Homeಕರೋನಾ ತಲ್ಲಣಗುಜರಾತ್‌: ವಡ‌ಗಾವ್‌‌‌ ಶಾಸಕ ಜಿಗ್ನೇಶ್ ಮೇವಾನಿ ಮಾದರಿ ಕೆಲಸ- ಕ್ಷೇತ್ರದ ಜನರಿಗಾಗಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆ

ಗುಜರಾತ್‌: ವಡ‌ಗಾವ್‌‌‌ ಶಾಸಕ ಜಿಗ್ನೇಶ್ ಮೇವಾನಿ ಮಾದರಿ ಕೆಲಸ- ಕ್ಷೇತ್ರದ ಜನರಿಗಾಗಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆ

- Advertisement -
- Advertisement -

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರ ವಿಧಾನಸಭಾ ಕ್ಷೇತ್ರವಾಗಿರುವ ಬನಸ್ಕಂತ ಜಿಲ್ಲೆಯ ವಡ‌ಗಾವ್‌‌‌ ತಾಲೂಕಿನಲ್ಲಿ ಶನಿವಾರ (ಆಗಸ್ಟ್ 28) ರಂದು ಜಿಲ್ಲೆಯ ಅತಿ ದೊಡ್ಡ ಆಕ್ಸಿಜನ್ ಪ್ಲಾಂಟ್ ಉದ್ಘಾಟಿಸಲಿದ್ದಾರೆ. ಜನರ ನೆರವಿನಿಂದ ದೇಣಿಗೆ ಮೂಲಕ ಈ ಪ್ಲಾಂಟ್ ನಿರ್ಮಿಸಲಾಗಿದೆ.

ಕೊರೊನಾ ಎರಡನೇ ಅಲೆ ಸಮಯದಲ್ಲಿ ದೇಶದಲ್ಲಿ ಉಂಟಾದ ಆಕ್ಸಿಜನ್ ಬಿಕ್ಕಟ್ಟು, ಆಮ್ಲಜನಕ ಸಿಗದೆ ಪ್ರಾಣ ಬಿಟ್ಟವರ ಸಂಖ್ಯೆ ಅಧಿಕವಾಗಿತ್ತು. ಆಕ್ಸಿಜನ್‌ಗಾಗಿ ಎಲ್ಲಾ ರಾಜ್ಯಗಳಲ್ಲೂ ಹಾಹಾಕಾರ ಎದ್ದಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಮೂರನೇ ಅಲೆ ಎದುರಿಸಲು, ತಮ್ಮ ವಿಧಾನಸಭಾ ಕ್ಷೇತ್ರದ ಜನರ ಜೀವ ರಕ್ಷಣೆಗಾಗಿ ಈ ಕಾರ್ಯ ಮಾಡಲಾಗುತ್ತಿದೆ ಎಂದು ಜಿಗ್ನೇಶ್ ಹೇಳಿದ್ದಾರೆ.

“ವಿ ದಿ ಪೀಪಲ್ ಚಾರಿಟಬಲ್ ಟ್ರಸ್ಟ್” ಮೂಲಕ ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಶಾಸಕ ಜಿಗ್ನೇಶ್ ಮೇವಾನಿ ಆರಂಭಿಸಿದ್ದರು. 60 ಲಕ್ಷ ರೂಪಾಯಿ ಸಂಗ್ರಹಿಸುವ ಗುರಿಯನ್ನು ಈ ಅಭಿಯಾನ ಹೋಂದಿತ್ತು. ಗುಜರಾತ್‌ನ ವಡ್ಗಾಮ್‌ನಲ್ಲಿ ಆಕ್ಸಿಜನ್ ಪ್ಲಾಂಟ್ ಮತ್ತು 15 ಆಮ್ಲಜನಕ ಸಾಂದ್ರಕಗಳನ್ನು ಸ್ಥಾಪಿಸಲು ನಿರ್ಧರಿಸಿಲಾಗಿತ್ತು.

ಇದನ್ನೂ ಓದಿ: ಉದ್ಯೋಗ ಖಾತ್ರಿ ಯೋಜನೆ: ಜಿಗ್ನೇಶ್ ಮೇವಾನಿ ಪ್ರತಿನಿಧಿಸುವ ವಡಗಾವ್ ತಾಲೂಕಿಗೆ ಮೊದಲ ಸ್ಥಾನ

ಖುದ್ದು ಕೊರೊನಾ ಸೋಂಕಿಗೆ ಒಳಗಾಗಿದ್ದರೂ ಕೂಡ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಯಾನದ ಜೊತೆಯಾಗಿದ್ದರು ಶಾಸಕ ಜಿಗ್ನೇಶ್ ಮೇವಾನಿ. ಶಾಸಕರ ಕಲ್ಯಾಣ ನಿಧಿ ಬಿಡುಗಡೆಯಾಗಲು ಸಮಯ ತೆಗೆದುಕೊಳ್ಳುತ್ತದೆ. ಅಷ್ಟರಲ್ಲಿ ಸಾವಿರಾರು ಜೀವಗಳು ಬಲಿಯಾಗುತ್ತವೆ. ಇದನ್ನು ತಪ್ಪಿಸಲು, ನನ್ನ ಊರಿನ ಬಡವರು, ಕಾರ್ಮಿಕರ ಉಸಿರು ಉಳಿಸಲು ನೆರವಾಗಿ ಎಂದು ಮನವಿ ಮಾಡಿದ್ದರು.

ಈಗ ವಡಗಾವ್‌ನಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸಲಾಗಿದ್ದು, ದಿನಕ್ಕೆ 800 ಸಿಲಿಂಡರ್‌ಗಳನ್ನು ತುಂಬುವ ಸಾಮರ್ಥವನ್ನು ಈ ಆಮ್ಲಜನಕ ಸ್ಥಾವರ ಹೊಂದಿದೆ ಎಂದು ಜಿಗ್ನೇಶ್ ಮಾಹಿತಿ ನೀಡಿದ್ದಾರೆ. ಎಲ್ಲಾ ತೊಂದರೆಗಳನ್ನು ದಾಟಿ, ನನ್ನ ಕ್ಷೇತ್ರದ ಜನರಿಗೆ ಮೂಲ ಆರೋಗ್ಯ ಸೌಲಭ್ಯ ನೀಡುವಲ್ಲಿ ಸಫಲವಾಗಿದ್ದೇವೆ ಎಂದು ಊನಾ ಚಳವಳಿಯ ನಾಯಕ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ನಮ್ಮ ಮೇಲೆ ದಾಳಿ ನಡೆಸಿದರೆ ಹೋರಾಟವನ್ನು ನಿಲ್ಲಿಸುತ್ತೇವೆಂದು ಭಾವಿಸಿದ್ದೀರಾ, ಮನುವಾದಿಗಳೇ ?- ಜಿಗ್ನೇಶ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...