Homeಮುಖಪುಟಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ - ಪ್ರಧಾನಿಗೆ ಕಾಂಗ್ರೆಸ್...

ಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ – ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರದ ಈರುಳ್ಳಿ ಬೆಳೆಯುವ ರೈತರಿಗಿಂತ ಗುಜರಾತ್‌ನ ಬಿಳಿ ಈರುಳ್ಳಿ ರೈತರಿಗೆ ಏಕೆ ಆದ್ಯತೆ ನೀಡಲಾಗಿದೆ ಮತ್ತು ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ಏಕೆ ದುರ್ಬಲಗೊಳಿಸಿದೆ ಎಂದು ಕಾಂಗ್ರೆಸ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದೆ. ಧುಲೆ ಮತ್ತು ನಾಸಿಕ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಗಳಿಗೆ ಮುಂಚಿತವಾಗಿ ಕಾಂಗ್ರೆಸ್ ಈ ಪ್ರಶ್ನೆಗಳನ್ನು ಪ್ರಧಾನಿಯ ಮುಂದಿಟ್ಟಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅವರು X ನಲ್ಲಿ ಈ ಪ್ರಶ್ನೆಗಳನ್ನು ಹಾಕಿದ್ದಾರೆ. ಗುಜರಾತ್‌

ಕಳೆದ ವರ್ಷ ಡಿಸೆಂಬರ್‌ನಿಂದ ಮಹಾರಾಷ್ಟ್ರದ ಈರುಳ್ಳಿ ರಫ್ತಿನ ಮೇಲೆ ಮೋದಿ ಸರ್ಕಾರ ಹೇರಿದ ನಿರ್ಬಂಧದಿಂದ ಈರುಳ್ಳಿ ರೈತರು ತತ್ತರಿಸಿ ಹೋಗಿದ್ದಾರೆ. ಬೆಳೆಯ ಋತುವಿನಲ್ಲಿ ಹವಾಮಾನ ಮತ್ತು ನೀರಿನ ಬಿಕ್ಕಟ್ಟಿನಿಂದ ರೈತರು ತಮ್ಮ ಸಾಮಾನ್ಯ ಬೆಳೆಯಲ್ಲಿ ಕೇವಲ 50% ದಷ್ಟು ಮಾತ್ರ ಉತ್ಪಾದಿಸಲು ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಂತಿಮವಾಗಿ ಈರುಳ್ಳಿಯನ್ನು ಕೊಯ್ಲು ಮಾಡಿದಾಗ, ರೈತರು ಅನಿಯಂತ್ರಿತ ರಫ್ತು ನಿಷೇಧವನ್ನು ಎದುರಿಸಿದ್ದಾರೆ. ಈ ನಿಷೇಧ ಅವರಿಗೆ ಮಾರಕವಾಗಿ ಕಡಿಮೆ ಬೆಲೆಗೆ ಬೆಳೆಯನ್ನು ಮಾರಾಟ ಮಾಡಬೇಕಾಯಿತು. ಈ ಮೂಲಕ ಅವರು ಭಾರಿ ನಷ್ಟ ಅನುಭವಿಸಿದರು. ಆದರೆ ಕೇಂದ್ರ ಸರ್ಕಾರ ಇದನ್ನು ಮತ್ತಷ್ಟು ಹದಗೆಡಿಸಿದ್ದು, ಬಿಳಿ ಈರುಳ್ಳಿ ರಫ್ತು ಮಾಡಲು ಅವಕಾಶ ಮಾಡಿಕೊಟ್ಟಿತ್ತು. ಈ ಈರುಳ್ಳಿಯನ್ನು ಪ್ರಾಥಮಿಕವಾಗಿ ಗುಜರಾತ್‌ನಲ್ಲಿ ಬೆಳೆಯಲಾಗುತ್ತದೆ. ಆದರೆ ಕೆಂಪು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದ ರೈತರು ರಫ್ತು ನಿಷೇಧದಿಂದ ಎರಡು ತಿಂಗಳು ಹೊರಗುಳಿದರು. ಈ ನಿಷೇಧ ತೆರವು ಮಾಡಿದ್ದರೂ, ರಫ್ತಿನ ಮೇಲೆ 20% ಸುಂಕವು ಜಾರಿಯಲ್ಲಿದೆ” ಎಂದು ಅವರು ಹೇಳಿದ್ದಾರೆ. ಗುಜರಾತ್‌

“ಜೈವಿಕವಲ್ಲದ ಪ್ರಧಾನಿ ಅವರು ಈ ರೀತಿಯಾಗಿ ಪಕ್ಷಾಪಾತ ಮಾಡಿದರು ಎಂದು ವಿವರಿಸಬಹುದೇ? ಗುಜರಾತ್‌ನ ಈರುಳ್ಳಿ ಬೆಳೆಯುವ ರೈತರ ಪರವಾಗಿ ಕಾಳಜಿ ವ್ಯಕ್ತಪಡಿಸುವಾಗ, ಮಹಾರಾಷ್ಟ್ರದ ಈರುಳ್ಳಿ ರೈತರನ್ನು ಅವರು ಏಕೆ ನಿರ್ಲಕ್ಷಿಸಿದ್ದಾರೆ?” ಎಂದು ರಮೇಶ್ ಅವರು ತಮ್ಮ ಪೋಸ್ಟ್‌ನಲ್ಲಿ ಕೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ದುರ್ಬಲಗೊಳಿಸಿದೆ

2006 ರಲ್ಲಿ ಕಾಂಗ್ರೆಸ್ ಅರಣ್ಯ ಹಕ್ಕುಗಳ ಕಾಯಿದೆ (ಎಫ್‌ಆರ್‌ಎ) ಅನ್ನು ಅಂಗೀಕರಿಸಿತು, ಇದು ಆದಿವಾಸಿ ಮತ್ತು ಅರಣ್ಯ-ವಾಸಿಸುವ ಸಮುದಾಯಗಳಿಗೆ ತಮ್ಮದೇ ಆದ ಕಾಡುಗಳನ್ನು ನಿರ್ವಹಿಸಲು ಕಾನೂನು ಹಕ್ಕುಗಳನ್ನು ನೀಡಿತು ಎಂದು ರಮೇಶ್ ಹೇಳಿದ್ದಾರೆ. ಆದರೆ ಈ ಅರಣ್ಯ ಹಕ್ಕು ಕಾಯ್ದೆ (ಎಫ್‌ಆರ್‌ಎ) ಅನುಷ್ಠಾನಕ್ಕೆ ಬಿಜೆಪಿ ಸರ್ಕಾರ ಅಡ್ಡಿಪಡಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಕಾಯ್ದೆಗೆ ಅಡ್ಡಿಪಡಿಸಿದ ಕಾರಣಕ್ಕೆ ಲಕ್ಷಾಂತರ ಆದಿವಾಸಿಗಳು ಅದರ ಪ್ರಯೋಜನಗಳಿಂದ ವಂಚಿತರಾಗಿದ್ದಾರೆ. ಅವರು ಸಲ್ಲಿಸಿದ 401, 046 ವೈಯಕ್ತಿಕ ಹಕ್ಕುಗಳಲ್ಲಿ ಕೇವಲ 52% ವನ್ನು ಮಾತ್ರ ಅನುಮೋದಿಸಲಾಗಿದೆ ಮತ್ತು ಸಮುದಾಯ ಹಕ್ಕುಗಳಿಗೆ ಅರ್ಹವಾದ 50,045 ಚದರ ಕಿಮೀಗಳಲ್ಲಿ ಕೇವಲ 23.5% ದಷ್ಟು (11,769 ಚದರ ಕಿಮೀ) ಭೂಮಿ ಹಕ್ಕುಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಆದಿವಾಸಿ ಸಮುದಾಯಗಳಿಗೆ ಅವರ ಹಕ್ಕುಗಳನ್ನು ಒದಗಿಸಲು ಏಕೆ ವಿಫಲವಾಗಿದೆ?” ರಮೇಶ್ ಕೇಳಿದ್ದು, ನಾಸಿಕ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮಹಾಯುತಿ ಸರ್ಕಾರ ಏಕೆ ಚುನಾವಣೆ ನಡೆಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...