Homeಮುಖಪುಟಗುಜರಾತ್‌: ನಮಾಝ್‌ ಮಾಡುತ್ತಿದ್ದಾಗ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ಪ್ರಕರಣ: ಹಾಸ್ಟೆಲ್‌ ಬಿಟ್ಟು ತೆರಳುವಂತೆ ಸಂತ್ರಸ್ತರಿಗೆ...

ಗುಜರಾತ್‌: ನಮಾಝ್‌ ಮಾಡುತ್ತಿದ್ದಾಗ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ಪ್ರಕರಣ: ಹಾಸ್ಟೆಲ್‌ ಬಿಟ್ಟು ತೆರಳುವಂತೆ ಸಂತ್ರಸ್ತರಿಗೆ ಸೂಚನೆ

- Advertisement -
- Advertisement -

ಗುಜರಾತ್‌ ವಿವಿಯ ಹಾಸ್ಟೆಲ್‌ನಲ್ಲಿದ್ದ 7 ವಿದೇಶಿ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ ಬಿಟ್ಟು ತೆರಳಲು ಸೂಚಿಸಲಾಗಿದೆ. ಇತ್ತೀಚೆಗೆ ಹಾಸ್ಟೆಲ್‌ನಲ್ಲಿ ರಂಝಾನ್‌ ಹಿನ್ನೆಲೆ ನಮಾಝ್‌ ಮಾಡುವಾಗ ವಿದ್ಯಾರ್ಥಿಗಳ ಮೇಲೆ ಬಲಪಂಥೀಯ ಗುಂಪೊಂದು ದಾಳಿ ನಡೆಸಿತ್ತು. ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು, ಭಾರತದಲ್ಲಿ ವಿದೇಶಿ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿತ್ತು.

ಇದೀಗ ಅಫ್ಘಾನಿಸ್ತಾನದ ಆರು ಮತ್ತು ಪೂರ್ವ ಆಫ್ರಿಕಾದ ಓರ್ವ ವಿದ್ಯಾರ್ಥಿಯನ್ನು ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್ ಕೊಠಡಿಯಿಂದ ನಿರ್ಗಮಿಸುವಂತೆ ಸೂಚಿಸಲಾಗಿದೆ. ಮಾರ್ಚ್ 16ರ ದಾಳಿಯ ಕೆಲವು ದಿನಗಳ ನಂತರ ಅಪ್ಘಾನ್‌ ಮತ್ತು ಗ್ಯಾಂಬಿಯನ್ ನಿಯೋಗವು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿತ್ತು ಮತ್ತು ವಿದ್ಯಾರ್ಥಿಗಳ ಸುರಕ್ಷತಾ ಕ್ರಮಗಳ ಕುರಿತು ಗುಜರಾತ್‌ ವಿವಿಯ ಉಪಕುಲಪತಿಗಳೊಂದಿಗೆ ಸಭೆ ನಡೆಸಿತ್ತು.

ಪಿಟಿಐ ಜೊತೆ ಮಾತನಾಡಿದ ವಿಶ್ವವಿದ್ಯಾನಿಲಯದ ಉಪಕುಲಪತಿ ನೀರ್ಜಾ ಗುಪ್ತಾ, ಅಫ್ಘಾನಿಸ್ತಾನದ ಆರು ಮತ್ತು ಪೂರ್ವ ಆಫ್ರಿಕಾದ ಒಬ್ಬ ವಿದ್ಯಾರ್ಥಿಗೆ ತಮ್ಮ ಹಾಸ್ಟೆಲ್ ಕೊಠಡಿಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇವರು ಅಧ್ಯಯನವನ್ನು ಪೂರ್ಣಗೊಳಿಸಿದ್ದಾರೆ ಮತ್ತು ಕೆಲ ಆಡಳಿತಾತ್ಮಕ ಕಾರ್ಯ ಬಾಕಿ ಇರುವುದರಿಂದ ವಸತಿ ನಿಲಯದಲ್ಲೇ ಉಳಿದುಕೊಂಡಿದ್ದಾರೆ. ಅವರು ಇನ್ನೂ ಇಲ್ಲಿ ಉಳಿದುಕೊಳ್ಳುವ ಅಗತ್ಯವಿಲ್ಲದಿರುವುದರಿಂದ ಅವರಿಗೆ ತಾಯ್ನಾಡಿಗೆ ಮರಳಲು ಬೇಕಾದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

ನಾವು ಅಗತ್ಯವಿರುವ ದಾಖಲೆಗಳನ್ನು ಪೂರ್ಣಗೊಳಿಸಿದ್ದೇವೆ ಮತ್ತು ಅವರು ಈಗ ಸುರಕ್ಷಿತವಾಗಿ ತಮ್ಮ ದೇಶಗಳಿಗೆ ಮರಳಬಹುದು. ನಮ್ಮ ಹಾಸ್ಟೆಲ್‌ನಲ್ಲಿ ಯಾವುದೇ ಹಳೆಯ ವಿದ್ಯಾರ್ಥಿಗಳನ್ನು ಇರಿಸಿಕೊಳ್ಳಲು ನಾವು ಬಯಸುವುದಿಲ್ಲ. ನಾವು ಆಯಾ ದೇಶಗಳ ರಾಯಾಭಾರಿಗಳಿಗೆ ತಿಳಿಸಿದ್ದೇವೆ ಮತ್ತು ಅವರು ಈ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಿದ್ದಾರೆ ಎಂದು ಉಪಕುಲಪತಿ ಹೇಳಿದ್ದಾರೆ.

ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ಗೆ ಮಾ.16ರಂದು ನುಗ್ಗಿದ ಗುಂಪೊಂದು ನಮಾಝ್‌ ಮಾಡಿದ್ದಕ್ಕಾಗಿ ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನದ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಶ್ರೀಲಂಕಾ, ತಜಕಿಸ್ತಾನ, ಆಫ್ರಿಕಾ ದೇಶದ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಂಜಾನ್ ಸಮಯದಲ್ಲಿ ರಾತ್ರಿ ತರಾವೀಹ್ ನಮಾಝ್‌ ಮಾಡಲು ನಾವು ಜಮಾಯಿಸಿದ್ದೆವು. ದೊಣ್ಣೆಗಳು ಮತ್ತು ಚಾಕುಗಳೊಂದಿಗೆ ಶಸ್ತ್ರಸಜ್ಜಿತವಾದ ಗುಂಪೊಂದು ಹಾಸ್ಟೆಲ್‌ಗೆ ನುಗ್ಗಿ ನಮ್ಮ ಮೇಲೆ ದಾಳಿ ಮಾಡಿ  ಕೊಠಡಿಗಳನ್ನು ಧ್ವಂಸಗೊಳಿಸಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು. ಘಟನೆಗೆ ಸಂಬಂಧಿಸಿ ಐವರನ್ನು ಪೊಲೀಸರು ಬಂಧಿಸಿದ್ದರು.

ಇದನ್ನು ಓದಿ: ಕೇಜ್ರಿವಾಲ್‌ ಬಂಧನ ಬಿಜೆಪಿಯ ಶವಪೆಟ್ಟಿಗೆಗಿರುವ ಕೊನೆಯ ಮೊಳೆ: ಎಎಪಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...