Homeಮುಖಪುಟಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ - ಪ್ರಧಾನಿಗೆ ಕಾಂಗ್ರೆಸ್...

ಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ – ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರದ ಈರುಳ್ಳಿ ಬೆಳೆಯುವ ರೈತರಿಗಿಂತ ಗುಜರಾತ್‌ನ ಬಿಳಿ ಈರುಳ್ಳಿ ರೈತರಿಗೆ ಏಕೆ ಆದ್ಯತೆ ನೀಡಲಾಗಿದೆ ಮತ್ತು ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ಏಕೆ ದುರ್ಬಲಗೊಳಿಸಿದೆ ಎಂದು ಕಾಂಗ್ರೆಸ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದೆ. ಧುಲೆ ಮತ್ತು ನಾಸಿಕ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಗಳಿಗೆ ಮುಂಚಿತವಾಗಿ ಕಾಂಗ್ರೆಸ್ ಈ ಪ್ರಶ್ನೆಗಳನ್ನು ಪ್ರಧಾನಿಯ ಮುಂದಿಟ್ಟಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅವರು X ನಲ್ಲಿ ಈ ಪ್ರಶ್ನೆಗಳನ್ನು ಹಾಕಿದ್ದಾರೆ. ಗುಜರಾತ್‌

ಕಳೆದ ವರ್ಷ ಡಿಸೆಂಬರ್‌ನಿಂದ ಮಹಾರಾಷ್ಟ್ರದ ಈರುಳ್ಳಿ ರಫ್ತಿನ ಮೇಲೆ ಮೋದಿ ಸರ್ಕಾರ ಹೇರಿದ ನಿರ್ಬಂಧದಿಂದ ಈರುಳ್ಳಿ ರೈತರು ತತ್ತರಿಸಿ ಹೋಗಿದ್ದಾರೆ. ಬೆಳೆಯ ಋತುವಿನಲ್ಲಿ ಹವಾಮಾನ ಮತ್ತು ನೀರಿನ ಬಿಕ್ಕಟ್ಟಿನಿಂದ ರೈತರು ತಮ್ಮ ಸಾಮಾನ್ಯ ಬೆಳೆಯಲ್ಲಿ ಕೇವಲ 50% ದಷ್ಟು ಮಾತ್ರ ಉತ್ಪಾದಿಸಲು ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಂತಿಮವಾಗಿ ಈರುಳ್ಳಿಯನ್ನು ಕೊಯ್ಲು ಮಾಡಿದಾಗ, ರೈತರು ಅನಿಯಂತ್ರಿತ ರಫ್ತು ನಿಷೇಧವನ್ನು ಎದುರಿಸಿದ್ದಾರೆ. ಈ ನಿಷೇಧ ಅವರಿಗೆ ಮಾರಕವಾಗಿ ಕಡಿಮೆ ಬೆಲೆಗೆ ಬೆಳೆಯನ್ನು ಮಾರಾಟ ಮಾಡಬೇಕಾಯಿತು. ಈ ಮೂಲಕ ಅವರು ಭಾರಿ ನಷ್ಟ ಅನುಭವಿಸಿದರು. ಆದರೆ ಕೇಂದ್ರ ಸರ್ಕಾರ ಇದನ್ನು ಮತ್ತಷ್ಟು ಹದಗೆಡಿಸಿದ್ದು, ಬಿಳಿ ಈರುಳ್ಳಿ ರಫ್ತು ಮಾಡಲು ಅವಕಾಶ ಮಾಡಿಕೊಟ್ಟಿತ್ತು. ಈ ಈರುಳ್ಳಿಯನ್ನು ಪ್ರಾಥಮಿಕವಾಗಿ ಗುಜರಾತ್‌ನಲ್ಲಿ ಬೆಳೆಯಲಾಗುತ್ತದೆ. ಆದರೆ ಕೆಂಪು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದ ರೈತರು ರಫ್ತು ನಿಷೇಧದಿಂದ ಎರಡು ತಿಂಗಳು ಹೊರಗುಳಿದರು. ಈ ನಿಷೇಧ ತೆರವು ಮಾಡಿದ್ದರೂ, ರಫ್ತಿನ ಮೇಲೆ 20% ಸುಂಕವು ಜಾರಿಯಲ್ಲಿದೆ” ಎಂದು ಅವರು ಹೇಳಿದ್ದಾರೆ. ಗುಜರಾತ್‌

“ಜೈವಿಕವಲ್ಲದ ಪ್ರಧಾನಿ ಅವರು ಈ ರೀತಿಯಾಗಿ ಪಕ್ಷಾಪಾತ ಮಾಡಿದರು ಎಂದು ವಿವರಿಸಬಹುದೇ? ಗುಜರಾತ್‌ನ ಈರುಳ್ಳಿ ಬೆಳೆಯುವ ರೈತರ ಪರವಾಗಿ ಕಾಳಜಿ ವ್ಯಕ್ತಪಡಿಸುವಾಗ, ಮಹಾರಾಷ್ಟ್ರದ ಈರುಳ್ಳಿ ರೈತರನ್ನು ಅವರು ಏಕೆ ನಿರ್ಲಕ್ಷಿಸಿದ್ದಾರೆ?” ಎಂದು ರಮೇಶ್ ಅವರು ತಮ್ಮ ಪೋಸ್ಟ್‌ನಲ್ಲಿ ಕೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ದುರ್ಬಲಗೊಳಿಸಿದೆ

2006 ರಲ್ಲಿ ಕಾಂಗ್ರೆಸ್ ಅರಣ್ಯ ಹಕ್ಕುಗಳ ಕಾಯಿದೆ (ಎಫ್‌ಆರ್‌ಎ) ಅನ್ನು ಅಂಗೀಕರಿಸಿತು, ಇದು ಆದಿವಾಸಿ ಮತ್ತು ಅರಣ್ಯ-ವಾಸಿಸುವ ಸಮುದಾಯಗಳಿಗೆ ತಮ್ಮದೇ ಆದ ಕಾಡುಗಳನ್ನು ನಿರ್ವಹಿಸಲು ಕಾನೂನು ಹಕ್ಕುಗಳನ್ನು ನೀಡಿತು ಎಂದು ರಮೇಶ್ ಹೇಳಿದ್ದಾರೆ. ಆದರೆ ಈ ಅರಣ್ಯ ಹಕ್ಕು ಕಾಯ್ದೆ (ಎಫ್‌ಆರ್‌ಎ) ಅನುಷ್ಠಾನಕ್ಕೆ ಬಿಜೆಪಿ ಸರ್ಕಾರ ಅಡ್ಡಿಪಡಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಕಾಯ್ದೆಗೆ ಅಡ್ಡಿಪಡಿಸಿದ ಕಾರಣಕ್ಕೆ ಲಕ್ಷಾಂತರ ಆದಿವಾಸಿಗಳು ಅದರ ಪ್ರಯೋಜನಗಳಿಂದ ವಂಚಿತರಾಗಿದ್ದಾರೆ. ಅವರು ಸಲ್ಲಿಸಿದ 401, 046 ವೈಯಕ್ತಿಕ ಹಕ್ಕುಗಳಲ್ಲಿ ಕೇವಲ 52% ವನ್ನು ಮಾತ್ರ ಅನುಮೋದಿಸಲಾಗಿದೆ ಮತ್ತು ಸಮುದಾಯ ಹಕ್ಕುಗಳಿಗೆ ಅರ್ಹವಾದ 50,045 ಚದರ ಕಿಮೀಗಳಲ್ಲಿ ಕೇವಲ 23.5% ದಷ್ಟು (11,769 ಚದರ ಕಿಮೀ) ಭೂಮಿ ಹಕ್ಕುಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಆದಿವಾಸಿ ಸಮುದಾಯಗಳಿಗೆ ಅವರ ಹಕ್ಕುಗಳನ್ನು ಒದಗಿಸಲು ಏಕೆ ವಿಫಲವಾಗಿದೆ?” ರಮೇಶ್ ಕೇಳಿದ್ದು, ನಾಸಿಕ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮಹಾಯುತಿ ಸರ್ಕಾರ ಏಕೆ ಚುನಾವಣೆ ನಡೆಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...