Homeಮುಖಪುಟಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ - ಪ್ರಧಾನಿಗೆ ಕಾಂಗ್ರೆಸ್...

ಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ – ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರದ ಈರುಳ್ಳಿ ಬೆಳೆಯುವ ರೈತರಿಗಿಂತ ಗುಜರಾತ್‌ನ ಬಿಳಿ ಈರುಳ್ಳಿ ರೈತರಿಗೆ ಏಕೆ ಆದ್ಯತೆ ನೀಡಲಾಗಿದೆ ಮತ್ತು ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ಏಕೆ ದುರ್ಬಲಗೊಳಿಸಿದೆ ಎಂದು ಕಾಂಗ್ರೆಸ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದೆ. ಧುಲೆ ಮತ್ತು ನಾಸಿಕ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಗಳಿಗೆ ಮುಂಚಿತವಾಗಿ ಕಾಂಗ್ರೆಸ್ ಈ ಪ್ರಶ್ನೆಗಳನ್ನು ಪ್ರಧಾನಿಯ ಮುಂದಿಟ್ಟಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅವರು X ನಲ್ಲಿ ಈ ಪ್ರಶ್ನೆಗಳನ್ನು ಹಾಕಿದ್ದಾರೆ. ಗುಜರಾತ್‌

ಕಳೆದ ವರ್ಷ ಡಿಸೆಂಬರ್‌ನಿಂದ ಮಹಾರಾಷ್ಟ್ರದ ಈರುಳ್ಳಿ ರಫ್ತಿನ ಮೇಲೆ ಮೋದಿ ಸರ್ಕಾರ ಹೇರಿದ ನಿರ್ಬಂಧದಿಂದ ಈರುಳ್ಳಿ ರೈತರು ತತ್ತರಿಸಿ ಹೋಗಿದ್ದಾರೆ. ಬೆಳೆಯ ಋತುವಿನಲ್ಲಿ ಹವಾಮಾನ ಮತ್ತು ನೀರಿನ ಬಿಕ್ಕಟ್ಟಿನಿಂದ ರೈತರು ತಮ್ಮ ಸಾಮಾನ್ಯ ಬೆಳೆಯಲ್ಲಿ ಕೇವಲ 50% ದಷ್ಟು ಮಾತ್ರ ಉತ್ಪಾದಿಸಲು ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಂತಿಮವಾಗಿ ಈರುಳ್ಳಿಯನ್ನು ಕೊಯ್ಲು ಮಾಡಿದಾಗ, ರೈತರು ಅನಿಯಂತ್ರಿತ ರಫ್ತು ನಿಷೇಧವನ್ನು ಎದುರಿಸಿದ್ದಾರೆ. ಈ ನಿಷೇಧ ಅವರಿಗೆ ಮಾರಕವಾಗಿ ಕಡಿಮೆ ಬೆಲೆಗೆ ಬೆಳೆಯನ್ನು ಮಾರಾಟ ಮಾಡಬೇಕಾಯಿತು. ಈ ಮೂಲಕ ಅವರು ಭಾರಿ ನಷ್ಟ ಅನುಭವಿಸಿದರು. ಆದರೆ ಕೇಂದ್ರ ಸರ್ಕಾರ ಇದನ್ನು ಮತ್ತಷ್ಟು ಹದಗೆಡಿಸಿದ್ದು, ಬಿಳಿ ಈರುಳ್ಳಿ ರಫ್ತು ಮಾಡಲು ಅವಕಾಶ ಮಾಡಿಕೊಟ್ಟಿತ್ತು. ಈ ಈರುಳ್ಳಿಯನ್ನು ಪ್ರಾಥಮಿಕವಾಗಿ ಗುಜರಾತ್‌ನಲ್ಲಿ ಬೆಳೆಯಲಾಗುತ್ತದೆ. ಆದರೆ ಕೆಂಪು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದ ರೈತರು ರಫ್ತು ನಿಷೇಧದಿಂದ ಎರಡು ತಿಂಗಳು ಹೊರಗುಳಿದರು. ಈ ನಿಷೇಧ ತೆರವು ಮಾಡಿದ್ದರೂ, ರಫ್ತಿನ ಮೇಲೆ 20% ಸುಂಕವು ಜಾರಿಯಲ್ಲಿದೆ” ಎಂದು ಅವರು ಹೇಳಿದ್ದಾರೆ. ಗುಜರಾತ್‌

“ಜೈವಿಕವಲ್ಲದ ಪ್ರಧಾನಿ ಅವರು ಈ ರೀತಿಯಾಗಿ ಪಕ್ಷಾಪಾತ ಮಾಡಿದರು ಎಂದು ವಿವರಿಸಬಹುದೇ? ಗುಜರಾತ್‌ನ ಈರುಳ್ಳಿ ಬೆಳೆಯುವ ರೈತರ ಪರವಾಗಿ ಕಾಳಜಿ ವ್ಯಕ್ತಪಡಿಸುವಾಗ, ಮಹಾರಾಷ್ಟ್ರದ ಈರುಳ್ಳಿ ರೈತರನ್ನು ಅವರು ಏಕೆ ನಿರ್ಲಕ್ಷಿಸಿದ್ದಾರೆ?” ಎಂದು ರಮೇಶ್ ಅವರು ತಮ್ಮ ಪೋಸ್ಟ್‌ನಲ್ಲಿ ಕೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ದುರ್ಬಲಗೊಳಿಸಿದೆ

2006 ರಲ್ಲಿ ಕಾಂಗ್ರೆಸ್ ಅರಣ್ಯ ಹಕ್ಕುಗಳ ಕಾಯಿದೆ (ಎಫ್‌ಆರ್‌ಎ) ಅನ್ನು ಅಂಗೀಕರಿಸಿತು, ಇದು ಆದಿವಾಸಿ ಮತ್ತು ಅರಣ್ಯ-ವಾಸಿಸುವ ಸಮುದಾಯಗಳಿಗೆ ತಮ್ಮದೇ ಆದ ಕಾಡುಗಳನ್ನು ನಿರ್ವಹಿಸಲು ಕಾನೂನು ಹಕ್ಕುಗಳನ್ನು ನೀಡಿತು ಎಂದು ರಮೇಶ್ ಹೇಳಿದ್ದಾರೆ. ಆದರೆ ಈ ಅರಣ್ಯ ಹಕ್ಕು ಕಾಯ್ದೆ (ಎಫ್‌ಆರ್‌ಎ) ಅನುಷ್ಠಾನಕ್ಕೆ ಬಿಜೆಪಿ ಸರ್ಕಾರ ಅಡ್ಡಿಪಡಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಕಾಯ್ದೆಗೆ ಅಡ್ಡಿಪಡಿಸಿದ ಕಾರಣಕ್ಕೆ ಲಕ್ಷಾಂತರ ಆದಿವಾಸಿಗಳು ಅದರ ಪ್ರಯೋಜನಗಳಿಂದ ವಂಚಿತರಾಗಿದ್ದಾರೆ. ಅವರು ಸಲ್ಲಿಸಿದ 401, 046 ವೈಯಕ್ತಿಕ ಹಕ್ಕುಗಳಲ್ಲಿ ಕೇವಲ 52% ವನ್ನು ಮಾತ್ರ ಅನುಮೋದಿಸಲಾಗಿದೆ ಮತ್ತು ಸಮುದಾಯ ಹಕ್ಕುಗಳಿಗೆ ಅರ್ಹವಾದ 50,045 ಚದರ ಕಿಮೀಗಳಲ್ಲಿ ಕೇವಲ 23.5% ದಷ್ಟು (11,769 ಚದರ ಕಿಮೀ) ಭೂಮಿ ಹಕ್ಕುಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಆದಿವಾಸಿ ಸಮುದಾಯಗಳಿಗೆ ಅವರ ಹಕ್ಕುಗಳನ್ನು ಒದಗಿಸಲು ಏಕೆ ವಿಫಲವಾಗಿದೆ?” ರಮೇಶ್ ಕೇಳಿದ್ದು, ನಾಸಿಕ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮಹಾಯುತಿ ಸರ್ಕಾರ ಏಕೆ ಚುನಾವಣೆ ನಡೆಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...