Homeಮುಖಪುಟಗುಜರಾತ್‌: ನಮಾಝ್‌ ಮಾಡುತ್ತಿದ್ದಾಗ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ಪ್ರಕರಣ: ಹಾಸ್ಟೆಲ್‌ ಬಿಟ್ಟು ತೆರಳುವಂತೆ ಸಂತ್ರಸ್ತರಿಗೆ...

ಗುಜರಾತ್‌: ನಮಾಝ್‌ ಮಾಡುತ್ತಿದ್ದಾಗ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ಪ್ರಕರಣ: ಹಾಸ್ಟೆಲ್‌ ಬಿಟ್ಟು ತೆರಳುವಂತೆ ಸಂತ್ರಸ್ತರಿಗೆ ಸೂಚನೆ

- Advertisement -
- Advertisement -

ಗುಜರಾತ್‌ ವಿವಿಯ ಹಾಸ್ಟೆಲ್‌ನಲ್ಲಿದ್ದ 7 ವಿದೇಶಿ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ ಬಿಟ್ಟು ತೆರಳಲು ಸೂಚಿಸಲಾಗಿದೆ. ಇತ್ತೀಚೆಗೆ ಹಾಸ್ಟೆಲ್‌ನಲ್ಲಿ ರಂಝಾನ್‌ ಹಿನ್ನೆಲೆ ನಮಾಝ್‌ ಮಾಡುವಾಗ ವಿದ್ಯಾರ್ಥಿಗಳ ಮೇಲೆ ಬಲಪಂಥೀಯ ಗುಂಪೊಂದು ದಾಳಿ ನಡೆಸಿತ್ತು. ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು, ಭಾರತದಲ್ಲಿ ವಿದೇಶಿ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿತ್ತು.

ಇದೀಗ ಅಫ್ಘಾನಿಸ್ತಾನದ ಆರು ಮತ್ತು ಪೂರ್ವ ಆಫ್ರಿಕಾದ ಓರ್ವ ವಿದ್ಯಾರ್ಥಿಯನ್ನು ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್ ಕೊಠಡಿಯಿಂದ ನಿರ್ಗಮಿಸುವಂತೆ ಸೂಚಿಸಲಾಗಿದೆ. ಮಾರ್ಚ್ 16ರ ದಾಳಿಯ ಕೆಲವು ದಿನಗಳ ನಂತರ ಅಪ್ಘಾನ್‌ ಮತ್ತು ಗ್ಯಾಂಬಿಯನ್ ನಿಯೋಗವು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿತ್ತು ಮತ್ತು ವಿದ್ಯಾರ್ಥಿಗಳ ಸುರಕ್ಷತಾ ಕ್ರಮಗಳ ಕುರಿತು ಗುಜರಾತ್‌ ವಿವಿಯ ಉಪಕುಲಪತಿಗಳೊಂದಿಗೆ ಸಭೆ ನಡೆಸಿತ್ತು.

ಪಿಟಿಐ ಜೊತೆ ಮಾತನಾಡಿದ ವಿಶ್ವವಿದ್ಯಾನಿಲಯದ ಉಪಕುಲಪತಿ ನೀರ್ಜಾ ಗುಪ್ತಾ, ಅಫ್ಘಾನಿಸ್ತಾನದ ಆರು ಮತ್ತು ಪೂರ್ವ ಆಫ್ರಿಕಾದ ಒಬ್ಬ ವಿದ್ಯಾರ್ಥಿಗೆ ತಮ್ಮ ಹಾಸ್ಟೆಲ್ ಕೊಠಡಿಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇವರು ಅಧ್ಯಯನವನ್ನು ಪೂರ್ಣಗೊಳಿಸಿದ್ದಾರೆ ಮತ್ತು ಕೆಲ ಆಡಳಿತಾತ್ಮಕ ಕಾರ್ಯ ಬಾಕಿ ಇರುವುದರಿಂದ ವಸತಿ ನಿಲಯದಲ್ಲೇ ಉಳಿದುಕೊಂಡಿದ್ದಾರೆ. ಅವರು ಇನ್ನೂ ಇಲ್ಲಿ ಉಳಿದುಕೊಳ್ಳುವ ಅಗತ್ಯವಿಲ್ಲದಿರುವುದರಿಂದ ಅವರಿಗೆ ತಾಯ್ನಾಡಿಗೆ ಮರಳಲು ಬೇಕಾದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

ನಾವು ಅಗತ್ಯವಿರುವ ದಾಖಲೆಗಳನ್ನು ಪೂರ್ಣಗೊಳಿಸಿದ್ದೇವೆ ಮತ್ತು ಅವರು ಈಗ ಸುರಕ್ಷಿತವಾಗಿ ತಮ್ಮ ದೇಶಗಳಿಗೆ ಮರಳಬಹುದು. ನಮ್ಮ ಹಾಸ್ಟೆಲ್‌ನಲ್ಲಿ ಯಾವುದೇ ಹಳೆಯ ವಿದ್ಯಾರ್ಥಿಗಳನ್ನು ಇರಿಸಿಕೊಳ್ಳಲು ನಾವು ಬಯಸುವುದಿಲ್ಲ. ನಾವು ಆಯಾ ದೇಶಗಳ ರಾಯಾಭಾರಿಗಳಿಗೆ ತಿಳಿಸಿದ್ದೇವೆ ಮತ್ತು ಅವರು ಈ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಿದ್ದಾರೆ ಎಂದು ಉಪಕುಲಪತಿ ಹೇಳಿದ್ದಾರೆ.

ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ಗೆ ಮಾ.16ರಂದು ನುಗ್ಗಿದ ಗುಂಪೊಂದು ನಮಾಝ್‌ ಮಾಡಿದ್ದಕ್ಕಾಗಿ ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನದ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಶ್ರೀಲಂಕಾ, ತಜಕಿಸ್ತಾನ, ಆಫ್ರಿಕಾ ದೇಶದ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಂಜಾನ್ ಸಮಯದಲ್ಲಿ ರಾತ್ರಿ ತರಾವೀಹ್ ನಮಾಝ್‌ ಮಾಡಲು ನಾವು ಜಮಾಯಿಸಿದ್ದೆವು. ದೊಣ್ಣೆಗಳು ಮತ್ತು ಚಾಕುಗಳೊಂದಿಗೆ ಶಸ್ತ್ರಸಜ್ಜಿತವಾದ ಗುಂಪೊಂದು ಹಾಸ್ಟೆಲ್‌ಗೆ ನುಗ್ಗಿ ನಮ್ಮ ಮೇಲೆ ದಾಳಿ ಮಾಡಿ  ಕೊಠಡಿಗಳನ್ನು ಧ್ವಂಸಗೊಳಿಸಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು. ಘಟನೆಗೆ ಸಂಬಂಧಿಸಿ ಐವರನ್ನು ಪೊಲೀಸರು ಬಂಧಿಸಿದ್ದರು.

ಇದನ್ನು ಓದಿ: ಕೇಜ್ರಿವಾಲ್‌ ಬಂಧನ ಬಿಜೆಪಿಯ ಶವಪೆಟ್ಟಿಗೆಗಿರುವ ಕೊನೆಯ ಮೊಳೆ: ಎಎಪಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...