Homeಮುಖಪುಟಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ - ಪ್ರಧಾನಿಗೆ ಕಾಂಗ್ರೆಸ್...

ಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ – ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರದ ಈರುಳ್ಳಿ ಬೆಳೆಯುವ ರೈತರಿಗಿಂತ ಗುಜರಾತ್‌ನ ಬಿಳಿ ಈರುಳ್ಳಿ ರೈತರಿಗೆ ಏಕೆ ಆದ್ಯತೆ ನೀಡಲಾಗಿದೆ ಮತ್ತು ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ಏಕೆ ದುರ್ಬಲಗೊಳಿಸಿದೆ ಎಂದು ಕಾಂಗ್ರೆಸ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದೆ. ಧುಲೆ ಮತ್ತು ನಾಸಿಕ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಗಳಿಗೆ ಮುಂಚಿತವಾಗಿ ಕಾಂಗ್ರೆಸ್ ಈ ಪ್ರಶ್ನೆಗಳನ್ನು ಪ್ರಧಾನಿಯ ಮುಂದಿಟ್ಟಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅವರು X ನಲ್ಲಿ ಈ ಪ್ರಶ್ನೆಗಳನ್ನು ಹಾಕಿದ್ದಾರೆ. ಗುಜರಾತ್‌

ಕಳೆದ ವರ್ಷ ಡಿಸೆಂಬರ್‌ನಿಂದ ಮಹಾರಾಷ್ಟ್ರದ ಈರುಳ್ಳಿ ರಫ್ತಿನ ಮೇಲೆ ಮೋದಿ ಸರ್ಕಾರ ಹೇರಿದ ನಿರ್ಬಂಧದಿಂದ ಈರುಳ್ಳಿ ರೈತರು ತತ್ತರಿಸಿ ಹೋಗಿದ್ದಾರೆ. ಬೆಳೆಯ ಋತುವಿನಲ್ಲಿ ಹವಾಮಾನ ಮತ್ತು ನೀರಿನ ಬಿಕ್ಕಟ್ಟಿನಿಂದ ರೈತರು ತಮ್ಮ ಸಾಮಾನ್ಯ ಬೆಳೆಯಲ್ಲಿ ಕೇವಲ 50% ದಷ್ಟು ಮಾತ್ರ ಉತ್ಪಾದಿಸಲು ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಂತಿಮವಾಗಿ ಈರುಳ್ಳಿಯನ್ನು ಕೊಯ್ಲು ಮಾಡಿದಾಗ, ರೈತರು ಅನಿಯಂತ್ರಿತ ರಫ್ತು ನಿಷೇಧವನ್ನು ಎದುರಿಸಿದ್ದಾರೆ. ಈ ನಿಷೇಧ ಅವರಿಗೆ ಮಾರಕವಾಗಿ ಕಡಿಮೆ ಬೆಲೆಗೆ ಬೆಳೆಯನ್ನು ಮಾರಾಟ ಮಾಡಬೇಕಾಯಿತು. ಈ ಮೂಲಕ ಅವರು ಭಾರಿ ನಷ್ಟ ಅನುಭವಿಸಿದರು. ಆದರೆ ಕೇಂದ್ರ ಸರ್ಕಾರ ಇದನ್ನು ಮತ್ತಷ್ಟು ಹದಗೆಡಿಸಿದ್ದು, ಬಿಳಿ ಈರುಳ್ಳಿ ರಫ್ತು ಮಾಡಲು ಅವಕಾಶ ಮಾಡಿಕೊಟ್ಟಿತ್ತು. ಈ ಈರುಳ್ಳಿಯನ್ನು ಪ್ರಾಥಮಿಕವಾಗಿ ಗುಜರಾತ್‌ನಲ್ಲಿ ಬೆಳೆಯಲಾಗುತ್ತದೆ. ಆದರೆ ಕೆಂಪು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದ ರೈತರು ರಫ್ತು ನಿಷೇಧದಿಂದ ಎರಡು ತಿಂಗಳು ಹೊರಗುಳಿದರು. ಈ ನಿಷೇಧ ತೆರವು ಮಾಡಿದ್ದರೂ, ರಫ್ತಿನ ಮೇಲೆ 20% ಸುಂಕವು ಜಾರಿಯಲ್ಲಿದೆ” ಎಂದು ಅವರು ಹೇಳಿದ್ದಾರೆ. ಗುಜರಾತ್‌

“ಜೈವಿಕವಲ್ಲದ ಪ್ರಧಾನಿ ಅವರು ಈ ರೀತಿಯಾಗಿ ಪಕ್ಷಾಪಾತ ಮಾಡಿದರು ಎಂದು ವಿವರಿಸಬಹುದೇ? ಗುಜರಾತ್‌ನ ಈರುಳ್ಳಿ ಬೆಳೆಯುವ ರೈತರ ಪರವಾಗಿ ಕಾಳಜಿ ವ್ಯಕ್ತಪಡಿಸುವಾಗ, ಮಹಾರಾಷ್ಟ್ರದ ಈರುಳ್ಳಿ ರೈತರನ್ನು ಅವರು ಏಕೆ ನಿರ್ಲಕ್ಷಿಸಿದ್ದಾರೆ?” ಎಂದು ರಮೇಶ್ ಅವರು ತಮ್ಮ ಪೋಸ್ಟ್‌ನಲ್ಲಿ ಕೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ದುರ್ಬಲಗೊಳಿಸಿದೆ

2006 ರಲ್ಲಿ ಕಾಂಗ್ರೆಸ್ ಅರಣ್ಯ ಹಕ್ಕುಗಳ ಕಾಯಿದೆ (ಎಫ್‌ಆರ್‌ಎ) ಅನ್ನು ಅಂಗೀಕರಿಸಿತು, ಇದು ಆದಿವಾಸಿ ಮತ್ತು ಅರಣ್ಯ-ವಾಸಿಸುವ ಸಮುದಾಯಗಳಿಗೆ ತಮ್ಮದೇ ಆದ ಕಾಡುಗಳನ್ನು ನಿರ್ವಹಿಸಲು ಕಾನೂನು ಹಕ್ಕುಗಳನ್ನು ನೀಡಿತು ಎಂದು ರಮೇಶ್ ಹೇಳಿದ್ದಾರೆ. ಆದರೆ ಈ ಅರಣ್ಯ ಹಕ್ಕು ಕಾಯ್ದೆ (ಎಫ್‌ಆರ್‌ಎ) ಅನುಷ್ಠಾನಕ್ಕೆ ಬಿಜೆಪಿ ಸರ್ಕಾರ ಅಡ್ಡಿಪಡಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಕಾಯ್ದೆಗೆ ಅಡ್ಡಿಪಡಿಸಿದ ಕಾರಣಕ್ಕೆ ಲಕ್ಷಾಂತರ ಆದಿವಾಸಿಗಳು ಅದರ ಪ್ರಯೋಜನಗಳಿಂದ ವಂಚಿತರಾಗಿದ್ದಾರೆ. ಅವರು ಸಲ್ಲಿಸಿದ 401, 046 ವೈಯಕ್ತಿಕ ಹಕ್ಕುಗಳಲ್ಲಿ ಕೇವಲ 52% ವನ್ನು ಮಾತ್ರ ಅನುಮೋದಿಸಲಾಗಿದೆ ಮತ್ತು ಸಮುದಾಯ ಹಕ್ಕುಗಳಿಗೆ ಅರ್ಹವಾದ 50,045 ಚದರ ಕಿಮೀಗಳಲ್ಲಿ ಕೇವಲ 23.5% ದಷ್ಟು (11,769 ಚದರ ಕಿಮೀ) ಭೂಮಿ ಹಕ್ಕುಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಆದಿವಾಸಿ ಸಮುದಾಯಗಳಿಗೆ ಅವರ ಹಕ್ಕುಗಳನ್ನು ಒದಗಿಸಲು ಏಕೆ ವಿಫಲವಾಗಿದೆ?” ರಮೇಶ್ ಕೇಳಿದ್ದು, ನಾಸಿಕ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮಹಾಯುತಿ ಸರ್ಕಾರ ಏಕೆ ಚುನಾವಣೆ ನಡೆಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...