Homeಮುಖಪುಟಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ - ಪ್ರಧಾನಿಗೆ ಕಾಂಗ್ರೆಸ್...

ಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ – ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರದ ಈರುಳ್ಳಿ ಬೆಳೆಯುವ ರೈತರಿಗಿಂತ ಗುಜರಾತ್‌ನ ಬಿಳಿ ಈರುಳ್ಳಿ ರೈತರಿಗೆ ಏಕೆ ಆದ್ಯತೆ ನೀಡಲಾಗಿದೆ ಮತ್ತು ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ಏಕೆ ದುರ್ಬಲಗೊಳಿಸಿದೆ ಎಂದು ಕಾಂಗ್ರೆಸ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದೆ. ಧುಲೆ ಮತ್ತು ನಾಸಿಕ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಗಳಿಗೆ ಮುಂಚಿತವಾಗಿ ಕಾಂಗ್ರೆಸ್ ಈ ಪ್ರಶ್ನೆಗಳನ್ನು ಪ್ರಧಾನಿಯ ಮುಂದಿಟ್ಟಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅವರು X ನಲ್ಲಿ ಈ ಪ್ರಶ್ನೆಗಳನ್ನು ಹಾಕಿದ್ದಾರೆ. ಗುಜರಾತ್‌

ಕಳೆದ ವರ್ಷ ಡಿಸೆಂಬರ್‌ನಿಂದ ಮಹಾರಾಷ್ಟ್ರದ ಈರುಳ್ಳಿ ರಫ್ತಿನ ಮೇಲೆ ಮೋದಿ ಸರ್ಕಾರ ಹೇರಿದ ನಿರ್ಬಂಧದಿಂದ ಈರುಳ್ಳಿ ರೈತರು ತತ್ತರಿಸಿ ಹೋಗಿದ್ದಾರೆ. ಬೆಳೆಯ ಋತುವಿನಲ್ಲಿ ಹವಾಮಾನ ಮತ್ತು ನೀರಿನ ಬಿಕ್ಕಟ್ಟಿನಿಂದ ರೈತರು ತಮ್ಮ ಸಾಮಾನ್ಯ ಬೆಳೆಯಲ್ಲಿ ಕೇವಲ 50% ದಷ್ಟು ಮಾತ್ರ ಉತ್ಪಾದಿಸಲು ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಂತಿಮವಾಗಿ ಈರುಳ್ಳಿಯನ್ನು ಕೊಯ್ಲು ಮಾಡಿದಾಗ, ರೈತರು ಅನಿಯಂತ್ರಿತ ರಫ್ತು ನಿಷೇಧವನ್ನು ಎದುರಿಸಿದ್ದಾರೆ. ಈ ನಿಷೇಧ ಅವರಿಗೆ ಮಾರಕವಾಗಿ ಕಡಿಮೆ ಬೆಲೆಗೆ ಬೆಳೆಯನ್ನು ಮಾರಾಟ ಮಾಡಬೇಕಾಯಿತು. ಈ ಮೂಲಕ ಅವರು ಭಾರಿ ನಷ್ಟ ಅನುಭವಿಸಿದರು. ಆದರೆ ಕೇಂದ್ರ ಸರ್ಕಾರ ಇದನ್ನು ಮತ್ತಷ್ಟು ಹದಗೆಡಿಸಿದ್ದು, ಬಿಳಿ ಈರುಳ್ಳಿ ರಫ್ತು ಮಾಡಲು ಅವಕಾಶ ಮಾಡಿಕೊಟ್ಟಿತ್ತು. ಈ ಈರುಳ್ಳಿಯನ್ನು ಪ್ರಾಥಮಿಕವಾಗಿ ಗುಜರಾತ್‌ನಲ್ಲಿ ಬೆಳೆಯಲಾಗುತ್ತದೆ. ಆದರೆ ಕೆಂಪು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದ ರೈತರು ರಫ್ತು ನಿಷೇಧದಿಂದ ಎರಡು ತಿಂಗಳು ಹೊರಗುಳಿದರು. ಈ ನಿಷೇಧ ತೆರವು ಮಾಡಿದ್ದರೂ, ರಫ್ತಿನ ಮೇಲೆ 20% ಸುಂಕವು ಜಾರಿಯಲ್ಲಿದೆ” ಎಂದು ಅವರು ಹೇಳಿದ್ದಾರೆ. ಗುಜರಾತ್‌

“ಜೈವಿಕವಲ್ಲದ ಪ್ರಧಾನಿ ಅವರು ಈ ರೀತಿಯಾಗಿ ಪಕ್ಷಾಪಾತ ಮಾಡಿದರು ಎಂದು ವಿವರಿಸಬಹುದೇ? ಗುಜರಾತ್‌ನ ಈರುಳ್ಳಿ ಬೆಳೆಯುವ ರೈತರ ಪರವಾಗಿ ಕಾಳಜಿ ವ್ಯಕ್ತಪಡಿಸುವಾಗ, ಮಹಾರಾಷ್ಟ್ರದ ಈರುಳ್ಳಿ ರೈತರನ್ನು ಅವರು ಏಕೆ ನಿರ್ಲಕ್ಷಿಸಿದ್ದಾರೆ?” ಎಂದು ರಮೇಶ್ ಅವರು ತಮ್ಮ ಪೋಸ್ಟ್‌ನಲ್ಲಿ ಕೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ದುರ್ಬಲಗೊಳಿಸಿದೆ

2006 ರಲ್ಲಿ ಕಾಂಗ್ರೆಸ್ ಅರಣ್ಯ ಹಕ್ಕುಗಳ ಕಾಯಿದೆ (ಎಫ್‌ಆರ್‌ಎ) ಅನ್ನು ಅಂಗೀಕರಿಸಿತು, ಇದು ಆದಿವಾಸಿ ಮತ್ತು ಅರಣ್ಯ-ವಾಸಿಸುವ ಸಮುದಾಯಗಳಿಗೆ ತಮ್ಮದೇ ಆದ ಕಾಡುಗಳನ್ನು ನಿರ್ವಹಿಸಲು ಕಾನೂನು ಹಕ್ಕುಗಳನ್ನು ನೀಡಿತು ಎಂದು ರಮೇಶ್ ಹೇಳಿದ್ದಾರೆ. ಆದರೆ ಈ ಅರಣ್ಯ ಹಕ್ಕು ಕಾಯ್ದೆ (ಎಫ್‌ಆರ್‌ಎ) ಅನುಷ್ಠಾನಕ್ಕೆ ಬಿಜೆಪಿ ಸರ್ಕಾರ ಅಡ್ಡಿಪಡಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಕಾಯ್ದೆಗೆ ಅಡ್ಡಿಪಡಿಸಿದ ಕಾರಣಕ್ಕೆ ಲಕ್ಷಾಂತರ ಆದಿವಾಸಿಗಳು ಅದರ ಪ್ರಯೋಜನಗಳಿಂದ ವಂಚಿತರಾಗಿದ್ದಾರೆ. ಅವರು ಸಲ್ಲಿಸಿದ 401, 046 ವೈಯಕ್ತಿಕ ಹಕ್ಕುಗಳಲ್ಲಿ ಕೇವಲ 52% ವನ್ನು ಮಾತ್ರ ಅನುಮೋದಿಸಲಾಗಿದೆ ಮತ್ತು ಸಮುದಾಯ ಹಕ್ಕುಗಳಿಗೆ ಅರ್ಹವಾದ 50,045 ಚದರ ಕಿಮೀಗಳಲ್ಲಿ ಕೇವಲ 23.5% ದಷ್ಟು (11,769 ಚದರ ಕಿಮೀ) ಭೂಮಿ ಹಕ್ಕುಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಆದಿವಾಸಿ ಸಮುದಾಯಗಳಿಗೆ ಅವರ ಹಕ್ಕುಗಳನ್ನು ಒದಗಿಸಲು ಏಕೆ ವಿಫಲವಾಗಿದೆ?” ರಮೇಶ್ ಕೇಳಿದ್ದು, ನಾಸಿಕ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮಹಾಯುತಿ ಸರ್ಕಾರ ಏಕೆ ಚುನಾವಣೆ ನಡೆಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...