮುದಾಯದವರಾದ ಗ್ರಾಮದ ಸರಪಂಚ್ ಸೇರಿದಂತೆ 28 ಜನರ ಮೇಲೆ ಪ್ರಕರಣವನ್ನು ಬನಸ್ಕಾಂತ ಪೊಲೀಸರು ದಾಖಲಿಸಿದ್ದಾರೆ. ದಾಳಿಕೋರರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಐಪಿಸಿ ಸೆಕ್ಷನ್ 143 (ಕಾನೂನುಬಾಹಿರ ಸಭೆ), 506 (ಅಪರಾಧ ಬೆದರಿಕೆ) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಹಲವು ವಿಭಾಗಗಳ ಅಡಿಯಲ್ಲಿ ಗಢ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಂತರ ಪ್ರಕರಣವನ್ನು ಎಸ್‌ಸಿ/ಎಸ್‌ಟಿ ಪೊಲೀಸ್ ವಿಭಾಗದ ಉಪ ಅಧೀಕ್ಷಕರಿಗೆ (ಡಿವೈಎಸ್‌ಪಿಗೆ) ಹಸ್ತಾಂತರಿಸಲಾಯಿತು ಎಂದು ಗಢ್ ಪೊಲೀಸ್ ಠಾಣೆಯ ಡಿವೈಎಸ್‌ಪಿ ಕುಶಾಲ್ ಓಜಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಘಟನೆಯ ವಿವರಗಳು

ಮದುಮಗ ಅತುಲ್ ಸೆಖಾಲಿಯಾ ಅವರ ತಂದೆ ವೀರಭಾಯ್ ಸೆಖಾಲಿಯಾ ಅವರು ಘಟನೆಯ ಕುರಿತು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

“ಮೆರವಣಿಗೆಯ ಸಮಯದಲ್ಲಿ ದಲಿತ ಸಮುದಾಯದ ವರ ಕುದುರೆಯ ಮೇಲೆ ಸವಾರಿ ಮಾಡಬಾರದು. ಕುಟುಂಬ ತನ್ನ ಯೋಜನೆಯನ್ನು ಕೈಬಿಡಬೇಕು ಎಂದು ಗ್ರಾಮದ ಸರಪಂಚ್ ಭರತ್‌ಸಿಂಹ ರಜಪೂತ್ ಸೇರಿದಂತೆ ಗ್ರಾಮದ ಹಲವಾರು ಸದಸ್ಯರು ಆಗ್ರಹಿಸಿದ್ದರು. ಕುದುರೆಯಲ್ಲಿ ಮೆರವಣಿಗೆ ಮಾಡಿದರೆ ಪರಿಣಾಮಗಳು ವ್ಯತಿರಿಕ್ತವಾಗುತ್ತವೆ ಎಂದು ಬೆದರಿಕೆ ಹಾಕಿದ್ದರು” ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಕುಟುಂಬವು ತಮ್ಮ ನಿರ್ಧಾರವನ್ನು ಬದಲಿಸಲಿಲ್ಲ. ಸರಪಂಚರು ಭಾನುವಾರ ಗ್ರಾಮಸ್ಥರ ಸಾರ್ವಜನಿಕ ಸಭೆಯನ್ನು ಕರೆದರು. ಅಲ್ಲಿ ಅವರು ಮತ್ತೊಮ್ಮೆ ಕುಟುಂಬಕ್ಕೆ ಬೆದರಿಕೆ ಹಾಕಿದರು. ದಲಿತ ಸಮುದಾಯದ ಸದಸ್ಯನು ಕುದುರೆ ಸವಾರಿ ಮಾಡಬಾರದು. ಏಕೆಂದರೆ ಅದು ಶತಮಾನಗಳ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ವಾದಿಸಿದರು.

ಮದುವೆಯ ದಿನದಂದು ಘರ್ಷಣೆಯಾಗುವುದನ್ನು ತಪ್ಪಿಸಲು, ಮದುಮಗನನ್ನು ಕುದುರೆಯಲ್ಲಿ ಕರೆತರುವ ನಿರ್ಧಾರವನ್ನು ಕುಟುಂಬವು ಕೈಬಿಟ್ಟಿತು. ಮದುವೆಗೂ ಮುನ್ನ ದಲಿತ ಕುಟುಂಬ ಪೊಲೀಸರ ರಕ್ಷಣೆಯನ್ನೂ ಕೋರಿತ್ತು.

ಸೋಮವಾರ ಪೊಲೀಸ್ ಸಿಬ್ಬಂದಿಯ ಉಪಸ್ಥಿತಿಯ ನಡುವೆ ಮೆರವಣಿಗೆ ಪ್ರಾರಂಭವಾದಾಗ, ಮೆರವಣಿಗೆಯ ಸಮಯದಲ್ಲಿ ದಲಿತ ಸಮುದಾಯದ ಸದಸ್ಯರು ಸಫಾಗಳನ್ನು ಧರಿಸಿದ್ದನ್ನು ಸವರ್ಣೀಯರು ಆಕ್ಷೇಪಿಸಿದರು. ಜಾತಿ ನಿಂದನೆ ಪದಗಳನ್ನು ಬಳಸುವ ಮೂಲಕ ಕುಟುಂಬವನ್ನು ನಿಂದಿಸಿದರು.

ಎಫ್ಐಆರ್ ಪ್ರಕಾರ, ಕೆಲವು “ಅಪರಿಚಿತ” ವ್ಯಕ್ತಿಗಳು ಕಲ್ಲುಗಳಿಂದ ಹೊಡೆಯಲು ಪ್ರಾರಂಭಿಸಿದರು. ವರನ ಸಂಬಂಧಿಕರಲ್ಲಿ ಒಬ್ಬರು ಗಾಯಗೊಂಡಿದ್ದಾರೆ.


ಇದನ್ನೂ ಓದಿರಿ: ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯಕ್ಕೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...