Homeಕರೋನಾ ತಲ್ಲಣಗುಜರಾತ್‌: ವಡ‌ಗಾವ್‌‌‌ ಶಾಸಕ ಜಿಗ್ನೇಶ್ ಮೇವಾನಿ ಮಾದರಿ ಕೆಲಸ- ಕ್ಷೇತ್ರದ ಜನರಿಗಾಗಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆ

ಗುಜರಾತ್‌: ವಡ‌ಗಾವ್‌‌‌ ಶಾಸಕ ಜಿಗ್ನೇಶ್ ಮೇವಾನಿ ಮಾದರಿ ಕೆಲಸ- ಕ್ಷೇತ್ರದ ಜನರಿಗಾಗಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆ

- Advertisement -
- Advertisement -

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರ ವಿಧಾನಸಭಾ ಕ್ಷೇತ್ರವಾಗಿರುವ ಬನಸ್ಕಂತ ಜಿಲ್ಲೆಯ ವಡ‌ಗಾವ್‌‌‌ ತಾಲೂಕಿನಲ್ಲಿ ಶನಿವಾರ (ಆಗಸ್ಟ್ 28) ರಂದು ಜಿಲ್ಲೆಯ ಅತಿ ದೊಡ್ಡ ಆಕ್ಸಿಜನ್ ಪ್ಲಾಂಟ್ ಉದ್ಘಾಟಿಸಲಿದ್ದಾರೆ. ಜನರ ನೆರವಿನಿಂದ ದೇಣಿಗೆ ಮೂಲಕ ಈ ಪ್ಲಾಂಟ್ ನಿರ್ಮಿಸಲಾಗಿದೆ.

ಕೊರೊನಾ ಎರಡನೇ ಅಲೆ ಸಮಯದಲ್ಲಿ ದೇಶದಲ್ಲಿ ಉಂಟಾದ ಆಕ್ಸಿಜನ್ ಬಿಕ್ಕಟ್ಟು, ಆಮ್ಲಜನಕ ಸಿಗದೆ ಪ್ರಾಣ ಬಿಟ್ಟವರ ಸಂಖ್ಯೆ ಅಧಿಕವಾಗಿತ್ತು. ಆಕ್ಸಿಜನ್‌ಗಾಗಿ ಎಲ್ಲಾ ರಾಜ್ಯಗಳಲ್ಲೂ ಹಾಹಾಕಾರ ಎದ್ದಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಮೂರನೇ ಅಲೆ ಎದುರಿಸಲು, ತಮ್ಮ ವಿಧಾನಸಭಾ ಕ್ಷೇತ್ರದ ಜನರ ಜೀವ ರಕ್ಷಣೆಗಾಗಿ ಈ ಕಾರ್ಯ ಮಾಡಲಾಗುತ್ತಿದೆ ಎಂದು ಜಿಗ್ನೇಶ್ ಹೇಳಿದ್ದಾರೆ.

“ವಿ ದಿ ಪೀಪಲ್ ಚಾರಿಟಬಲ್ ಟ್ರಸ್ಟ್” ಮೂಲಕ ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಶಾಸಕ ಜಿಗ್ನೇಶ್ ಮೇವಾನಿ ಆರಂಭಿಸಿದ್ದರು. 60 ಲಕ್ಷ ರೂಪಾಯಿ ಸಂಗ್ರಹಿಸುವ ಗುರಿಯನ್ನು ಈ ಅಭಿಯಾನ ಹೋಂದಿತ್ತು. ಗುಜರಾತ್‌ನ ವಡ್ಗಾಮ್‌ನಲ್ಲಿ ಆಕ್ಸಿಜನ್ ಪ್ಲಾಂಟ್ ಮತ್ತು 15 ಆಮ್ಲಜನಕ ಸಾಂದ್ರಕಗಳನ್ನು ಸ್ಥಾಪಿಸಲು ನಿರ್ಧರಿಸಿಲಾಗಿತ್ತು.

ಇದನ್ನೂ ಓದಿ: ಉದ್ಯೋಗ ಖಾತ್ರಿ ಯೋಜನೆ: ಜಿಗ್ನೇಶ್ ಮೇವಾನಿ ಪ್ರತಿನಿಧಿಸುವ ವಡಗಾವ್ ತಾಲೂಕಿಗೆ ಮೊದಲ ಸ್ಥಾನ

ಖುದ್ದು ಕೊರೊನಾ ಸೋಂಕಿಗೆ ಒಳಗಾಗಿದ್ದರೂ ಕೂಡ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಯಾನದ ಜೊತೆಯಾಗಿದ್ದರು ಶಾಸಕ ಜಿಗ್ನೇಶ್ ಮೇವಾನಿ. ಶಾಸಕರ ಕಲ್ಯಾಣ ನಿಧಿ ಬಿಡುಗಡೆಯಾಗಲು ಸಮಯ ತೆಗೆದುಕೊಳ್ಳುತ್ತದೆ. ಅಷ್ಟರಲ್ಲಿ ಸಾವಿರಾರು ಜೀವಗಳು ಬಲಿಯಾಗುತ್ತವೆ. ಇದನ್ನು ತಪ್ಪಿಸಲು, ನನ್ನ ಊರಿನ ಬಡವರು, ಕಾರ್ಮಿಕರ ಉಸಿರು ಉಳಿಸಲು ನೆರವಾಗಿ ಎಂದು ಮನವಿ ಮಾಡಿದ್ದರು.

ಈಗ ವಡಗಾವ್‌ನಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸಲಾಗಿದ್ದು, ದಿನಕ್ಕೆ 800 ಸಿಲಿಂಡರ್‌ಗಳನ್ನು ತುಂಬುವ ಸಾಮರ್ಥವನ್ನು ಈ ಆಮ್ಲಜನಕ ಸ್ಥಾವರ ಹೊಂದಿದೆ ಎಂದು ಜಿಗ್ನೇಶ್ ಮಾಹಿತಿ ನೀಡಿದ್ದಾರೆ. ಎಲ್ಲಾ ತೊಂದರೆಗಳನ್ನು ದಾಟಿ, ನನ್ನ ಕ್ಷೇತ್ರದ ಜನರಿಗೆ ಮೂಲ ಆರೋಗ್ಯ ಸೌಲಭ್ಯ ನೀಡುವಲ್ಲಿ ಸಫಲವಾಗಿದ್ದೇವೆ ಎಂದು ಊನಾ ಚಳವಳಿಯ ನಾಯಕ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ನಮ್ಮ ಮೇಲೆ ದಾಳಿ ನಡೆಸಿದರೆ ಹೋರಾಟವನ್ನು ನಿಲ್ಲಿಸುತ್ತೇವೆಂದು ಭಾವಿಸಿದ್ದೀರಾ, ಮನುವಾದಿಗಳೇ ?- ಜಿಗ್ನೇಶ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...